'ಐ ಲವ್ ಪಾಕಿಸ್ತಾನ್' ಎಂದ ಮಣಿಶಂಕರ್ ಅಯ್ಯರ್
ನವದೆಹಲಿ, ಫೆಬ್ರವರಿ 12: ಕಾಂಗ್ರೆಸ್ಸಿನಿಂದ ಅಮಾನತುಗೊಂಡಿರುವ ಹಿರಿಯ ನಾಯಕ ಮಣಿಶಂಕರ್ ಅಯ್ಯರ್ ಮತ್ತೆ ಸುದ್ದಿಯಲ್ಲಿದ್ದಾರೆ. ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. 'ಭಾರತದಷ್ಟೇ ಪಾಕಿಸ್ತಾನವನ್ನು ಪ್ರೀತಿಸುತ್ತೇನೆ' ಎಂದು ಹೇಳಿದ್ದಾರೆ.
ಕರಾಚಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಅವರು, ನಾನು ಪಾಕಿಸ್ತಾನವನ್ನು ಪ್ರೀತಿಸುತ್ತೇನೆ. ಏಕೆಂದರೆ ನಾನು ಭಾರತವನ್ನು ಪ್ರೀತಿಸುತ್ತೇನೆ ಎಂದು ಹೇಳುವ ಮೂಲಕ ಹೊಸ ವಿವಾದವನ್ನು ಹುಟ್ಟುಹಾಕಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಸಂಜ್ವಾನ ಸೇನಾ ಶಿಬಿರದ ಮೇಲೆ ಪಾಕ್ ಪ್ರಾಯೋಜಿತ ಉಗ್ರರ ಪಡೆ ದಾಳಿ ನಡೆಸಿದ್ದರ ವಿರುದ್ಧ ಭಾರತ ಕಿಡಿಕಾರಿದೆ. 'ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಬೇಕಾಗುತ್ತದೆ' ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಎಚ್ಚರಿಸಿದ್ದಾರೆ.
ಉಭಯ ರಾಷ್ಟ್ರಗಳ ನಡುವೆ ಮಾತುಕೆಗೆ ಸ್ವಲ್ಪ ಸಮಯಾವಕಾಶ ಬೇಕಾಗಿದೆ. ಸಮಸ್ಯೆ ಪರಿಹಾರಕ್ಕಾಗಿ ಇಸ್ಲಾಮಾಬಾದ್ ದ್ವಿಪಕ್ಷೀಯ ಪ್ರಾಮುಖ್ಯತೆ ಮಾತುಕತೆ ನೀತಿಯನ್ನು ಒಪ್ಪಿಕೊಂಡಿದೆ. ಆದರೆ, ದೆಹಲಿ ಅದನ್ನು ಒಪ್ಪಿಲ್ಲ ಎಂದು ಹೇಳಿದರು.
ನಿನ್ನ ನೆರೆಹೊರೆಯವರನ್ನು ನಿನ್ನಂತೆಯೇ ಪ್ರೀತಿಸು ಎನ್ನುವಂತೆ ಭಾರತವನ್ನು ನಾನು ಪ್ರೀತಿಸುತ್ತೇನೆ. ಅದರಂತೆ ಪಾಕಿಸ್ತಾನವನ್ನು ಪ್ರೀತಿಸುತ್ತೇನೆ ಎಂದರು.
ಗುಜರಾತ್ ವಿಧಾನಸಭೆ ಚುನಾವಣೆ ವೇಳೆಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು 'ನೀಚ್ ಆದ್ಮಿ' ಎಂದು ಜರೆದಿದ್ದರು. ನಂತರ ರಾಹುಲ್ ಗಾಂಧಿ ಸೂಚನೆ ಮೇರೆಗೆ ಕ್ಷಮೆ ಕೋರಿದ್ದರು. ಆದರೆ, ಅವರನ್ನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಲಾಗಿತ್ತು.
-
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
US-Iran Talks: ಪಾಕ್ ನೆಲದಲ್ಲಿ 21 ಗಂಟೆಗಳ ಸಂಧಾನ ಮಾತುಕತೆ ವಿಫಲ: ಹೆಚ್ಚಿದ ಯುದ್ಧ ಭೀತಿ- ಪ್ರಮುಖಾಂಶಗಳು -
CBFC: "ಜನ ನಾಯಗನ್" ಸಿನಿಮಾ ಲೀಕ್ ವರದಿ ಆಧಾರರಹಿತ: ಆರೋಪಗಳಿಗೆ ಸಿಬಿಎಫ್ಸಿ ಸ್ಪಷ್ಟನೆ -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ











Click it and Unblock the Notifications