ಮಾ.5ರಂದು ಮಣಿಪುರ ಎರಡನೇ ಹಂತದ ಚುನಾವಣೆ: ಪೂರ್ಣ ಮಾಹಿತಿ
ಮಣಿಪುರದ 6 ಜಿಲ್ಲೆಗಳ ಒಟ್ಟು 22 ವಿಧಾನಸಭೆ ಕ್ಷೇತ್ರಗಳಿಗೆ ಶನಿವಾರ ಮತದಾನ ನಡೆಯಲಿದ್ದು, ಮಾರ್ಚ್ 3ರಂದು ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ. ತೌಬಲ್, ಜಿರಿಬಾಮ್, ಚಾಂಡೆಲ್, ಉಖ್ರುಲ್, ಸೇನಾಪತಿ, ತಮೆಂಗ್ಲಾಂಗ್ ಜಿಲ್ಲೆಗಳಲ್ಲಿ ಎರಡನೇ ಹಂತದ ಚುನಾವಣಾ ಮತದಾನ ನಡೆಯಲಿದೆ. ಈ ಬಾರಿ ಮಣಿಪುರ ಚುನಾವಣೆ 2022ರ ಎರಡನೇ ಹಂತದಲ್ಲಿ 425,192 ಮಹಿಳೆಯರು ಮತ್ತು 407,224 ಪುರುಷರು ಸೇರಿದಂತೆ ಸುಮಾರು 8.3 ಲಕ್ಷ ಮತದಾರರು ತಮ್ಮ ಮತ ಚಲಾಯಿಸಲಿದ್ದಾರೆ.
ಎರಡನೇ ಹಂತದಲ್ಲಿ ಚಾಂಡೆಲ್ ಕ್ಷೇತ್ರದಲ್ಲಿ ಬಿಜೆಪಿ ಮತ್ತು ನಾಗಾ ಪೀಪಲ್ಸ್ ಫ್ರಂಟ್ ನಡುವೆ ನೇರ ಸ್ಪರ್ಧೆ ನಿರೀಕ್ಷೆಯಿದೆ. ಆದರೆ ನುಂಗ್ಬಾದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಮುಖಾಮುಖಿ ಆಗಲಿವೆ. ಇನ್ನೊಂದು ಕಡೆ ಖಂಗಾಬೊಕ್, ವಾಂಗ್ಜಿಂಗ್-ತೆಂತಾ, ಸುಗ್ನೂ, ಮಾವೋ ಮತ್ತು ಉಖ್ರುಲ್ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ತ್ರಿಕೋನ ಹೋರಾಟ ನಡೆಯಲಿದೆ.
ರಾಜ್ಯದಲ್ಲಿ ಪ್ರಮುಖರಿಗೆ ಅಗ್ನಿ ಪರೀಕ್ಷೆ:
ಎರಡನೇ ಹಂತದ ಮತದಾನವನ್ನು ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ನಾಯಕ ಇಬೋಬಿ ಸಿಂಗ್, ಮಾಜಿ ಉಪಮುಖ್ಯಮಂತ್ರಿ ಗೈಖಾಂಗಮ್, ಹಾಲಿ ಕ್ರೀಡಾ ಸಚಿವ ಲೆಟ್ಪಾವೊ ಹಾಕಿಪ್, ಸಾರ್ವಜನಿಕ ಆರೋಗ್ಯ ಎಂಜಿನಿಯರಿಂಗ್ ಸಚಿವ ಲೊಸಿ ಡಿಖೋ, ಅರಣ್ಯ ಸಚಿವ ಅವಾಂಗ್ಬೋ ನ್ಯೂಮೈ ಪಾಲಿಗೆ ಅಗ್ನಿ ಪರೀಕ್ಷೆ ಎಂದು ಹೇಳಲಾಗುತ್ತಿದೆ. ಈ ನಾಯಕರು ಕ್ರಮವಾಗಿ ತೌಬಲ್, ನುಂಗ್ಬಾ, ತೆಂಗ್ನೌಪಾಲ್, ಮಾವೋ ಮತ್ತು ತಮೇಯ್ ಕ್ಷೇತ್ರಗಳಿಂದ ತಮ್ಮ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

ಮೊದಲ ಹಂತದಲ್ಲಿ ನಕಲಿ ಮತದಾನದ ಆರೋಪ:
ಕಳೆದ ಫೆಬ್ರವರಿ 28ರಂದು ಮಣಿಪುರದಲ್ಲಿ ಮೊದಲ ಹಂತದ ಮತದಾನ ನಡೆದು ಶೇ 78.03ರಷ್ಟು ಶೇಕಡಾವಾರು ಮತದಾನ ದಾಖಲಾಗಿತ್ತು. ಆದರೆ, ಮೊದಲ ಹಂತದಲ್ಲಿ ಪ್ರತಿಪಕ್ಷ ಕಾಂಗ್ರೆಸ್ ಬೂತ್ಗಳನ್ನು ವಶಪಡಿಸಿಕೊಂಡು ಚುನಾವಣಾ ಸಮಯದಲ್ಲಿ ಬೋಗಸ್ ಮತಗಳನ್ನು ಹಾಕುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ಇದಕ್ಕೆ ಸಂಬಂಧಿಸಿದಂತೆ ಬುಧವಾರ ಮಣಿಪುರದ ಬಿಜೆಪಿ ಕಾರ್ಯಕರ್ತರು ಮಣಿಪುರದ ಮುಖ್ಯ ಚುನಾವಣಾಧಿಕಾರಿಗೆ ಪತ್ರ ಬರೆದಿದ್ದು, ಈ 23 ಬೂತ್ಗಳಿಗೆ ಮರು ಚುನಾವಣೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.
ಮಣಿಪುರ ಮತದಾನ ದಿನಾಂಕ ಪರಿಷ್ಕರಣೆ:
ಮಣಿಪುರದಲ್ಲಿ ಮಾರ್ಚ್ 5ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಈ ಹಿಂದೆ ಫೆಬ್ರವರಿ 27 ಮತ್ತು ಮಾರ್ಚ್ 3 ರಂದು ಮತದಾನ ನಿಗದಿಯಾಗಿತ್ತು. ನಂತರ ಚುನಾವಣಾ ದಿನಾಂಕಗಳನ್ನು ಪರಿಷ್ಕರಿಸಲಾಗಿತ್ತು. ಪಂಚ ರಾಜ್ಯಗಳಾದ ಮಣಿಪುರ, ಪಂಜಾಬ್, ಉತ್ತರ ಪ್ರದೇಶ, ಗೋವಾ ಮತ್ತು ಉತ್ತರಾಖಂಡದಲ್ಲಿ ಒಟ್ಟು ಏಳು ಹಂತಗಳಲ್ಲಿ ಮತದಾನ ಪ್ರಕ್ರಿಯೆ ನಡೆಸಲಾಗುತ್ತಿದ್ದು, ಮಾರ್ಚ್ 7ರಂದು ಉತ್ತರ ಪ್ರದೇಶದಲ್ಲಿ ಅಂತಿಮ ಹಾಗೂ ಏಳನೇ ಹಂತದ ಮತದಾನ ನಡೆಯಲಿದೆ. ಮಾರ್ಚ್ 10ರಂದು ಐದೂ ರಾಜ್ಯಗಳ ವಿಧಾನಸಭೆ ಚುನಾವಣಾ ಫಲಿತಾಂಶ ಹೊರ ಬೀಳಲಿದೆ.
Recommended Video
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications