ಬಿಜೆಪಿ ಅಭ್ಯರ್ಥಿ ಸೋತರೇ ಸತ್ತು ಹೋಗುತ್ತೇನೆ ಎಂದಿದ್ದ ವ್ಯಕ್ತಿ ಅಪಘಾತದಲ್ಲಿ ಸಾವು
ಮುಂಬೈ, ಜೂನ್. 10: ಮಹಾರಾಷ್ಟ್ರದ ಬೀಡ್ ಜಿಲ್ಲೆಯಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದ ಬಿಜೆಪಿ ನಾಯಕಿ ಪಂಕಜಾ ಮುಂಡೆ ಅವರು ಸೋತರೆ ನಾನು ಜೀವ ನೀಡುತ್ತೇನೆ ಎಂದು ವಿಡಿಯೋ ಮಾಡಿದ್ದ 38 ವರ್ಷದ ವ್ಯಕ್ತಿಯೊಬ್ಬರು ಬಸ್ನಡಿ ಸಿಲುಕಿ ಸಾವನ್ನಪ್ಪಿದ್ದಾರೆ.
ಅಹ್ಮದ್ಪುರ-ಅಂಧೋರಿ ರಸ್ತೆಯಲ್ಲಿ ಬೋರ್ಗಾಂವ್ ಪಾಟಿ ಬಳಿ ರಾತ್ರಿ 9 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಇದು ಆತ್ಮಹತ್ಯೆಯ ಸಾವು ಇರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಮೃತ ವ್ಯಕ್ತಿಯನ್ನು ಲಾತೂರ್ನ ಅಹ್ಮದ್ಪುರದ ಯೆಸ್ಟರ್ನ ಟ್ರಕ್ ಡ್ರೈವರ್ ಆಗಿದ್ದ ಸಚಿನ್ ಕೊಂಡಿಬಾ ಮುಂಡೆ ಎಂದು ಗುರುತಿಸಲಾಗಿದೆ.

ಲೋಕಸಭೆ ಚುನಾವಣೆ ಫಲಿತಾಂಶಕ್ಕೂ ಮುನ್ನ ವಿಡಿಯೋವನ್ನು ಬಿಡುಗಡೆ ಮಾಡಿದ್ದ ಆತ, ಬಿಜೆಪಿ ಅಭ್ಯರ್ಥಿ ಪಂಕಜಾ ಮುಂಡೆ ಸಮೀಕ್ಷೆಯಲ್ಲಿ ಸೋತರೆ ಸಚಿನ್ ಇನ್ನಿಲ್ಲ ಎಂದು ಅವರು ವಿಡಿಯೋದಲ್ಲಿ ಹೇಳಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಪಂಕಜಾ ಮುಂಡೆ ಅವರು ಬೀಡ್ ಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕ ಬಜರಂಗ್ ಸೋನಾವಾನೆ ವಿರುದ್ಧ 6,553 ಮತಗಳಿಂದ ಸೋಲು ಕಂಡಿದ್ದಾರೆ.
ಲೋಕಸಭಾ ಚುನಾವಣಾ ಫಲಿತಾಂಶದ ನಂತರ, ಮೃತ ವ್ಯಕ್ತಿ ಖಿನ್ನತೆಗೆ ಒಳಗಾಗಿದ್ದರು ಮತ್ತು ಮೌನವಾಗಿದ್ದರು ಎಂದು ಅವರ ಕುಟುಂಬ ತಿಳಿಸಿದೆ ಎಂದು ಪಿಟಿಐ ವರದಿ ಮಾಡಿದೆ. ಇತ್ತ, ಪೊಲೀಸರು ಬಸ್ ಚಾಲಕನನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
"ಇದು ಅಪಘಾತವೇ ಅಥವಾ ಆತ್ಮಹತ್ಯೆಯೇ ಎಂದು ಕಂಡುಹಿಡಿಯಲು ತನಿಖೆ ನಡೆಯುತ್ತಿದೆ. ಬೋರಗಾಂವ್ ಪಾಟಿಯಲ್ಲಿ ಯಲ್ದರವಾಡಿ ರಾತ್ರಿ ಬಸ್ ನಿಲ್ಲಿಸಿದಾಗ ಈ ಘಟನೆ ನಡೆದಿದೆ. ಸಚಿನ್ ಬಸ್ನ ಹಿಂದೆ ನಿಂತಿದ್ದರು ಮತ್ತು ಅದನ್ನು ರಿವರ್ಸ್ ತೆಗೆಯುವಾಗ ನಜ್ಜುಗುಜ್ಜಾಗಿ ಸಾವನ್ನಪ್ಪಿದ್ದಾರೆ" ಎಂದುಕಿಂಗಾವ್ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ. ಇದರೊಂದಿಗೆ ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಎಂಎಸ್ಆರ್ಟಿಸಿ) ಬಸ್ನ್ನು ತನಿಖೆಯ ಭಾಗವಾಗಿ ಜಪ್ತಿ ಮಾಡಲಾಗಿದೆ.

ಇನ್ನೊಂದು ಪ್ರಕರಣದಲ್ಲಿ ಬಿಜೆಪಿ ನಾಯಕಿ ಪಂಕಜಾ ಮುಂಡೆ ಬೆಂಬಲಿಗರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಮತ್ತೊಂದು ಘಟನೆ ಭಾನುವಾರ ಬೆಳಗ್ಗೆ ಬೀಡ್ನಲ್ಲಿ ವರದಿಯಾಗಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ವರದಿಯ ಪ್ರಕಾರ, ಪಂಕಜಾ ಮುಂಡೆ ಬೀಡ್ ಲೋಕಸಭಾ ಕ್ಷೇತ್ರವನ್ನು ಕಳೆದುಕೊಂಡ ನಂತರ ಪಾಂಡುರಂಗ್ ಸೋನಾವಾನೆ ಎಂಬುವವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
30 ವರ್ಷದ ವ್ಯಕ್ತಿ ತನ್ನ ನಾಯಕಿ ಪಂಕಜಾ ಪಾಂಡೆ ಸೋಲನ್ನು "ಸಹಿಸಲು ಸಾಧ್ಯವಾಗದೆ" ತನ್ನ ಜೀವನವನ್ನು ಕೊನೆಗೊಳಿಸುತ್ತಿರುವುದಾಗಿ ಬರೆದ ಟಿಪ್ಪಣಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications