ಕುಂಭದ್ರೋಣ ಮಳೆ-ನೆರೆಗೆ ತತ್ತರಿಸಿ ಹೋಯಿತು ಮಂಗಳೂರು!
ಬೆಂಗಳೂರು, ಮೇ 30: ಮಳೆಯ ಆಗಮನಕ್ಕಾಗಿ ಕಾಯುತ್ತಿದ್ದ ರಾಜ್ಯದ ಜನತೆಗೆ ಪ್ರವಾಹದ ಭೀತಿ ಎದುರಾಗಿದೆ. ಮುಂಗಾರು ರಾಜ್ಯಕ್ಕೆ ಕಾಲಿಟ್ಟಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜನರು ಪ್ರವಾಹವನ್ನು ಎದುರಿಸುವಂತಾಗಿದೆ. ಎಲ್ಲಿ ನೋಡಿದರೂ ನೀರು ಸುತ್ತುವರೆದಿದೆ. ಕಣ್ಣಾಡಿಸಿದಷ್ಟು ದೂರಕ್ಕೂ ನೀರನ್ನು ನೋಡಬಹುದಾಗಿದೆ.
ಕಟ್ಟಡದ ನೆಲಮಹಡಿ, ಮೊದಲನೇ ಮಹಡಿಯವರೆಗೂ ನೀರು ನುಗ್ಗಿದೆ. ಮೂವರು ನೀರುಪಾಲಾಗಿದ್ದಾರೆ. ಸಾಕಷ್ಟು ಆಸ್ತಿಪಾಸ್ತಿಗಳು ನಾಶವಾಗಿದೆ. ಮಂಗಳೂರಿಗೆ ಮಳೆಯ ಅಬ್ಬರವೇನೂ ಹೊಸದಲ್ಲ ಆದರೆ ಈ ಬಾರಿ ನೆರೆಯಿಂದಾಗಿ ಜನರಲ್ಲಿ ಆತಂಕ ಮನೆಮಾಡಿದೆ.ಒಂದೆಡೆ ಮುಂಗಾರು ಪ್ರವೇಶದ ಮುನ್ಸೂಚನೆ, ಇನ್ನೊಂದೆಡೆ ಮೆಕ್ನು ಚಂಡಮಾರುತದ ಪರಿಣಾಮದಿಂದಾಗಿ ಕರಾವಳಿಯಲ್ಲಿ ಭಾರೀ ಮಳೆ ಸುರಿಯುತ್ತಿದೆ.
ಚಿತ್ರಗಳು : ಮಳೆಯ ರುದ್ರನರ್ತನಕ್ಕೆ ನಲುಗಿದ ದಕ್ಷಿಣ ಕನ್ನಡ, ಉಡುಪಿ
ಮಂಗಳೂರಿನಲ್ಲಿ ನೆರೆಯ ಭೀತಿ ಆವರಿಸಿದೆ. ಮಂಗಳವಾರ ಮುಂಜಾನೆಯಿಂದ ಮಂಗಳೂರು ಸೇರಿದಂತೆ ಸುತ್ತಮುತ್ತಲ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
ಮಂಗಳೂರು ನಗರದ ಹಲವೆಡೆ ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದ್ದು, ರಸ್ತೆಯಿಡೀ ನೀರಿನಿಂದ ಆವೃತವಾಗಿದೆ. ನಗರದ ಎಂ.ಜಿ.ರಸ್ತೆ, ಕೆ.ಎಸ್.ರಾವ್ ರಸ್ತೆ, ಹಂಪನಕಟ್ಟಾ ಪ್ರದೇಶದಲ್ಲಿ ಮಳೆ ನೀರು ರಸ್ತೆಯಲ್ಲಿ ಹರಿಯುತ್ತಿದ್ದು, ವಾಹನ ಸಂಚಾರಕ್ಕೆ ಧಕ್ಕೆ ಉಂಟಾಗಿದೆ. ಇನ್ನು ನೀರಿನಲ್ಲಿ ಹಾವುಗಳು ಕಾಣಿಸಿಕೊಂಡು ಇನ್ನಷ್ಟು ಆತಂಕ ನಿರ್ಮಾಣವಾಗಿದೆ.
ನಗರದ ತಗ್ಗು ಪ್ರದೇಶದ ಅಂಗಡಿ, ವ್ಯಾಪಾರ ಕೇಂದ್ರಗಳಿಗೆ ನೀರು ನುಗ್ಗಿದೆ. ಹಲವು ಮನೆಗಳಿಗೂ ನೀರು ನುಗ್ಗಿದ್ದು, ಆರಂಭಿಕ ಮಳೆಯಲ್ಲೇ ಜನರ ಪರದಾಟ ಆರಂಭವಾಗಿದೆ. ನಗರದ ಕೊಟ್ಟಾರ, ಅತ್ತಾವರದಲ್ಲಿ ನೆರೆ ಪರಿಸ್ಥತಿ ಸೃಷ್ಠಿಯಾಗಿದ್ದು, ಎಲ್ಲೆಡೆ ನೀರು ಆವರಿಸಿರುವ ಪರಿಣಾಮ ಜನರು ಆತಂಕ ಎದುರಿಸುತ್ತಿದ್ದಾರೆ.

ಮಂಗಳೂರಿನಲ್ಲಿ ಸುರಿದ ಭಾರಿ ಮಳೆಗೆ ಜನರು ಕಂಗಾಲು
ದಕ್ಷಿಣ ಕನ್ನಡ, ಕರಾವಳಿ ಭಾಗದಲ್ಲಿ ಮುಂಗಾರು ಚುರುಕುಗೊಂಡಿದೆ. ಮಂಗಳವಾರ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಮುಂಗಾರಿನ ಬರುವಿಕೆಗಾಗಿ ಕಾಯುತ್ತಿದ್ದ ಜನರಿಗೆ ಮಳೆ ಶಾಕ್ ನೀಡಿದೆ. ಮಳೆಯಿಂದ ಉಂಟಾದ ಹಾನಿಯಯನ್ನು ಚಿತ್ರದಲ್ಲಿ ನೋಡಬಹುದು.

