ಸಾಮಾಜಿಕ ಜಾಲತಾಣವೇ ಪುಣೆಯ ದಂಪತಿಗೆ ಆಯಿತು ನೇಣಿನ ಕುಣಿಕೆ
ಪುಣೆ, ಜನವರಿ 20: ಸಾಮಾಜಿಕ ಜಾಲತಾಣದಲ್ಲಿ ಚಟುವಟಿಕೆಯಿಂದ ಇದ್ದ ಪತ್ನಿಯನ್ನು ಕೊಂದ ಟೆಕಿ ತಾನು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಣೆಯಲ್ಲಿ ನಡೆದಿದೆ. 34 ವರ್ಷದ ರಾಕೇಶ್ ಗಂಗುರ್ದೆ ಆತ್ಮಹತ್ಯೆ ಮಾಡಿಕೊಂಡವರು. ಡೆತ್ ನೋಟ್ ಬರೆದಿರುವ ಅವರು, ನಮ್ಮ ಜೀವನದ ಬಗ್ಗೆ ಸೋನಾಲಿ ಬಹಳ ಮಾಹಿತಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದಳು. ಇದರಿಂದ ಬೇಸರವಾಗಿತ್ತು ಎಂದು ಬರೆದಿದ್ದಾರೆ.
ರಾಕೇಶ್ ಹಾಗೂ ಸೋನಾಲಿ ದಂಪತಿ ಮದುವೆಯಾಗಿ ನಾಲ್ಕು ವರ್ಷವಾಗಿತ್ತು ಮತ್ತು ಅವರಿಗೆ ಮಕ್ಕಳಿರಲಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಸೋನಾಲಿ ಹಾಕುವ ಪೋಸ್ಟ್ ಗಳ ಬಗ್ಗೆ ಇಬ್ಬರ ಮಧ್ಯೆ ಆಗಾಗ ಜಗಳವಾಗುತ್ತಿತ್ತು. "ಡೆತ್ ನೋಟ್ ನಲ್ಲಿ ಬರೆದಿರುವಂತೆ ಸೋನಾಲಿ ತಮ್ಮ ವೈವಾಹಿಕ ಜೀವನ, ಫ್ಯಾಮಿಲಿ ಪ್ಲಾನಿಂಗ್ ಇತ್ಯಾದಿ ವಿಷಯಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸ್ನೇಹಿತರ ಜತೆ ಚರ್ಚಿಸುತ್ತಿದ್ದರು.[ಹತ್ತು ರುಪಾಯಿಯ ಮಕ್ಕಳಾಟಕ್ಕೆ ಬಲಿಯಾಯಿತು ಜೀವ]

"ಈ ವಿಷಯ ರಾಕೇಶ್ ಆಕ್ರೋಶಕ್ಕೆ ಕಾರಣವಾಗಿ ಇಂಥ ನಿರ್ಧಾರ ತೆಗೆದುಕೊಂಡಿದ್ದಾರೆ" ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಸೋನಾಲಿ ಸಹೋದರರು ಮೊದಲಿಗೆ ಶವಗಳನ್ನು ನೋಡಿದ್ದಾರೆ. ಸೋನಾಲಿ ಅವರ ತಾಯಿ ನಾಸಿಕ್ ನಿಂದ ಕರೆ ಮಾಡಿದ್ದಾರೆ. ಆಕೆ ಕರೆ ಸ್ವೀಕರಿಸಿಲ್ಲ. ಗಾಬರಿಯಿಂದ ತಮ್ಮ ಗಂಡುಮಕ್ಕಳಿಗೆ ತಿಳಿಸಿದ್ದಾರೆ. ಅವರು ಹೋಗಿ ನೋಡಿದಾಗ ವಿಷಯ ಗೊತ್ತಾಗಿದೆ.
ಈ ದಂಪತಿ ಇದ್ದ ಅಪಾರ್ಟ್ ಮೆಂಟ್ ಗೆ ಬಂದ ಸೋನಾಲಿ ಸಹೋದರರಿಗೆ ಒಳಗಿನಿಂದ ಬೀಗ ಹಾಕಿರುವುದು ಕಂಡು ಬಂದಿದೆ. ತಕ್ಷಣವೇ ಪೊಲೀಸರಿಗೆ ಸುದ್ದಿ ಮುಟ್ಟಿಸಿ, ಬೀಗ ಒಡೆದು ಒಳ ಪ್ರವೇಶಿಸಿದ್ದಾರೆ. ರಾಕೇಶ್ ನೈಲಾನ್ ಹಗ್ಗದಿಂದ ನೇಣು ಹಾಕಿಕೊಂಡಿರುವುದು, ಹಾಸಿಗೆ ಮೇಲೆ ಸೋನಾಲಿ ಶವ ಪತ್ತೆಯಾಗಿದೆ.[ಈ ಫೋಟೋ ನೋಡಪ್ಪಾ ಮಗು, ಇವರು ನಿನ್ನ ತಂದೆಯಾ?]
ಎಂಬಿಎ ಸ್ನಾತಕೋತ್ತರ ಪದವೀಧರರಾಗಿದ್ದ ರಾಕೇಶ್ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಆದರೆ ಕೆಲ ದಿನದ ಹಿಂದಷ್ಟೇ ಕೆಲಸ ಬಿಟ್ಟು, ಹೊಸ ವ್ಯಾಪಾರ ಆರಂಭಿಸುವುದರಲ್ಲಿದ್ದರು. ಕಂಪ್ಯೂಟರ್ ಎಂಜಿನಿಯರ್ ಆಗಿದ್ದ ಸೋನಾಲಿ ಕೆಲ ತಿಂಗಳ ಹಿಂದಷ್ಟೇ ಕೆಲಸ ಬಿಟ್ಟಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
-
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications