ಆಸ್ತಿಗೂ ಆಧಾರ್ ಜೋಡಣೆ ಕಡ್ಡಾಯ ಮಾಡುವ ಕಾಲ ದೂರವಿಲ್ಲ!
Recommended Video

ಕಪ್ಪು ಹಣ ನಿಯಂತ್ರಿಸುವುದಕ್ಕಾಗಿ ನೋಟು ನಿಷೇಧ ಮಾಡಲಾಯಿತು ಎಂಬ ಪ್ರಧಾನಿ ನರೇಂದ್ರ ಮೋದಿಯವರ ಘೋಷಣೆಗೆ ಅನೇಕ ಆಕ್ಷೇಪಗಳು ವ್ಯಕ್ತವಾಗಿದ್ದವು. ಏಕೆಂದರೆ ನಗದು ರೂಪದಲ್ಲಿ ಕಪ್ಪು ಹಣ ಇರಿಸಿಕೊಳ್ಳುವುದಕ್ಕಿಂತ ಹೆಚ್ಚಾಗಿ ಸ್ಥಿರಾಸ್ತಿಗಳ ಮೇಲೆ ಹೂಡಿಕೆ ಮಾಡಲಾಗಿರುತ್ತದೆ ಎಂಬುದು ಹಲವರ ಅಭಿಪ್ರಾಯ ಆಗಿತ್ತು.
ಇನ್ನು ಕೇಂದ್ರ ಸರಕಾರ, ಅಪನಗದೀಕರಣವು ಕಪ್ಪು ಹಣ ನಿಯಂತ್ರಿಸುವಲ್ಲಿನ ಮೊದಲ ಹೆಜ್ಜೆ. ಇನ್ನೂ ದೊಡ್ಡ ನಿರ್ಧಾರಗಳನ್ನು ಕೈಗೊಳ್ಳಬೇಕು ಎಂದು ಹೇಳಿತ್ತು. ಆ ದೊಡ್ಡ ನಿರ್ಧಾರ ಅಂದರೆ ಕಪ್ಪು ಹಣ ನಿಯಂತ್ರಣಕ್ಕೆ ಸ್ಥಿರಾಸ್ತಿ ಮೇಲೆ ಕಣ್ಣಿರಿಸುವುದಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವರೊಬ್ಬರು ಇಶಾರೆ ನೀಡಿದ್ದಾರೆ.
ಅದರ ಪ್ರಕಾರ ಆಸ್ತಿ ವ್ಯವಹಾರಗಳಿಗೆ ಆಧಾರ್ ಜೋಡಣೆ ಕಡ್ಡಾಯ ಮಾಡುವ ಪ್ರಸ್ತಾವದ ಬಗ್ಗೆ ಮಾತನಾಡಿದ್ದಾರೆ. ಕೇಂದ್ರ ಸಚಿವರಾದ ಹರ್ದೀಪ್ ಪುರಿ, ಈ ರೀತಿ ಆಧಾರ್ ಜೋಡಣೆ ಮಾಡುವುದರಿಂದ ಬೇನಾಮಿ ಆಸ್ತಿ ಗುರುತಿಸುವುದು ಸರಳವಾಗುತ್ತದೆ ಎಂದು ಹೇಳಿದ್ದಾರೆ.
ಜಗತ್ತಿನಲ್ಲೇ ನಗದು ಸಂಪೂರ್ಣವಾಗಿ ಬಳಸದ ಆರ್ಥಿಕತೆ ಯಾವುದೂ ಇಲ್ಲ. ಆದರೆ ತೀರಾ ದೊಡ್ಡ ಮೊತ್ತದ ವ್ಯವಹಾರವೂ ನಗದು ಮೂಲಕವೇ ಆಗಬೇಕು ಅಂತೇನೂ ಇಲ್ಲ. ಪಾರದರ್ಶಕ ಹಾಗೂ ಕಡಿಮೆ ಪ್ರಮಾಣದ ನಗದು ವ್ಯವಹಾರದ ಕಡೆಗೆ ಸಾಗುವುದು ನಮ್ಮ ಉದ್ದೇಶ ಎಂದು ಕೇಂದ್ರ್ ಸಚಿವ ಪುರಿ ಹೇಳಿದ್ದಾರೆ.

ಈಗಲೇ ಘೋಷಣೆ ಇಲ್ಲ
ಆಧಾರ್ ಜೋಡಣೆ ಮಾಡುವುದು ತುಂಬ ಒಳ್ಳೆ ಆಲೋಚನೆ. ಆದರೆ ಈ ಬಗ್ಗೆ ಏನನ್ನೂ ಘೋಷಣೆ ಮಾಡುವುದಿಲ್ಲ. ನಾವು ಈಗಾಗಲೇ ಬ್ಯಾಂಕ್ ಖಾತೆ ಸೇರಿದಂತೆ ಇತರ ಕಡೆಗಳಲ್ಲಿ ಆಧಾರ್ ಜೋಡಣೆ ಕಡ್ಡಾಯ ಮಾಡಿದ್ದೇವೆ. ಆಸ್ತಿ ಮಾರುಕಟ್ಟೆಗೆ ಸಂಬಂಧಿಸಿದಂತೆ ಕೂಡ ಇದನ್ನು ವಿಸ್ತರಿಸಬಹುದು ಎಂದಿದ್ದಾರೆ.

ಬೇನಾಮಿ ಆಸ್ತಿ ಮೇಲಿನ ದಾಳಿಯ ಭಾಗ
ಬೇನಾಮಿ ಆಸ್ತಿಗಳ ಮೇಲೆ ದಾಳಿ ನಡೆಸುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹಲವು ಬಾರಿ ಈಗಾಗಲೇ ಸೂಚನೆ ನೀಡಿದ್ದಾರೆ. ಆಧಾರ್ ಜೋಡಣೆ ಆ ಕಾರ್ಯಾಚರಣೆಯ ಒಂದು ಭಾಗವಾಗಬಹುದು.

ಪಾರದರ್ಶಕತೆ ತರುವ ಯತ್ನ
ಆಧಾರ್ ಹಾಗೂ ಆಸ್ತಿ ಜೋಡಣೆಯಿಂದ ಆರ್ಥಿಕತೆಯಲ್ಲಿ ಪಾರದರ್ಶಕತೆ ಬರಲು ಸಾಧ್ಯವೇ ಎಂಬ ಪ್ರಶ್ನೆಗೆ ಉತ್ತರಿಸಿದ ಪುರಿ, ಖಂಡಿತಾ ಆಗುತ್ತದೆ. ಈ ಬಗ್ಗೆ ನನಗೆ ಯಾವುದೇ ಅನುಮಾನಗಳಿಲ್ಲ ಎಂದಿದ್ದಾರೆ.

ಆಸ್ತಿ ವ್ಯವಹಾರದ ಮೇಲೆ ಕಣ್ಗಾವಲು
ಇಬ್ಬರು ವ್ಯಕ್ತಿಗಳ ಮಧ್ಯದ ವ್ಯವಹಾರ ಖಂಡಿತಾ ಪಾರದರ್ಶಕವಾಗಿರುತ್ತದೆ. ಆದರೆ ದೊಡ್ಡ ಮೊತ್ತದ ಆಸ್ತಿ ವ್ಯವಹಾರ ಹಾಗೂ ವಿಮಾನ ಪ್ರಯಾಣದ ಟಿಕೆಟ್ ಗಳ ಮೇಲೆ ಕಣ್ಗಾವಲು ಇರಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications