ಶಬರಿಮಲೆ ಮಹಿಳೆಯರಿಗೆ ಮುಕ್ತ: ಆತ್ಮಹತ್ಯೆಗೆ ಮುಂದಾದ ಅಯ್ಯಪ್ಪ ಭಕ್ತ
ಕೊಚ್ಚಿ, ಅ 2: ಶಬರಿಮಲೆ ದೇವಾಲಯಕ್ಕೆ ಮಹಿಳೆಯರ ಪ್ರವೇಶ ನಿಷಿದ್ದ ತೆರವುಗೊಳಿಸಿದ ಸರ್ವೋಚ್ಚ ನ್ಯಾಯಾಲದ ತೀರ್ಪಿನಿಂದ ಬೇಸತ್ತ ಅಯ್ಯಪ್ಪ ಭಕ್ತನೊಬ್ಬನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾನೆ. ಪೊಲೀಸರು ಈತನನ್ನು ಬಂಧಿಸಿದ್ದಾರೆ.
ಹಿಂದೂ ಸಂಘಟನೆಯೊಂದರ ಶ್ರೀರಾಜ್ ಎನ್ನುವ ಯುವಕ, ನ್ಯಾಯಾಲಯದ ತೀರ್ಪಿನಿಂದ ಬೇಸತ್ತಿದ್ದೇನೆ. ಹಾಗಾಗಿ ಕೊಚ್ಚಿಯ ಹೈಕೋರ್ಟ್ ವೃತ್ತದ ಬಳಿ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿರುವುದಾಗಿ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದ.
ಈ ಪೋಸ್ಟ್ ಸಾಕಷ್ಟು ವೈರಲ್ ಆದ ನಂತರ ಕಾರ್ಯಪ್ರವೃತ್ತರಾದ ಪೊಲೀಸರು, ಕೋರ್ಟ್ ವೃತ್ತದ ಬಳಿ ಬಂದೋಬಸ್ತ್ ಮಾಡಿದ್ದರು. ಸಾಮಾಜಿಕ ತಾಣದಲ್ಲಿ ಬರೆದಂತೆ, ಮಧ್ಯಾಹ್ನ 11.30ರ (ಅ 1) ಸುಮಾರಿಗೆ ಆತ್ಮಹತ್ಯೆ ಮಾಡಿಕೊಳ್ಳಲು ಸರ್ಕಲ್ ಬಳಿ ಬಂದ ಈತನನ್ನು ಪೊಲೀಸರು ಬಂಧಿಸಿದ್ದಾರೆ.

ವೈದ್ಯಕೀಯ ತಪಾಸಣೆ ನಡೆಸಿದ ನಂತರ, ಜೈಲಿಗೆ ಕರೆದುಕೊಂಡು ಹೋಗಿ ಶ್ರೀರಾಜ್ ನನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಸರ್ವೋಚ್ಚ ನ್ಯಾಯಾಲಯ ಮಹಿಳೆಯರಿಗೆ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯ ಪ್ರವೇಶಕ್ಕೆ ಅನುಮತಿ ನೀಡಿದ್ದು, ನಮ್ಮ ಸಂಪ್ರದಾಯದ ವಿರುದ್ದ ಎಂದು ಪೊಲೀಸರ ಬಳಿ ಯುವಕ ಬೇಸರ ವ್ಯಕ್ತಪಡಿಸಿದ್ದಾನೆ ಎಂದು ವರದಿಯಾಗಿದೆ.
ಕೇರಳದ ಪ್ರಸಿದ್ಧ ದೇವಾಲಯವಾದ ಶಬರಿಮಲೆಯ ಅಯ್ಯಪ್ಪ ದೇವಾಲಯಕ್ಕೆ ಮಹಿಳೆಯರ ಪ್ರವೇಶಕ್ಕೆ ಅನುಮತಿ ನೀಡಿ, ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿತ್ತು. ದೇವಸ್ಥಾನದ ಆಡಳಿತ ಮಂಡಳಿಯ ನಿಯಮಾವಳಿ ಪ್ರಕಾರ 10ರಿಂದ 50 ವರ್ಷ ವಯಸ್ಸಿನ ಮಹಿಳೆಯರು ದೇವಸ್ಥಾನದ ಆವರಣಕ್ಕೆ ಭೇಟಿ ನೀಡಲು ಅವಕಾಶವಿರಲಿಲ್ಲ.
ಋತುಮತಿಯಾಗುವ ವಯಸ್ಸಿನ ಹೆಣ್ಣುಮಕ್ಕಳು ದೇವಾಲಯದ ಆವರಣಕ್ಕೆ ಪ್ರವೇಶಿಸಿದರೆ ಮಂದಿರದ ಪಾವಿತ್ರ್ಯಕ್ಕೆ ಧಕ್ಕೆಯಾಗುತ್ತದೆ ಎಂಬುದು ದೇವಾಲಯದ ಆಡಳಿತ ಮಂಡಳಿಯ ವಾದವಾಗಿತ್ತು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications