ಎಐಎಂಐಎಂ ಪಕ್ಷದ ಕಚೇರಿಯಲ್ಲಿ ವ್ಯಕ್ತಿಯ ಹತ್ಯೆ
ಹೈದರಾಬಾದ್, ಡಿಸೆಂಬರ್ 19: ಹೈದರಾಬಾದ್ನ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಪಕ್ಷದ ಸ್ಥಳೀಯ ಕಾರ್ಪೊರೇಟರ್ ಕಚೇರಿಯಲ್ಲಿ 20ರ ವರ್ಷದ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ.
ಹೈದರಾಬಾದಿನ ಓಲ್ಡ್ ಸಿಟಿಯ ಲಲಿತಾ ಬಾಗ್ ಪ್ರದೇಶದಲ್ಲಿ ಕಚೇರಿ ಇದೆ. ಮೃತನನ್ನು ಮುರ್ತಾಜಾ ಅನಾಸ್ ಎಂದು ಗುರುತಿಸಲಾಗಿದ್ದು, ಆತ ಎಐಎಂಐಎಂ ಕಾರ್ಪೊರೇಟರ್ನ ಸೋದರಳಿಯ ಎನ್ನಲಾಗಿದೆ. ವ್ಯಕ್ತಿಯನ್ನು ಸ್ಥಳೀಯ ಓವೈಸಿ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಅವರು ಆಸ್ಪತ್ರೆಯಲ್ಲಿ ನಿಧನರಾದರು ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಸ್ಥಳದಲ್ಲಿದ್ದು, ಮುಂದಿನ ತನಿಖೆ ನಡೆಸುತ್ತಿದ್ದಾರೆ.
ತೆಲಂಗಾಣ ಹೈದರಾಬಾದ್ನ ಓಲ್ಡ್ ಸಿಟಿಯ ಲಲಿತಾ ಬಾಗ್ನಲ್ಲಿರುವ ಎಐಎಂಐಎಂ ಕಾರ್ಪೊರೇಟರ್ ಕಚೇರಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಎಐಎಂಐಎಂ ಕಾರ್ಪೊರೇಟರ್ ಸೋದರಳಿಯನ ಮೇಲೆ ಹಲ್ಲೆ ನಡೆಸಿದ್ದಾನೆ. ನಂತರ ಅವರು ಆಸ್ಪತ್ರೆಯಲ್ಲಿ ನಿಧನರಾದರು ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ತಿಳಿಸಿದೆ.

ಘಟನೆ ಬಗ್ಗೆ ಸಂತೋಷ್ ನಗರದ ಎಸಿಪಿ ಎಸ್ ರೆಡ್ಡಿ ಮಾತನಾಡಿ, "ಇಂದು ಸಂಜೆ ನಮಗೆ 22 ವರ್ಷದ ಹುಡುಗನ ಮೇಲೆ ಹಲ್ಲೆ ನಡೆದಿದೆ ಎಂಬ ಮಾಹಿತಿ ಬಂತ್ತು. ಬಳಿಕ ಬಾಲಕನನ್ನು ಓವೈಸಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು, ಅಲ್ಲಿ ಅವನು ಸಾವನ್ನಪ್ಪಿದನು. ಇಬ್ಬರು ವ್ಯಕ್ತಿಗಳು ದಾಳಿ ಮಾಡಿದ್ದಾರೆ ಎಂದು ಜನರು ನಮಗೆ ತಿಳಿಸಿದರು. ಅವನ ಮೇಲೆ ಹರಿತವಾದ ಚಾಕುವಿನಿಂದ ಹಲ್ಲೆ ನಡೆದಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
ಕೊಲೆಗೆ ಕಾರಣ ತಿಳಿದುಬಂದಿಲ್ಲ, ಮೃತನು ಬಂಜಾರ ಹಿಲ್ಸ್ನ ಖಾಸಗಿ ಕಾಲೇಜಿನಲ್ಲಿ ಓದುತ್ತಿದ್ದನು. ಸ್ನೇಹಿತರ ನಡುವಿನ ಜಗಳವೇ ಈ ಕೊಲೆಗೆ ಕಾರಣ ಎಂದು ಶಂಕಿಸಲಾಗಿದೆ. ಕಾರ್ಪೊರೇಟರ್ ಕಚೇರಿಯಲ್ಲಿದ್ದಾಗಲೇ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಆರು ಜನರು ಒಟ್ಟಾಗಿ ಮುರ್ತುಜಾ ಮೇಲೆ ಹಲ್ಲೆ ನಡೆಸಿದರು, ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡ ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಮೃತಪಟ್ಟಿದ್ದಾರೆ.
ಮಾಹಿತಿ ಪಡೆದ ದಕ್ಷಿಣ ವಲಯ ಡಿಸಿಪಿ ಪಿ ಸಾಯಿ ಚೈತನ್ಯ ಹಾಗೂ ಭವಾನಿನಗರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಸಂಶೋಧನಾ ತಂಡವನ್ನು ಸಹ ಸೇವೆಗೆ ಒತ್ತಲಾಯಿತು. ಆರೋಪಿಗಳನ್ನು ಪತ್ತೆಹಚ್ಚಲು ಪೊಲೀಸ್ ತಂಡಗಳು ಪ್ರದೇಶದಲ್ಲಿನ ಸಿಸಿಟಿವಿ ದೃಶ್ಯಗಳನ್ನು ಸ್ಕ್ಯಾನ್ ಮಾಡುತ್ತಿವೆ. ಹೆಚ್ಚಿನ ತನಿಖೆ ನಡೆಯುತ್ತಿದೆ.
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ












Click it and Unblock the Notifications