ಮಂಗಳೂರಿನಲ್ಲಿ ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಜನರನ್ನು ಸ್ಥಳಾಂತರಿಸುತ್ತಿರುವುದು
ಮಂಗಳೂರಿನಲ್ಲಿ ನಿನ್ನೆ ಸುರಿದ ಭಾರಿ ಮಳೆಗೆ ಎಲ್ಲೆಡೆಯೂ ನೀರು ನಿಂತಿದೆ. ಜನರನ್ನು ಒಂದೆಡೆಯಿಂದ ಇನ್ನೊಂದೆಡೆಗೆ ರವಾನಿಸಲಾಯಿತು. ವಿದ್ಯಾರ್ಥಿಗಳನ್ನು ಅವರ ಮನೆಗಳಿಗೆ ಸೇರಿಸಲಾಯಿತು. ಇಂದೂ ಕೂಡ ಮೋಡದ ವಾತಾವರಣ ಮುಂದುವರೆದಿತ್ತು. ಮತ್ತೆ ಮಳೆಯಾಗುವ ಎಲ್ಲಾ ಸಾಧ್ಯತೆಗಳು ಗೋಚರಿಸುತ್ತಿವೆ.

ರಸ್ತೆಗಳು ಜಲಾವೃತ, ವಾಹನಗಳಿಗೆ ಸಮಸ್ಯೆ
ಮಂಗಳೂರಿನಲ್ಲಿ ಭಾರಿ ಮಳೆಯಿಂದಾಗಿ ರಸ್ತೆಗಳು ಜಲಾವೃತವಾಗಿದೆ. ಹಾಗಾಗಿ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿತ್ತು. ಇಷ್ಟೇ ಅಲ್ಲದೆ ಅಲ್ಲಲ್ಲಿ ಮರಗಳು, ಕರೆಂಟ್ ಕಂಬಗಳು ಕೂಡ ಧರೆಗುರಿಳಿದ್ದ ಪರಿಣಾಮ ಸಂಚಾರದಲ್ಲಿ ಅಡಚಣೆ ಉಂಟಾಯಿತು.

ವಿದ್ಯಾರ್ಥಿಗಳ ಸಂಭ್ರಮ
ಮಂಗಳವಾರ ಸಿಬಿಎಸ್ಇ 10ನೇ ತರಗತಿ ಫಲಿತಾಂಶ ಪ್ರಕಟವಾಗಿದೆ. ಇದರ ಹಿನ್ನೆಲೆಯಲ್ಲಿ ಅಮೃತಸರದ ವಿದ್ಯಾರ್ಥಿಗಳು ಸಂತಸ ವ್ಯಕ್ತಪಡಿಸಿದ್ದು ಹೀಗೆ.

ಶಿಮ್ಲಾದಲ್ಲಿ ಕುಡಿಯುವ ನೀರಿಗೂ ಹಾಹಾಕಾರ
ಶಿಮ್ಲಾದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ. ಬರುವ ಟ್ಯಾಂಕರ್ ನೀರಿಗಾಗಿ ಕಾದು ಜನರು ನೀರು ತುಂಬಿಸಿಕೊಳ್ಳಲು ಸರತಿಯಲ್ಲಿ ನಿಂತಿರುವ ದೃಶ್ಯವನ್ನು ಚಿತ್ರದಲ್ಲಿ ನೋಡಬಹುದು.

ಸ್ವಾಗತಿಸಿದ ಮಕ್ಕಳ ಜತೆ ಮಾತುಕತೆ ನಡೆಸುತ್ತಿರುವ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ ಇಂಡೋನೇಶಿಯಾದ ಜಕಾರ್ತಾಕ್ಕೆ ಮಂಗಳವಾರ ಭೇಟಿ ನೀಡಿದ ಸಮಯದಲ್ಲಿ ಅವರನ್ನು ಸ್ವಾಗತಿಸಿದ ಮಕ್ಕಳ ಜತೆಗೆಯಲ್ಲಿ ಮಾತುಕತೆಯಲ್ಲಿ ತೊಡಗಿರುವುದು.

ರೈಲಿನಲ್ಲಿ ಬೆಂಕಿ ನಂದಿಸುವ ಕಾರ್ಯದಲ್ಲಿ ಅಗ್ನಿಶಾಮಕ ಸಿಬ್ಬಂದಿ
ಛತ್ರಪತಿ ಶಿವಾಜಿ ಟರ್ಮಿನಲ್ನಲ್ಲಿ ಸೊಲ್ಲಾಪುರ ಎಕ್ಸ್ಪ್ರೆಸ್ನಲ್ಲಿ ಮಂಗಳವಾರ ಅಚಾನಕ್ ಬೆಂಕಿ ಕಾಣಿಸಿಕೊಂಡಿದೆ. ಅಗನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿರುವ ದೃಶ್ಯವನ್ನು ನೀವು ನೋಡಬಹುದು.
-
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಕರ್ನಾಟಕದ ಕರಾವಳಿಯಲ್ಲಿ ಕಾಣದ ಅಗ್ನಿಕುಂಡದ ಮೇಲೆ ಘನತ್ಯಾಜ್ಯ ವಿಲೇವಾರಿಗೆ ವೀರಾವೇಶದ ಜಿದ್ದಾಜಿದ್ದಿ: ರಾಜಾರಾಂ ತಲ್ಲೂರು ಬರಹ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ











Click it and Unblock the Notifications