ಯೂಟ್ಯೂಬ್ ನೋಡಿ ಪತಿಯಿಂದ ಹೆರಿಗೆ ದುಸ್ಸಾಹಸ: ಬಾಣಂತಿ ಸಾವು
ತಿರುಪುರ, ಜು.26: ವೈದ್ಯರ ಸಹಾಯವಿಲ್ಲದೆ ಹೆರಿಗೆ ಮಾಡಿಸುವ ದುಸ್ಸಾಹಸಕ್ಕೆ ಯಾರೂ ಕೂಡ ಕೈಹಾಕಬಾರದು ಎನ್ನುವ ಸಂದೇಶವನ್ನು ಈ ಘಟನೆ ನೀಡುತ್ತದೆ.
ವೈದ್ಯರ ಸಹಾಯವಿಲ್ಲದೆ ಯೂಟ್ಯೂಬ್ ನೋಡಿ ನಾನೇ ಹರಿಗೆ ಮಾಡಿಸುತ್ತೇನೆ ಎಂಬ ಭಂಡ ಧೈರ್ಯದಿಂದ ಪತ್ನಿಯನ್ನೇ ಕಳೆದುಕೊಂಡ ಘಟನೆ ತಮಿಳುನಾಡಿನ ತಿರುಪುರದಲ್ಲಿ ನಡೆದಿದೆ.
ಯೂಟ್ಯೂಬ್ ಸಹಾಯದಿಂದ ಹೆರಿಗೆ ಮಾಡಿಸುವ ದುಸ್ಸಾಹಸದಿಂದ ಬಾಣಂತಿ ಸಾವನ್ನಪ್ಪಿದ್ದಾಳೆ, ಅದೃಷ್ಟವಶಾತ್ ಮಗು ಪ್ರಾಣಾಪಾಯದಿಂದ ಪಾರಾಗಿದೆ. ಕೃತಿಕಾ(28) ಮೃತ ದುರ್ದೈವಿ. ಆಕೆ ಖಾಸಗಿ ಶಾಲೆಯ ಶಿಕ್ಷಕಿಯಾಗಿ ಕೆಲಸ ನಿರ್ವಹಿಸುತ್ತಿದ್ದಳು.

ಕೃತಿಕಾ ಪತಿ ಖಾಸಗಿ ಕಂಪನಿಯಲ್ಲಿ ಸಾಫ್ಟ್ವೇರ್ ಉದ್ಯೋಗಿಯಾಗಿದ್ದ, ಈ ದಂಪತಿಗೆ ಈಗಾಗಲೇ ಮೂರು ವರ್ಷದ ಮಗಳಿದ್ದಾಳೆ ಎಂಬ ಮಾಹಿತಿ ಲಭ್ಯವಾಗಿದೆ. ಮೊದಲು ಮಗು ಜನಿಸುವಾಗ ಆಸ್ಪತ್ರೆಯಲ್ಲೇ ಹೆರಿಗೆಯಾಗಿತ್ತು. ಎರಡನೇ ಮಗು ಮನೆಯಲ್ಲೇ ಡೆಲಿವರಿಯಾಗಬೇಕು ಎಂದು ಆಲೋಚಿಸಿದ್ದಾರೆ.
ಹೆರಿಗೆ ವೇಳೆ ಪತಿ ಜತೆಗೆ ಇಬ್ಬರು ಸ್ನೇಹಿತರೂ ಕೂಡ ಇದ್ದರು. ಸಹೋದ್ಯೋಗಿಯೊಬ್ಬರ ಪತ್ನಿ ಲಾವಣ್ಯ ಎನ್ನುವವರಿಗೆ ಮನೆಯಲ್ಲೇ ಹೆರಿಗೆಯಾಗಿದೆ ಎಂದು ತಿಳಿದ ಬಳಿಕ ಕೃತಿಕಾ ಕೂಡ ತಮ್ಮ ಮಗುವು ಮನೆಯಲ್ಲೇ ಜನಿಸಬೇಕು ಎಂದು ಆಸೆ ಪಟ್ಟಿದ್ದರು.
ಅದರಂತೆ ಮನೆಯಲ್ಲೇ ಹೆರಿಗೆ ಮಾಡಿಸುವ ದುಸ್ಸಾಹಸಕ್ಕೆ ಕೈಹಾಕಿ ಒಂದು ಜೀವ ಬಲಿಯಾಗಿದೆ. ಮಗು ಇನ್ನೂ ಕಣ್ಣು ತೆರೆದು ನೋಡುವ ಮುನ್ನವೇ ತಾಯಿಯನ್ನು ಕಳೆದುಕೊಂಡಿದೆ.
ಪತಿ ಅಥವಾ ಪತ್ನಿ, ಸಂಬಂಧಿಕರು ಯಾರೇ ಆಗಿರಲಿ ಹೆರಿಗೆ ಸಮಯದಲ್ಲಿ ವೈದ್ಯರ ಸಹಾಯವಿಲ್ಲದೆ ತಮ್ಮ ಮನಸ್ಸಿಗೆ ಬಂದಂತೆ ನಡೆದುಕೊಂಡರೆ ಮಗು ಹಾಗೂ ತಾಯಿ ಇಬ್ಬರನ್ನೂ ಕಳೆದುಕೊಳ್ಳಬೇಕಾಗುತ್ತದೆ ಎಂಬ ಎಚ್ಚರಿಕೆಯನ್ನೂ ಈ ಘಟನೆ ಮೂಲಕ ಪಡೆಯಬಹುದಾಗಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications