ಅಂದು ರಿಷಬ್ ಪಂತ್ ಜೀವ ಉಳಿಸಿದ್ದ ವ್ಯಕ್ತಿ ಜೀವವೇ ಅಪಾಯದಲ್ಲಿ; ಆಗಿದ್ದೇನು?
2022ರಲ್ಲಿ ಭಾರತದ ಸ್ಟಾರ್ ಕ್ರಿಕೆಟರ್ ರಿಷಬ್ ಪಂತ್ ಅವರ ಕಾರು ಭೀಕರ ಅಪಘಾತಕ್ಕೆ ಈಡಾಗಿದ್ದ ಘಟನೆ ಇಂದಿಗೂ ಕ್ರಿಕೆಟ್ ಅಭಿಮಾನಿಗಳಿಗೆ ನೆನಪಿದೆ. ಅಂದು ಪಂತ್ ಜೀವ ಅಪಾಯದಲ್ಲಿದ್ದಾಗ ಅವರ ಜೀವವನ್ನು ಕಾಪಾಡಿದ್ದ 25 ವರ್ಷದ ರಜತ್ ಕುಮಾರ್ ಜೀವವೇ ಇಂದು ಅಪಾಯಕ್ಕೆ ಸಿಲುಕಿದೆ. ಪಂತ್ ಪ್ರಾಣ ಕಾಪಾಡಿದ್ದ ರಜತ್ ಈಗ ಪ್ರೇಯಸಿಯ ಜೊತೆ ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾನೆ.
ಫೆಬ್ರವರಿ 9 ರಂದು ಉತ್ತರ ಪ್ರದೇಶದ ಮುಜಾಫರ್ ನಗರ ಜಿಲ್ಲೆಯ ಬುಚ್ಚಾ ಬಸ್ತಿ ಹಳ್ಳಿಯಲ್ಲಿ ಈ ಘಟನೆ ನಡೆದಿದೆ. ರಜತ್ ಕುಮಾರ್ ಪ್ರೇಯಸಿ ಮನು ಕಶ್ಯಪ್ ಜೊತೆ ವಿಷ ಸೇವಿಸಿದ್ದು, ಆಕೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು ರಜತ್ ಕುಮಾರ್ ಪರಿಸ್ಥಿತಿ ಗಂಭೀರವಾಗಿದ್ದು ಜೀವನ್ಮರಣದ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ. ಪ್ರೀತಿಗೆ ಮನೆಯವರು ಒಪ್ಪದ ಕಾರಣ ರಜತ್ ಮತ್ತು ಮನು ಈ ನಿರ್ಧಾರ ಮಾಡಿದ್ದಾರೆ ಎಂದು ವರದಿಯಾಗಿದೆ.

ಇಬ್ಬರ ಜಾತಿ ಬೇರೆ ಬೇರೆ ಎನ್ನುವ ಕಾರಣಕ್ಕೆ ಮನೆಯವರು ಸಂಬಂಧವನ್ನು ಒಪ್ಪಿಕೊಳ್ಳಲು ನಿರಾಕರಿಸಿದ್ದಾರೆ. ಅಲ್ಲದೇ ಎರಡೂ ಕುಟುಂಬಗಳು ಬೇರೆ ಕಡೆ ಮದುವೆ ಮಾಡಲು ನಿರ್ಧರಿಸಿದ್ದರು. ಇದರಿಂದ ಮನನೊಂದಿರುವ ಪ್ರೇಮಿಗಳು ವಿಷ ಸೇವಿಸಿದ್ದಾರೆ. ರಜತ್ ಕುಮಾರ್ ತನ್ನ ಮಗಳನ್ನು ಅಪಹರಿಸಿ ವಿಷ ಸೇವಿಸುವಂತೆ ಮಾಡಿದ್ದಾನೆ ಎಂದು ಮನು ಕಶ್ಯಪ್ ತಾಯಿ ಆರೋಪಿಸಿದ್ದಾರೆ.
ಪಂತ್ ಪ್ರಾಣ ಉಳಿಸಿದ್ದ ರಜತ್
ಡಿಸೆಂಬರ್ 2022ರಲ್ಲಿ ರಿಷಭ್ ಪಂತ್ ಕಾರಿನಲ್ಲಿ ದೆಹಲಿಯಿಂದ ಉತ್ತರಾಖಂಡಕ್ಕೆ ಹೋಗುತ್ತಿದ್ದಾಗ ರೂರ್ಕಿ ಬಳಿ ವಿಭಜಕಕ್ಕೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಿತ್ತು. ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ರಜತ್ ಕುಮಾರ್ ಮತ್ತೊಬ್ಬ ಸ್ಥಳೀಯ ನಿವಾಸಿ ನಿಶು ಕುಮಾರ್ ಪಂತ್ರನ್ನು ಕಾರಿನಿಂದ ಹೊರಗೆಳೆದು ಸ್ಥಳೀಯ ಆಸ್ಪತ್ರೆಗೆ ಸೇರಿಸುವಲ್ಲಿ ಸಹಾಯ ಮಾಡಿದ್ದರು. ಇಬ್ಬರೂ ಹತ್ತಿರದ ಕಾರ್ಖಾನೆಯಲ್ಲೇ ಕೆಲಸ ಮಾಡುತ್ತಿದ್ದರು. ಇಬ್ಬರು ಯುವಕರ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿತ್ತು. ಪಂತ್ ಚೇತರಿಸಿಕೊಂಡ ಬಳಿಕ ಇಬ್ಬರಿಗೂ ಸ್ಕೂಟರ್ಗಳನ್ನು ಉಡುಗೊರೆಯಾಗಿ ನೀಡಿದ್ದರು.
Helplines: COOJ Mental Health Foundation (COOJ)- 0832-2252525, ಪರಿವರ್ತನ್- +91 7676 602 602, Connecting Trust- +91 992 200 1122/+91-992 200 4305 or Sahai- 080-25497777/ [email protected]
ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ ಸ್ನೇಹಾ ಫೌಂಡೇಷನ್ ಸಹಾಯವಾಣಿ ಇಂತಿದೆ: 04424640050, ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸ್ 02225521111ಗೆ ಕರೆ ಮಾಡಬಹುದು.
-
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ












Click it and Unblock the Notifications