ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯೋಧ ನಿರಂಜನ್ ಅವಹೇಳನ ಮಾಡಿದವನಿಗೆ ಪೊಲೀಸ್ ಆತಿಥ್ಯ

|
Google Oneindia Kannada News

ಮಲಪ್ಪುರಂ, ಜನವರಿ, 05: ಪಂಜಾಬ್ ನ ಪಠಾಣ್ ಕೋಟ್ ನಲ್ಲಿ ವೀರ ಮರಣ ಅಪ್ಪಿದ ಯೋಧ ಲೆಫ್ಟಿನೆಂಟ್ ಕರ್ನಲ್ ನಿರಂಜನ್ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಅವಮಾನಿಸಿ ಕಮೆಂಟ್ ಹಾಕಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಕೇರಳ ಮಲಪ್ಪುರಂ ನಿವಾಸಿ ಅನ್ವರ್ ಸಾದಿಕ್(24) ಎಂಬಾತನನ್ನು ಬಂಧಿಸಲಾಗಿದೆ.

ಪಠಾಣ್ ಕೋಟ್ ನ ವಾಯನೆಲೆಯಲ್ಲಿ ಭಾನುವಾರ ಗ್ರೆನೇಡ್ ಸ್ಫೋಟಗೊಂಡು ನಿರಂಜನ್ ಉಗ್ರಗಾಮಿಗಳ ಕುತಂತ್ರಕ್ಕೆ ಬಲಿಯಾಗಿದ್ದರು. ಧೀರ ಯೋಧರಿಗಾಗಿ ಇಡೀ ದೇಶವೇ ಗೌರವ ಸಲ್ಲಿಸುತ್ತಿದ್ದರೆ, ಮಲಪ್ಪುರಂನ ಯುವಕ ಪುಂಡಾಟ ತೋರಿಸಿದ್ದ.[ಎಂಥಾ ಘೋರ ವಿಧಿ ಲಿಖಿತ,ನಿರಂಜನ್ ಸಾವಿನ ಆಘಾತ]

kerala

ಮಲಪ್ಪುರಂನ ಕೋಡುರ್ ನಿವಾಸಿಯನ್ನು ಕೋಝಿಕೋಡ್ ಅಸಿಸ್ಟೆಂಟ್ ಪೊಲೀಸ್ ಕಮೀಷನರ್ ಜೋಸೈ ಚೆರಿಯನ್ ನೇತೃತ್ವದ ಪೊಲೀಸ್ ತಂಡ ಬಂಧಿಸಿ ಆತನ ವಿರುದ್ಧ ಸೆಕ್ಷನ್ 124, ಎ ಕಲಂ ಅನ್ವಯ ದೂರು ದಾಖಲಿಸಿಕೊಂಡಿದೆ.

ಹುತಾತ್ಮ ಯೋಧ ನಿರಂಜನ್ ಕುರಿತು ಅನ್ವರ್ ತನ್ನ ಫೇಸ್ ಬುಕ್ ಪೇಜ್ ನಲ್ಲಿ, ಅವಮಾನಕರ ರೀತಿಯಲ್ಲಿ ಮಲಯಾಳಂನಲ್ಲಿ ಕಮೆಂಟ್ ಹಾಕಿದ್ದ. ಇದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡತೊಡಗಿತ್ತು.[ಪಠಾಣ್ ಕೋಟ್ ಉಗ್ರರ ದಾಳಿ ಟೈಮ್ ಲೈನ್]

ಅನ್ವರ್ ಸಾದಿಕ್ ತಾನು ಮಲಯಾಳಂ ದೈನಿಕದಲ್ಲಿ ಕಾರ್ಯನಿರ್ವಹಿಸುದಾಗಿ ಬರೆದುಕೊಂಡಿದ್ದ. ಪೊಲೀಸರು ಪತ್ರಿಕಾ ಕಚೇರಿಯನ್ನು ಸಂಪರ್ಕಿಸಿ ಮಾಹಿತಿ ಕಲೆಹಾಕಿದಾಗ, ಆ ಹೆಸರಿನ ಯಾವ ವ್ಯಕ್ತಿಯೂ ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿಲ್ಲ ಎಂದಿದ್ದರು. ನಂತರ ಪತ್ರಿಕಾ ಕಚೇರಿಯ ಆಡಳಿತ ಮಂಡಳಿಯೇ ಆತನ ಬಗ್ಗೆ ಪೂರ್ಣವಾಗಿ ತನಿಖೆ ಕೈಕೊಳ್ಳುವಂತೆ ಮನವಿ ಮಾಡಿತ್ತು. ಯೋಧರ ಬಗ್ಗೆ, ಯೋಧರ ಬಲಿದಾನದ ಬಗ್ಗೆ ಕ್ಷುಲ್ಲಕವಾಗಿ ಮಾತನಾಡಿದ್ದವ ಸದ್ಯ ಪೊಲೀಸರ ವಶದಲ್ಲಿದ್ದಾನೆ.

English summary
This is Shocking. special investigation team of police arrested a Malappuram native, who posted an insulting comment about the Lieutenant colonel Niranjan E Kumar, who was killed in a grenade blast at Pathankot in Punjab on Sunday. The accused Anwar Sadhiq, native of Kodur near Malappuram town was arrested by Kerala Police.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X