15 ದಿನ ಕಾಲ 'ಮಂಗಳ'ನೊಂದಿಗೆ ಮಾತಿಲ್ಲ
ಬೆಂಗಗಳೂರು, ಜೂ. 08: ದೇಶದ ಹೆಮ್ಮೆಯನ್ನು ಜಗತ್ತಿಗೆ ಸಾರಿದ ಮಂಗಳಯಾನ 'ಮಾಮ್' ಜೂ. 8 ರಿಂದ 15 ದಿನಗಳ ಕಾಲ ಸಂಪರ್ಕ ಕಡಿದುಕೊಳ್ಳಲಿದೆ. ಮಂಗಳ ಮತ್ತು ಭೂಮಿ ನಡುವೆ ಸೂರ್ಯ ಅಡ್ಡ ಬರುವುದೇ ಸಂಪರ್ಕ ಕಡಿತವಾಗಲು ಕಾರಣ ಎಂದು ಇಸ್ರೋ ವಿಜ್ಞಾನಿಗಳು ತಿಳಿಸಿದ್ದಾರೆ.
ಜೂನ್ 22ರವರೆಗೂ ನೌಕೆ ಬ್ಲಾಕೌಟ್ ವಲಯದಲ್ಲಿರುತ್ತದೆ. ನಂತರ ಮತ್ತೆ ಸಂಪರ್ಕ ಸಾಧಿಸಲಾಗುವುದು. ಈ ಸಂದರ್ಭದಲ್ಲಿ ಕಕ್ಷೆ ತಾನೇ ತಾನಾಗಿ ಇರುವ ಸ್ವಯಂ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಮರ್ಥ್ಯ ಹೊಂದಿದ್ದು ಯಾವ ಸಮಸ್ಯೆಗಳು ಆಗುವುದಿಲ್ಲ ಎಂದು ತಿಳಿಸಿದ್ದಾರೆ.[ಮಂಗಳಲೋಕಕ್ಕೆ ಮಂಗಳಯಾನ; ನಡೆದುಬಂದ ದಾರಿ!]

ಬ್ಲಾಕ್ಔಟ್ ಅವಧಿಯಲ್ಲಿ ಕಕ್ಷೆ ಯಾವ ರೀತಿ ಕೆಲಸ ಮಾಡಬೇಕು ಎಂಬುದನ್ನು ಪ್ರೋಗ್ರಾಮ್ ಮಾಡಲಾಗಿದೆ. ಮಂಗಳಯಾನ ನೌಕೆ ಕೆಂಪುಗ್ರಹದ ಅಂಗಳವನ್ನು ಯಶಸ್ವಿಯಾಗಿ ತಲುಪಿದ ನಂತರ ಮೊದಲ ಬಾರಿಗೆ ದೀರ್ಘ ಕಾಲ ಸಂಪರ್ಕ ಕಡಿದುಕೊಳ್ಳಲಿದೆ.
ಮುಂದಿನ ವರ್ಷ ಮೇ ತಿಂಗಳಲ್ಲಿ ಮತ್ತೆ ಬ್ಲಾಕ್ಔಟ್ ವಿದ್ಯಮಾನ ಜರುಗಲಿದೆ. ಆ ಅವಧಿಯಲ್ಲೂ ನೌಕೆಯು ಅವಲಂಬನ ಇಲ್ಲದ ಸ್ಥಿತಿಯಲ್ಲಿರುತ್ತದೆ. ಬಾಹ್ಯಾಕಾಶ ಅಂಗಳದಲ್ಲಿ ಇಂಥ ಘಟನಾವಳಿಗಳು ಜರುಗುತ್ತಲೇ ಇರುತ್ತವೆ.[ಮಂಗಳನ ಮೇಲಿನ ಸೂರ್ಯಾಸ್ತ ದೃಶ್ಯ ಹೇಗಿರುತ್ತದೆ?]
ಬ್ಲಾಕ್ಔಟ್ ಎಂದರೇನು?
ಸೌರಮಂಡಲದಲ್ಲಿರುವ ಗ್ರಹಗಳ ಕ್ರಮದ ಲೆಕ್ಕಾಚಾರದಂತೆ ಮಂಗಳ ಗ್ರಹ ಭೂಮಿಯ ಹಿಂದಿದೆ. ಈ ಎರಡೂ ಗ್ರಹಗಳ ನಡುವೆ ಸೂರ್ಯನ ಪ್ರವೇಶವಾದಾಗ ರೇಡಿಯೊ ಸಿಗ್ನಲ್ಗಳು ಭೂಮಿ ತಲುಪುವುದು ಕಷ್ಟ. ಒಂದು ವೇಳೆ ಈ ಹಂತದಲ್ಲಿ ಉಪಗ್ರಹ ಕೆಲಸ ಮಾಡಿದರೆ ಅವುಗಳಿಗೆ ಹಾನಿಯಾಗುವ ಅಪಾಯವಿರುತ್ತದೆ. ಹಾಗಾಗಿ ಅವುಗಳನ್ನು ತಟಸ್ಥ ಸ್ಥಿತಿಯಲ್ಲಿ ಇಡಲಾಗುತ್ತದೆ.[ಸಾಕ್ಷಾತ್ ದೇವರನ್ನೇ ಸಂಕಷ್ಟದಲ್ಲಿ ಸಿಲುಕಿಸುವ ಗ್ರಹಣ!]
ಕಳೆದ ಸಪ್ಟೆಂಬರ್ 24 ರಂದಯ ಮಂಗಳ ಗ್ರಹದ ಅಧ್ಯಯನಕ್ಕೆ ಭಾರತ ಅತಿ ಕಡಿಮೆ ವೆಚ್ಚದ ಉಪಗ್ರಹವನ್ನು ಉಡಾವಣೆ ಮಾಡಿತ್ತು. ಇದು ಜಗತ್ತಿನಾದ್ಯಂತ ಮೆಚ್ಚುಗೆ ಗಳಿಸಿತ್ತು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications