ಕಾಂಗ್ರೆಸ್​ ಕಚೇರಿಯಲ್ಲಿ ಯುವಕನ ಶವ ಪತ್ತೆ

ಕಾಂಗ್ರೆಸ್ ಪಕ್ಷದ ಪ್ರತಿಭಟನೆಯಲ್ಲಿ ಸೇರಲು ಗೋರಖ್‌ಪುರದಿಂದ ಲಕ್ನೋಗೆ ಬಂದಿದ್ದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಈ ವ್ಯಕ್ತಿಯನ್ನು ಪ್ರಭಾತ್ ಕುಮಾರ್ ಪಾಂಡೆ (31) ಎಂದು ಗುರುತಿಸಲಾಗಿದ್ದು, ಗೋರಖ್‌ಪುರದ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಎಂದು ತಿಳಿದು ಬಂದಿದೆ.

ನಿರುದ್ಯೋಗ ಮತ್ತು ಹಣದುಬ್ಬರ ಸೇರಿದಂತೆ ಹಲವು ಸಮಸ್ಯೆಗಳಿಗೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ಗೋರಖ್‌ಪುರದ ನಿವಾಸಿ ಪ್ರಭಾತ್ ಪಾಂಡೆ ಅವರು ಕಾಂಗ್ರೆಸ್ ಕಚೇರಿಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ನಂತರ ಅವರನ್ನು ಸಿವಿಲ್ ಆಸ್ಪತ್ರೆಗೆ ಕರೆತರಲಾಯಿತು, ಆದರೆ ಅಷ್ಟರಲ್ಲಿ ಆ ಯುವಕ ಸಾವನ್ನಪ್ಪಿದ್ದರು.

Man found dead in Lucknow s Congress office party alleges police brutality

ಪ್ರಭಾತ್ ಪಾಂಡೆ ಸಾವಿನ ಸುದ್ದಿ ತಿಳಿದ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಅಜಯ್ ರೈ ಮತ್ತು ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಆಸ್ಪತ್ರೆಗೆ ಆಗಮಿಸಿದರು. ಪ್ರಭಾತ್ ಪಾಂಡೆ ಸಾವಿಗೆ ನಿಜವಾದ ಕಾರಣ ಮರಣೋತ್ತರ ಪರೀಕ್ಷೆ ನಂತರ ತಿಳಿಯಲಿದೆ ಎಂದು ಬ್ರಜೇಶ್ ಪಾಠಕ್ ಹೇಳಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷ ಅಜಯ್ ರೈ, ಸರ್ಕಾರ ಈ ಸಂಪೂರ್ಣ ಪ್ರಕರಣದ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

ಪ್ರಭಾತ್ ಪಾಂಡೆ ಚಿಕ್ಕಪ್ಪ ಮನೀಶ್ ಪಾಂಡೆ ಹುಸೇಂಗಂಜ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪ್ರಭಾತ್‌ನನ್ನು ಕೊಲೆ ಮಾಡಲಾಗಿದೆ ಎಂದು ಹೇಳಿದ್ದಾರೆ. ಬುಧವಾರ ಸಂಜೆ 4.15ರ ಸುಮಾರಿಗೆ ಕಾಂಗ್ರೆಸ್ ಕಚೇರಿಯಲ್ಲಿ ಪ್ರಭಾತ್ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದಾರೆ ಎಂದು ಕಾಂಗ್ರೆಸ್ ಕಚೇರಿಯಿಂದ ಕರೆ ಬಂದಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಎರಡು ಗಂಟೆಗೂ ಹೆಚ್ಚು ಕಾಲ ಅಲ್ಲೇ ಮಲಗಿದ್ದಾರೆ ಎಂದು ಕರೆ ಮಾಡಿದವರು ಹೇಳಿದರು. ಅದಾದ ನಂತರ, ನಾನು ತಕ್ಷಣ ನನ್ನ ಸಂಬಂಧಿ ಸಂದೀಪ್‌ನನ್ನು ಕಚೇರಿಗೆ ಕಳುಹಿಸಿದೆ, ಅಲ್ಲಿ ಅವನು ಪ್ರಭಾತ್‌ನನ್ನು ನೋಡಿದನು ಮತ್ತು ಅವನ ಕಾಲುಗಳು ತಣ್ಣಗಾಗಿವೆ ಎಂದು ನನಗೆ ಹೇಳಿದನು. ನಂತರ ಅವನನ್ನು ಕಾರಿನಲ್ಲಿ ಸಿವಿಲ್ ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ಅವನು ಸತ್ತಿದ್ದಾನೆ ಎಂದು ತಿಳಿದು ಬಂದಿದೆ ಎಂದು ಪ್ರಭಾತ್ ಪಾಂಡೆ ಚಿಕ್ಕಪ್ಪ ಮನೀಶ್ ಪಾಂಡೆ ಹೇಳಿದರು.

ಪ್ರಭಾತ್ ಕಾಂಗ್ರೆಸ್ ಕಚೇರಿಗೆ ಹೇಗೆ ಬಂದರು ಎಂಬುದು ಗೊತ್ತಿಲ್ಲ. ಅವನಿಗೆ ಯಾವುದೇ ಕಾಯಿಲೆ ಇರಲಿಲ್ಲ, ಆದರೆ ಅವನಿಗೆ ಏನಾದರೂ ಅಹಿತಕರ ಘಟನೆ ಸಂಭವಿಸಿದೆ ಎಂದು ಅನಿಸುತ್ತದೆ. ಅವನನ್ನು ಕೊಲೆ ಮಾಡಿರಬಹುದು ಎಂದು ನಾನು ಭಾವಿಸುತ್ತೇನೆ ಎಂದು ಮನೀಶ್ ದೂರಿನಲ್ಲಿ ತಿಳಿಸಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪ್ರತಿಭಟನಾಕಾರರ ಮೇಲೆ ಯಾವುದೇ ಬಲ ಪ್ರಯೋಗ ಮಾಡಿಲ್ಲ ಎಂದು ಲಕ್ನೋ ಪೊಲೀಸರು ತಿಳಿಸಿದ್ದಾರೆ. ಮೃತರ ಮರಣೋತ್ತರ ಪರೀಕ್ಷೆಯನ್ನು ವೀಡಿಯೋಗ್ರಫಿ ಮೂಲಕ ನಡೆಸಲಾಗುವುದು ಮತ್ತು ಹೆಚ್ಚಿನ ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಉಪ ಪೊಲೀಸ್ ಕಮಿಷನರ್ (ಸೆಂಟ್ರಲ್ ಲಕ್ನೋ) ರವೀನಾ ತ್ಯಾಗಿ ಅವರು ಸುದ್ದಿ ಸಂಸ್ಥೆ ಪಿಟಿಐ ಮಾತನಾಡಿ, ಪ್ರಭಾತ್ ಅವರ ದೇಹದ ಮೇಲೆ ಯಾವುದೇ ಗುರುತುಗಳಿಲ್ಲ ಎಂದು ಹೇಳಿದ್ದಾರೆ. ಪೊಲೀಸರ ದೌರ್ಜನ್ಯಕ್ಕೆ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ಆರೋಪಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+