ಸಮ್ಮತಿಯ ಸಂಬಂಧದಲ್ಲಿ ಮದುವೆಗೆ ನಿರಾಕರಿಸಿದರೆ ಪರಿಹಾರ ತೆರಬೇಕೆ?
ನವದೆಹಲಿ, ಜುಲೈ 3: ಮಹಿಳೆಯರ ಹಿತಾಸಕ್ತಿಯನ್ನು ರಕ್ಷಿಸುವ ಉದ್ದೇಶದಿಂದ ಸಹಮತದ ಸಂಬಂಧಗಳಿಗೆ ಮದುವೆಯ ಹೊಣೆಗಾರಿಕೆ ನೀಡುವ ಕುರಿತು ಸುಪ್ರೀಂಕೋರ್ಟ್ ಚಿಂತನೆ ನಡೆಸಿದೆ.
ಗಂಡು ಮತ್ತು ಹೆಣ್ಣಿನ ನಡುವಣ ಸಮ್ಮತಿಯ ಲೈಂಗಿಕ ಸಂಬಂಧವನ್ನು ಮದುವೆ ಎಂದು ಪರಿಗಣಿಸಬೇಕೇ ಮತ್ತು ಜತೆಗೆ ಬಾಳಿದ ಹೆಣ್ಣಿಗೆ ಗಂಡು ಜೀವನಾಂಶದ ಪರಿಹಾರ ನೀಡಬೇಕೇ ಎಂಬ ಕುರಿತು ಸುಪ್ರೀಂಕೋರ್ಟ್ ವಿಚಾರಣೆ ನಡೆಸಲಿದೆ.
ಸಮ್ಮತಿಯ ಸಂಬಂಧಗಳಲ್ಲಿ ಲೈಂಗಿಕ ಸಂಪರ್ಕ ಹೊಂದಿದ್ದರೆ ಅದು ಅತ್ಯಾಚಾರ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂಬ ವಾದದ ಅನೇಕ ಪ್ರಕರಣಗಳಿವೆ.

ಅತ್ಯಾಚಾರ ಅಪರಾಧ ಪ್ರಕರಣಗಳಾಚೆ, ಸಮ್ಮತಿಯ ಲೈಂಗಿಕ ಸಂಬಂಧ ಎಂಬ ಕಾರಣಕ್ಕೆ ಮಹಿಳೆಯರ ಸಮಸ್ಯೆಗೆ ಪರಿಹಾರ ನೀಡದೆ ಇರಲು ಸಾಧ್ಯವಿಲ್ಲ. ಆದರೆ, ದೀರ್ಘಕಾಲ ಒಟ್ಟಿಗೆ ಬಾಳಿದರೆ ಮದುವೆಯ ಕೆಲವು ಹೊಣೆಗಾರಿಕೆಗಳು ಗಂಡಿಗೆ ಅನ್ವಯ ಆಗಬಹುದು ಎಂದು ನ್ಯಾಯಮೂರ್ತಿಗಳಾದ ಆದರ್ಶ ಕುಮಾರ್ ಗೋಯೆಲ್ ಮತ್ತು ಅಬ್ದುಲ್ ನಜೀರ್ ಅವರನ್ನು ಒಳಗೊಂಡ ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
ಈ ಗೊಂದಲದ ಮಹತ್ವವನ್ನು ಪರಿಗಣಿಸಿರುವ ನ್ಯಾಯಪೀಠ, ಹಿರಿಯ ವಕೀಲರಾದ ಅಭಿಷೇಕ್ ಮನು ಸಿಂಘ್ವಿ ಅವರನ್ನು ಅಮಿಕಸ್ ಕ್ಯೂರಿಯನ್ನಾಗಿ (ನ್ಯಾಯಾಲಯದ ಸಹಾಯಕ) ನೇಮಿಸಿದೆ. ಅವರಿಗೆ ನೆರವು ನೀಡಲು ವಕೀಲರೊಬ್ಬರನ್ನು ನೇಮಿಸುವಂತೆ ಅಟಾರ್ನಿ ಜನರಲ್ ಅವರಿಗೆ ಸೂಚಿಸಿದೆ.
ಬೆಂಗಳೂರಿನ ಉತ್ತರ ತಾಲ್ಲೂಕಿನ ಅಲೋಕ್ ಕುಮಾರ್ ಎಂಬುವವರು ತಮ್ಮ ವಿರುದ್ಧ ಮಹಿಳೆಯೊಬ್ಬರ ತಾಯಿ ಮಾಡಿರುವ ಅತ್ಯಾಚಾರ ಹಾಗೂ ಇತರೆ ಆರೋಪಗಳ ಪ್ರಕರಣವನ್ನು ಕೈಬಿಡುವಂತೆ ಕೋರಿ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಆರು ವರ್ಷ ತನ್ನ ಮಗಳ ಜತೆ ವಾಸವಿದ್ದ ಅಲೋಕ್ ಕುಮಾರ್ ಮದುವೆಯ ಭರವಸೆ ನೀಡಿದ್ದರು. ಆದರೆ ಈಗ ಮದುವೆಗೆ ನಿರಾಕರಿಸುತ್ತಿದ್ದಾರೆ ಎಂದು ಮಹಿಳೆ ಆರೋಪಿಸಿದ್ದರು.
ತಮ್ಮ ನಡುವೆ ಸಮ್ಮತಿಯ ಲೈಂಗಿಕ ಸಂಬಂಧವಿತ್ತು. ಹೀಗಾಗಿ ಅದನ್ನು ಅತ್ಯಾಚಾರ ಎಂದು ಕರೆಯಲು ಸಾಧ್ಯವಿಲ್ಲ ಎಂಬುದಾಗಿ ಅಲೋಕ್ ವಾದಿಸಿದ್ದಾರೆ.
ದೀರ್ಘಕಾಲದ ಸಹಮತದ ಲೈಂಗಿಕ ಸಂಬಂಧದಲ್ಲಿ ಗಂಡಿನ ವಿರುದ್ಧ ಆರೋಪ ಹೊರಿಸಲು ಸಾಧ್ಯವಾಗುವುದಿಲ್ಲ. ಆದರೆ, ಹೆಣ್ಣು ಶೋಷಣೆಗೆ ಒಳಗಾಗದಂತೆ ನೋಡಿಕೊಳ್ಳಬೇಕಾಗುತ್ತದೆ ಎಂದು ಪೀಠ ಅಭಿಪ್ರಾಯಪಟ್ಟಿದೆ.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election












Click it and Unblock the Notifications