West Bengal CM Mamata Banerjee: ಬಂದೂಕು ಹಿಡಿದು ಮಮತಾ ಬ್ಯಾನರ್ಜಿ ಮನೆಗೆ ನುಗ್ಗಲು ಯತ್ನಿಸಿದ ವ್ಯಕ್ತಿ
ಕೋಲ್ಕತ್ತಾ, ಜುಲೈ 21: ಕೋಲ್ಕತ್ತಾದ ಹರೀಶ್ ಚಟರ್ಜಿ ಸ್ಟ್ರೀಟ್ನಲ್ಲಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನಿವಾಸದ ಬಳಿ ಅವಘಡವೊಂದು ಸಂಭವಿಸಿದೆ. ಇಂದು ಬೆಳಿಗ್ಗೆ 11:30 ರ ಸುಮಾರಿಗೆ ಮಮತಾ ಅವರ ಮನೆಗೆ ಅಪರಿಚಿತ ವ್ಯಕ್ತಿಯೊಬ್ಬ ಪ್ರವೇಶಿಸಲು ಪ್ರಯತ್ನಿಸಿದ್ದಾನೆ. ಈ ವ್ಯಕ್ತಿಯು ಬಂದೂಕು ಮತ್ತು ಚಾಕು ಹಿಡಿದುಕೊಂಡು ಮನೆಗೆ ನುಗ್ಗಲು ಯತ್ನಿಸುತ್ತಿದ್ದಾಗ ಪೊಲೀಸರು ಆತನನ್ನು ಬಂಧಿಸಿದ್ದಾರೆ.
ಶೇಖ್ ನೂರ್ ಎಂದು ಗುರುತಿಸಲಾದ ವ್ಯಕ್ತಿ ಪೊಲೀಸರಂತೆ ನಟಿಸಿ ಕಪ್ಪು ಕಾರಿನಲ್ಲಿ ಬಂದಿದ್ದ. ಮಮತಾ ನಿವಾಸದ ಬಳಿಯ ಲೇನ್ಗೆ ಪ್ರವೇಶಿಸಲು ಪ್ರಯತ್ನಿಸುತ್ತಿದ್ದ. ವಿವಿಧ ಭದ್ರತಾ ಏಜೆನ್ಸಿಗಳಿಗೆ ಸೇರಿದ ಹಲವಾರು ನಕಲಿ ಗುರುತಿನ ಚೀಟಿಗಳನ್ನು ಸಹ ವ್ಯಕ್ತಿ ತನ್ನೊಂದಿಗೆ ಕೊಂಡೊಯ್ಯುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸ್ ಕಮಿಷನರ್ ವಿನೀತ್ ಗೋಯಲ್ ಪ್ರಕಾರ, ವ್ಯಕ್ತಿಯಿಂದ ಒಂದು ಚಾಕು, ಒಂದು ಬಂದೂಕು ಮತ್ತು ಗಾಂಜಾದಂತಹ ನಿಷೇಧಿತ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಆರೋಪಿಯು ಕಾರಿನಿಂದ ಇಳಿದಾಗ ಪೊಲೀಸರು ತಡೆದರು. ಆದರೆ, ಆತ ತನ್ನನ್ನು ತಾನು ಪೋಲೀಸ್ ಅಧಿಕಾರಿ ಎಂಬಂತೆ ಬಿಂಬಿಸಲು ಯತ್ನಿಸುತ್ತಿದ್ದ. ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾಗಲು ಬಂದಿದ್ದೇನೆ ಎಂದು ಹೇಳಿಕೊಂಡನೆಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಹರೀಶ್ ಚಟರ್ಜಿ ಸ್ಟ್ರೀಟ್ನಲ್ಲಿರುವ ಬ್ಯಾನರ್ಜಿ ಅವರ ನಿವಾಸದೊಳಗೆ 'ಪೊಲೀಸ್' ಸ್ಟಿಕ್ಕರ್ನೊಂದಿಗೆ ಕಾರನ್ನು ಓಡಿಸಲು ವ್ಯಕ್ತಿ ಪ್ರಯತ್ನಿಸಿದ್ದಾನೆ. ಆತನನ್ನು ನೂರ್ ಆಲಂ ಎಂದು ಗುರುತಿಸಲಾಗಿದೆ. ಕಪ್ಪು ಕೋಟ್ ಮತ್ತು ಟೈ ಧರಿಸಿದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಕೋಲ್ಕತ್ತಾ ಪೊಲೀಸ್ ಕಮಿಷನರ್ ವಿನೀತ್ ಗೋಯಲ್ ತಿಳಿಸಿದ್ದಾರೆ.
ಘಟನೆ ನಡೆದಾಗ ಬ್ಯಾನರ್ಜಿ ಅವರು ತಮ್ಮ ಮನೆಯಲ್ಲಿದ್ದರು ಎಂದು ಗೋಯಲ್ ಮಾಹಿತಿ ನೀಡಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications