ಮಗು ಸೇರಿ ಮೂವರನ್ನು ಮನೆಯೊಳಗೆ ಕೂಡಿ ಹಾಕಿ ನೆರೆ ಮನೆಗೆ ಬೆಂಕಿ ಹಚ್ಚಿದ್ದ ವ್ಯಕ್ತಿ ಬಂಧನ
ಬೆಂಕಿ ಕಾಣಿಸಿಕೊಂಡ ಕಾರಣ ಮನೆಯಲ್ಲಿದ್ದವರು ತಪ್ಪಿಸಿಕೊಂಡ ಕಾರಣ ಭಾರೀ ಅನಾಹುತ ತಪ್ಪಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ತಿರುವನಂತಪುರಂ, ಮಾರ್ಚ್ 05: ಐದು ವರ್ಷದ ಮಗು ಸೇರಿದಂತೆ ಮೂವರ ಕುಟುಂಬವನ್ನು ಮನೆಯೊಳಗೆ ಬೀಗ ಹಾಕಿ ಕೂಡಿಹಾಕಿ ನೆರೆ ಮನೆಯವರೇ ಮನೆಗೆ ಬೆಂಕಿ ಹಚ್ಚಿರುವ ಘಟನೆ ಶನಿವಾರ ಕೇರಳದ ಕಟ್ಟಕಡದಲ್ಲಿ ನಡೆದಿದೆ. ನೆರೆಮನೆಯ ಮಾಜಿ ಸೈನಿಕ ಅಜಯಕುಮಾರ್ ಎಂಬುವವರು ಮನೆಗೆ ಬೆಂಕಿ ಹಚ್ಚಿದ್ದು ಕಟ್ಟಕಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬೆಂಕಿ ಕಾಣಿಸಿಕೊಂಡ ಕಾರಣ ಮನೆಯಲ್ಲಿದ್ದವರು ತಪ್ಪಿಸಿಕೊಂಡ ಕಾರಣ ಭಾರೀ ಅನಾಹುತ ತಪ್ಪಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಟ್ಟಕಡ ಸಮೀಪದ ಅಂಬಲತಿಂಕಲ ಎಂಬಲ್ಲಿ ಶನಿವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಪದ್ಮಜಾ, ಅವರ ಮಗಳು ಮತ್ತು ಅವರ ಮೊಮ್ಮಗಳು ಸೇರಿದಂತೆ ಕುಟುಂಬ ಸದಸ್ಯರು ಮನೆಯಲ್ಲಿದ್ದಾಗ ಅಜಯಕುಮಾರ್ ಮಾಸ್ಕ್ ಧರಿಸಿ ಮನೆಗೆ ಬೆಂಕಿ ಹಚ್ಚಿದ್ದಾರೆ. ಮನೆಯವರು ತಪ್ಪಿಸಿಕೊಳ್ಳದಂತೆ ಮುಂಬಾಗಿಲನ್ನು ಹೊರಗಿನಿಂದ ಲಾಕ್ ಮಾಡಿದ್ದರು.

ಮನೆಯೊಳಗೆ ಬೆಂಕಿ ವ್ಯಾಪಿಸಿದಾಗ ಪದ್ಮಜಾ, ಅವರ ಮಗಳು, ಮೊಮ್ಮಗಳನ್ನು ಎತ್ತಿಕೊಂಡು ತಕ್ಷಣ ಹಿಂಬಾಗಿಲು ತೆರೆದು ಹೊರಗೆ ಓಡಿ ಬಂದಿದ್ದಾರೆ. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಆದರೆ, ಮನೆಯಲ್ಲಿದ್ದ ಪೀಠೋಪಕರಣಗಳು, ಬಟ್ಟೆಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಭಾರೀ ಅನಾಹುತದಿಂದ ಜೀವ ಉಳಿಸಿಕೊಂಡ ಕುಟುಂಬ ಇನ್ನೂ ಅತಂಕದಿಂದ ಹೊರ ಬಂದಿಲ್ಲ.

ಘಟನಾ ಸ್ಥಳದಲ್ಲಿ ಪೊಲೀಸ್ ತಂಡ ವಿಸ್ತೃತ ತನಿಖೆ ನಡೆಸಿದ್ದು, ಹಿಂಸಾಚಾರಕ್ಕೆ ಆಸ್ತಿ ವಿವಾದವೇ ಕಾರಣ ಎಂದು ತೀರ್ಮಾನಿಸಿದೆ. ಮಾಜಿ ಸೈನಿಕ ಅಜಯಕುಮಾರ್ ಈ ಹಿಂದೆ ಕಿರುಕುಳ ಪ್ರಕರಣದಲ್ಲಿ ಆರೋಪಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ವಿರುದ್ಧ ಕೊಲೆ ಯತ್ನ ಸೇರಿದಂತೆ ವಿವಿಧ ಪ್ರಕರಣ ದಾಖಲಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ












Click it and Unblock the Notifications