ಪ್ರಧಾನಿಗೆ ತಮ್ಮ ಭರವಸೆಗಳನ್ನು ನೆನಪಿಸಲು 1,350 ಕಿ.ಮೀ. ಪಾದಯಾತ್ರೆ
ಆಗ್ರಾ, ಜೂನ್ 16: ಪ್ರಧಾನಿ ನರೇಂದ್ರ ಮೋದಿ ಅವರು ಈ ಹಿಂದೆ ನೀಡಿದ ಭರವಸೆಗಳನ್ನು ಅವರಿಗೆ ನೆನಪಿಸುವ ಸಲುವಾಗಿ 30ರ ವಯಸ್ಸಿನ ವ್ಯಕ್ತಿಯೊಬ್ಬರು ಒಡಿಶಾದ ರೂರ್ಕೆಲಾದಿಂದ 1,350 ಕಿ.ಮೀ. ದೂರವಿರುವ ದೆಹಲಿಗೆ ಪಾದಯಾತ್ರೆ ನಡೆಸಿದ್ದಾರೆ.
ವಿಗ್ರಹಗಳನ್ನು ತಯಾರಿಸುವ ವೃತ್ತಿ ಮಾಡುತ್ತಿರುವ ಒಡಿಶಾದ ಮುಕ್ತಿಕಂಠ ಎಂಬುವವರು ತಮ್ಮ ಹಳ್ಳಿಗೆ ಇನ್ನೂ ವೈದ್ಯಕೀಯ ಹಾಗೂ ಮೂಲಸೌಕರ್ಯಗಳು ದೊರಕದೆ ಪರದಾಡುತ್ತಿರುವ ಜನರಿಗಾಗಿ ಪ್ರಧಾನಿಯ ಗಮನ ಸೆಳೆಯಲು ಭಾರತದ ಬಾವುಟ ಹಿಡಿದು ನಡೆದೇ ಸಾಗಿದ್ದಾರೆ.
2015ರಲ್ಲಿ ಒಡಿಶಾಗೆ ಭೇಟಿ ನೀಡಿದ್ದ ಪ್ರಧಾನಿ ಮೋದಿ ಅವರು, ಇಸ್ಪಾಟ್ ಜನರಲ್ ಆಸ್ಪತ್ರೆಯನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸುವುದಾಗಿ ಮತ್ತು ಬ್ರಹ್ಮಣಿ ಸೇತುವೆಯ ನಿರ್ಮಾಣ ಕಾಮಗಾರಿಯನ್ನು ಪೂರ್ಣಗೊಳಿಸುವುದಾಗಿ ಭರವಸೆ ನೀಡಿದ್ದರು.

ಆದರೆ ನಾಲ್ಕು ವರ್ಷಗಳು ಕಳೆದರೂ ಇವು ಘೋಷಣೆಗಳಾಗಿಯೇ ಉಳಿದಿವೆ ಹೊರತು ಜಾರಿಯಾಗಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.
ದೇಶದ ಬಹುತೇಕ ಹಳ್ಳಿಗಳ ಸ್ಥಿತಿಯು ಇದೇ ರೀತಿ ಪರಿಸ್ಥಿತಿಯಿದ್ದು, ಜನರಿಗೆ ಮೂಲಭೂತ ಸೌಕರ್ಯಗಳು ಸುಲಭವಾಗಿ ಸಿಗುತ್ತಿಲ್ಲ. ಹೀಗಾಗಿ ಪ್ರಧಾನಿಯ ಗಮನ ಸೆಳೆಯಲು ಈ ಪಯಣ ನಡೆಸಲು ತೀರ್ಮಾನಿಸಿದ್ದಾಗಿ ಹೇಳಿದ್ದಾರೆ.
ಪಾದಯಾತ್ರೆ ವೇಳೆ ಆಗ್ರಾ ಹೈವೇಯಲ್ಲಿ ಆಯಾಸಗೊಂಡು ಕುಸಿದುಬಿದ್ದ ಮಣಿಕಂಠ ಅವರನ್ನು ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ. ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ, ತಮ್ಮ ಭರವಸೆಗಳನ್ನು ಈಡೇರಿಸುವಂತೆ ಮನವಿ ಮಾಡುವ ಆಶಯವನ್ನು ಅವರು ಹೊಂದಿದ್ದಾರೆ.
ಇಷ್ಟು ದೂರು ಒಬ್ಬಂಟಿಯಾಗಿ ಪಾದಯಾತ್ರೆ ಮಾಡಲು ತಮ್ಮೊಟ್ಟಿಗೆ ಕೊಂಡೊಯ್ಯುತ್ತಿರುವ ರಾಷ್ಟ್ರಧ್ವಜವೇ ಹುಮ್ಮಸ್ಸು ನೀಡುತ್ತಿದೆ ಎಂದು ಅವರು ಹೇಳಿದ್ದಾರೆ.
ನಾಲ್ಕು ವರ್ಷದ ಹಿಂದೆ ನೀಡಿದ ಭರವಸೆಯನ್ನು ಈವರೆಗೆ ಈಡೇರಿಸದೆಯೇ ಇದ್ದರೂ, ಪ್ರಸಕ್ತ ವರ್ಷವಾದರೂ ಅದು ಸಾಧ್ಯವಾಗುತ್ತದೆ ಎಂಬ ವಿಶ್ವಾಸ ಹೊಂದಿರುವುದಾಗಿ ಅವರು ತಿಳಿಸಿದ್ದಾರೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications