ಮೋದಿಯನ್ನು 'ನೀಚ' ಎಂದ ಅಯ್ಯರ್, ಮೋದಿಯಿಂದ ತಕ್ಕ ಉತ್ತರ
ಅಹಮದಾಬಾದ್, ಡಿಸೆಂಬರ್ 07: ಗುಜರಾತ್ ವಿಧಾನಸಭಾ ಚುನಾವಣೆಯ ಬಹಿರಂಗ ಪ್ರಚಾರದ ಅಂತಿಮ ದಿನದಂದು ಕಾಂಗ್ರೆಸ್ ಹಾಗೂ ಬಿಜೆಪಿಯ ವಾಕ್ಸಮರ ತಾರಕಕ್ಕೇರಿದೆ. ಹಿರಿಯ ಕಾಂಗ್ರೆಸ್ಸಿಗ ಮಣಿಶಂಕರ್ ಅಯ್ಯರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ನೀಚ ಎಂದು ಕರೆದಿದ್ದಲ್ಲದೆ 'ಸಭ್ಯತೆ' ಇಲ್ಲದವನು ಎಂದು ಹೇಳಿದ್ದಾರೆ.
ಡಾ. ಬಿ. ಆರ್ ಅಂಬೇಡ್ಕರ್ ಅವರು ಕಂಡ ಕನಸನ್ನು ನನಸಾಗಿಸಲು ಶ್ರಮಿಸಿದವರಲ್ಲಿ ಜವಹರಲಾಲ್ ನೆಹರೂ ಅಗ್ರಗಣ್ಯರು. ದೇಶಕ್ಕಾಗಿ ದುಡಿದ ಇಂಥ ಕುಟುಂಬದ ಬಗ್ಗೆ ಕೆಟ್ಟದಾಗಿ ಮಾತನಾಡುವ ಇಂಥ ವ್ಯಕ್ತಿ(ಮೋದಿ)ಯನ್ನು ನೀಚ ಎನ್ನದೇ ಇರಲಾಗದು, ಆತನಿಗೆ ಯಾವುದೇ ನಾಗರಿಕ ಸಭ್ಯತೆಗಳಿಲ್ಲ. ಸತ್ಯಂತ ಹೀನಾಯ ರೀತಿಯ ರಾಜಕೀಯವನ್ನು ಮಾಡುತ್ತಿದ್ದಾರೆ ಎಂದು ಎಎನ್ಐ ಜತೆ ಮಾತನಾಡುತ್ತಾ ಅಯ್ಯರ್ ಹೇಳಿದರು.
ಅಯ್ಯರ್ ಕೆರಳಲು ಕಾರಣ?: ಡಾ. ಅಂಬೇಡ್ಕರ್ ಅವರನ್ನು ಕಾಂಗ್ರೆಸ್ ಮರೆತುಬಿಟ್ಟಿದೆ. ಅಂಬೇಡ್ಕರ್ ಅವರ ಕೊಡುಗೆಗಳನ್ನು ಅಳಿಸಿ ಹಾಕಲು ಯತ್ನಿಸಿ ಕಾಂಗ್ರೆಸ್ ಸೋತಿದೆ.
They can call me 'Neech'- Yes, I am from the poor section of society and will spend every moment of my life to work for the poor, Dalits, Tribals and OBC communities. They can keep their language we will do our work: PM @narendramodi
— narendramodi_in (@narendramodi_in) December 7, 2017
ಜನರ ಮನಸ್ಸಿನಿಂದ ಅಂಬೇಡ್ಕರ್ ಅವರನ್ನು ಅಳಿಸಲು ಸಾಧ್ಯವಿಲ್ಲ ಎಂದು ಮೋದಿ ಅವರು ಚುನಾವಣಾ ಪ್ರಚಾರ ಭಾಷಣದ ವೇಳೆ ಹೇಳಿದ್ದರು. ಇದಕ್ಕೆ ಉತ್ತರವಾಗಿ ಅಯ್ಯರ್ ಮೇಲ್ಕಂಡ ರೀತಿ ಪ್ರತಿಕ್ರಿಯಿಸಿದ್ದಾರೆ.
#WATCH: "Ye aadmi bahut neech kisam ka aadmi hai, is mein koi sabhyata nahi hai, aur aise mauke par is kisam ki gandi rajniti karne ki kya avashyakta hai?: Congress' Mani Shankar Aiyar on PM Modi pic.twitter.com/sNXeo6a1Gi
— ANI (@ANI) December 7, 2017
ಉತ್ತಮವಾದ ವಿದ್ಯಾಸಂಸ್ಥೆಯಲ್ಲಿ ವ್ಯಾಸಂಗ ಮಾಡಿರುವ ಹಿರಿಯ ರಾಜಕಾರಣಿಯೊಬ್ಬರು ಇಂಥ ಕೆಟ್ಟ ಭಾಷೆ ಬಳಸುತ್ತಿದ್ದಾರೆ. ಇದಕ್ಕೆ ಗುಜರಾತಿನ ಜನತೆ ತಕ್ಕ ಉತ್ತರ ನೀಡಲಿದ್ದಾರೆ ಎಂದಿದ್ದಾರೆ.