ಸಮ್ಮತಿಯ ಸಂಬಂಧದಲ್ಲಿ ಮದುವೆಗೆ ನಿರಾಕರಿಸಿದರೆ ಪರಿಹಾರ ತೆರಬೇಕೆ?
ನವದೆಹಲಿ, ಜುಲೈ 3: ಮಹಿಳೆಯರ ಹಿತಾಸಕ್ತಿಯನ್ನು ರಕ್ಷಿಸುವ ಉದ್ದೇಶದಿಂದ ಸಹಮತದ ಸಂಬಂಧಗಳಿಗೆ ಮದುವೆಯ ಹೊಣೆಗಾರಿಕೆ ನೀಡುವ ಕುರಿತು ಸುಪ್ರೀಂಕೋರ್ಟ್ ಚಿಂತನೆ ನಡೆಸಿದೆ.
ಗಂಡು ಮತ್ತು ಹೆಣ್ಣಿನ ನಡುವಣ ಸಮ್ಮತಿಯ ಲೈಂಗಿಕ ಸಂಬಂಧವನ್ನು ಮದುವೆ ಎಂದು ಪರಿಗಣಿಸಬೇಕೇ ಮತ್ತು ಜತೆಗೆ ಬಾಳಿದ ಹೆಣ್ಣಿಗೆ ಗಂಡು ಜೀವನಾಂಶದ ಪರಿಹಾರ ನೀಡಬೇಕೇ ಎಂಬ ಕುರಿತು ಸುಪ್ರೀಂಕೋರ್ಟ್ ವಿಚಾರಣೆ ನಡೆಸಲಿದೆ.
ಸಮ್ಮತಿಯ ಸಂಬಂಧಗಳಲ್ಲಿ ಲೈಂಗಿಕ ಸಂಪರ್ಕ ಹೊಂದಿದ್ದರೆ ಅದು ಅತ್ಯಾಚಾರ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂಬ ವಾದದ ಅನೇಕ ಪ್ರಕರಣಗಳಿವೆ.

ಅತ್ಯಾಚಾರ ಅಪರಾಧ ಪ್ರಕರಣಗಳಾಚೆ, ಸಮ್ಮತಿಯ ಲೈಂಗಿಕ ಸಂಬಂಧ ಎಂಬ ಕಾರಣಕ್ಕೆ ಮಹಿಳೆಯರ ಸಮಸ್ಯೆಗೆ ಪರಿಹಾರ ನೀಡದೆ ಇರಲು ಸಾಧ್ಯವಿಲ್ಲ. ಆದರೆ, ದೀರ್ಘಕಾಲ ಒಟ್ಟಿಗೆ ಬಾಳಿದರೆ ಮದುವೆಯ ಕೆಲವು ಹೊಣೆಗಾರಿಕೆಗಳು ಗಂಡಿಗೆ ಅನ್ವಯ ಆಗಬಹುದು ಎಂದು ನ್ಯಾಯಮೂರ್ತಿಗಳಾದ ಆದರ್ಶ ಕುಮಾರ್ ಗೋಯೆಲ್ ಮತ್ತು ಅಬ್ದುಲ್ ನಜೀರ್ ಅವರನ್ನು ಒಳಗೊಂಡ ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
ಈ ಗೊಂದಲದ ಮಹತ್ವವನ್ನು ಪರಿಗಣಿಸಿರುವ ನ್ಯಾಯಪೀಠ, ಹಿರಿಯ ವಕೀಲರಾದ ಅಭಿಷೇಕ್ ಮನು ಸಿಂಘ್ವಿ ಅವರನ್ನು ಅಮಿಕಸ್ ಕ್ಯೂರಿಯನ್ನಾಗಿ (ನ್ಯಾಯಾಲಯದ ಸಹಾಯಕ) ನೇಮಿಸಿದೆ. ಅವರಿಗೆ ನೆರವು ನೀಡಲು ವಕೀಲರೊಬ್ಬರನ್ನು ನೇಮಿಸುವಂತೆ ಅಟಾರ್ನಿ ಜನರಲ್ ಅವರಿಗೆ ಸೂಚಿಸಿದೆ.
ಬೆಂಗಳೂರಿನ ಉತ್ತರ ತಾಲ್ಲೂಕಿನ ಅಲೋಕ್ ಕುಮಾರ್ ಎಂಬುವವರು ತಮ್ಮ ವಿರುದ್ಧ ಮಹಿಳೆಯೊಬ್ಬರ ತಾಯಿ ಮಾಡಿರುವ ಅತ್ಯಾಚಾರ ಹಾಗೂ ಇತರೆ ಆರೋಪಗಳ ಪ್ರಕರಣವನ್ನು ಕೈಬಿಡುವಂತೆ ಕೋರಿ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಆರು ವರ್ಷ ತನ್ನ ಮಗಳ ಜತೆ ವಾಸವಿದ್ದ ಅಲೋಕ್ ಕುಮಾರ್ ಮದುವೆಯ ಭರವಸೆ ನೀಡಿದ್ದರು. ಆದರೆ ಈಗ ಮದುವೆಗೆ ನಿರಾಕರಿಸುತ್ತಿದ್ದಾರೆ ಎಂದು ಮಹಿಳೆ ಆರೋಪಿಸಿದ್ದರು.
ತಮ್ಮ ನಡುವೆ ಸಮ್ಮತಿಯ ಲೈಂಗಿಕ ಸಂಬಂಧವಿತ್ತು. ಹೀಗಾಗಿ ಅದನ್ನು ಅತ್ಯಾಚಾರ ಎಂದು ಕರೆಯಲು ಸಾಧ್ಯವಿಲ್ಲ ಎಂಬುದಾಗಿ ಅಲೋಕ್ ವಾದಿಸಿದ್ದಾರೆ.
ದೀರ್ಘಕಾಲದ ಸಹಮತದ ಲೈಂಗಿಕ ಸಂಬಂಧದಲ್ಲಿ ಗಂಡಿನ ವಿರುದ್ಧ ಆರೋಪ ಹೊರಿಸಲು ಸಾಧ್ಯವಾಗುವುದಿಲ್ಲ. ಆದರೆ, ಹೆಣ್ಣು ಶೋಷಣೆಗೆ ಒಳಗಾಗದಂತೆ ನೋಡಿಕೊಳ್ಳಬೇಕಾಗುತ್ತದೆ ಎಂದು ಪೀಠ ಅಭಿಪ್ರಾಯಪಟ್ಟಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications