ಯೋಧ ನಿರಂಜನ್ ಅವಹೇಳನ ಮಾಡಿದವನಿಗೆ ಪೊಲೀಸ್ ಆತಿಥ್ಯ
ಮಲಪ್ಪುರಂ, ಜನವರಿ, 05: ಪಂಜಾಬ್ ನ ಪಠಾಣ್ ಕೋಟ್ ನಲ್ಲಿ ವೀರ ಮರಣ ಅಪ್ಪಿದ ಯೋಧ ಲೆಫ್ಟಿನೆಂಟ್ ಕರ್ನಲ್ ನಿರಂಜನ್ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಅವಮಾನಿಸಿ ಕಮೆಂಟ್ ಹಾಕಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಕೇರಳ ಮಲಪ್ಪುರಂ ನಿವಾಸಿ ಅನ್ವರ್ ಸಾದಿಕ್(24) ಎಂಬಾತನನ್ನು ಬಂಧಿಸಲಾಗಿದೆ.
ಪಠಾಣ್ ಕೋಟ್ ನ ವಾಯನೆಲೆಯಲ್ಲಿ ಭಾನುವಾರ ಗ್ರೆನೇಡ್ ಸ್ಫೋಟಗೊಂಡು ನಿರಂಜನ್ ಉಗ್ರಗಾಮಿಗಳ ಕುತಂತ್ರಕ್ಕೆ ಬಲಿಯಾಗಿದ್ದರು. ಧೀರ ಯೋಧರಿಗಾಗಿ ಇಡೀ ದೇಶವೇ ಗೌರವ ಸಲ್ಲಿಸುತ್ತಿದ್ದರೆ, ಮಲಪ್ಪುರಂನ ಯುವಕ ಪುಂಡಾಟ ತೋರಿಸಿದ್ದ.[ಎಂಥಾ ಘೋರ ವಿಧಿ ಲಿಖಿತ,ನಿರಂಜನ್ ಸಾವಿನ ಆಘಾತ]

ಮಲಪ್ಪುರಂನ ಕೋಡುರ್ ನಿವಾಸಿಯನ್ನು ಕೋಝಿಕೋಡ್ ಅಸಿಸ್ಟೆಂಟ್ ಪೊಲೀಸ್ ಕಮೀಷನರ್ ಜೋಸೈ ಚೆರಿಯನ್ ನೇತೃತ್ವದ ಪೊಲೀಸ್ ತಂಡ ಬಂಧಿಸಿ ಆತನ ವಿರುದ್ಧ ಸೆಕ್ಷನ್ 124, ಎ ಕಲಂ ಅನ್ವಯ ದೂರು ದಾಖಲಿಸಿಕೊಂಡಿದೆ.
ಹುತಾತ್ಮ ಯೋಧ ನಿರಂಜನ್ ಕುರಿತು ಅನ್ವರ್ ತನ್ನ ಫೇಸ್ ಬುಕ್ ಪೇಜ್ ನಲ್ಲಿ, ಅವಮಾನಕರ ರೀತಿಯಲ್ಲಿ ಮಲಯಾಳಂನಲ್ಲಿ ಕಮೆಂಟ್ ಹಾಕಿದ್ದ. ಇದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡತೊಡಗಿತ್ತು.[ಪಠಾಣ್ ಕೋಟ್ ಉಗ್ರರ ದಾಳಿ ಟೈಮ್ ಲೈನ್]
ಅನ್ವರ್ ಸಾದಿಕ್ ತಾನು ಮಲಯಾಳಂ ದೈನಿಕದಲ್ಲಿ ಕಾರ್ಯನಿರ್ವಹಿಸುದಾಗಿ ಬರೆದುಕೊಂಡಿದ್ದ. ಪೊಲೀಸರು ಪತ್ರಿಕಾ ಕಚೇರಿಯನ್ನು ಸಂಪರ್ಕಿಸಿ ಮಾಹಿತಿ ಕಲೆಹಾಕಿದಾಗ, ಆ ಹೆಸರಿನ ಯಾವ ವ್ಯಕ್ತಿಯೂ ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿಲ್ಲ ಎಂದಿದ್ದರು. ನಂತರ ಪತ್ರಿಕಾ ಕಚೇರಿಯ ಆಡಳಿತ ಮಂಡಳಿಯೇ ಆತನ ಬಗ್ಗೆ ಪೂರ್ಣವಾಗಿ ತನಿಖೆ ಕೈಕೊಳ್ಳುವಂತೆ ಮನವಿ ಮಾಡಿತ್ತು. ಯೋಧರ ಬಗ್ಗೆ, ಯೋಧರ ಬಲಿದಾನದ ಬಗ್ಗೆ ಕ್ಷುಲ್ಲಕವಾಗಿ ಮಾತನಾಡಿದ್ದವ ಸದ್ಯ ಪೊಲೀಸರ ವಶದಲ್ಲಿದ್ದಾನೆ.
-
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ












Click it and Unblock the Notifications