ಉಕ್ಕಿನ ಮಹಿಳೆ ಐರೋಮ್ ಶರ್ಮಿಳಾ ಉಪವಾಸ ಅಂತ್ಯ
ನವದೆಹಲಿ, ಜು.26: ಸರಿ ಸುಮಾರು 16 ವರ್ಷಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಮಣಿಪುರದ ಉಕ್ಕಿನ ಮಹಿಳೆ ಎನಿಸಿಕೊಂಡಿರುವ ಐರೋಮ್ ಶರ್ಮಿಳಾ ಅವರು ತಮ್ಮ ಉಪವಾಸ ಅಂತ್ಯಗೊಳಿಸಲು ನಿರ್ಧರಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಮಂಗಳವಾರ(ಜುಲೈ 26) ತಿಳಿಸಿದರು.
ಐರೋಮ್ ಅವರು ಶರ್ಮಿಳಾ ಅವರು ಆಗಸ್ಟ್ 9ರಂದು ಉಪವಾಸ ಸತ್ಯಾಗ್ರಹ ಕೊನೆಗೊಳಿಸುವ ಸುದ್ದಿ ಸಿಕ್ಕಿದೆ. ಅಲ್ಲದೆ, ನಂತರ ಅವರು ಚುನಾವಣೆಯಲ್ಲಿ ಸ್ಪರ್ಧಿಸುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. [ಅಂತೂ ಉಕ್ಕಿನ ಮಹಿಳೆ ಶರ್ಮಿಳಾಗೆ ಸಿಕ್ಕಿತು ಜಯ ]
ಸಶಸ್ತ್ರ ಪಡೆಗಳಿಗೆ ವಿಶೇಷ ಅಧಿಕಾರ ಕಾಯ್ದೆ (AFSPA)ಯನ್ನು ಹಿಂದಕ್ಕೆ ಪಡೆಯುವಂತೆ ಆಗ್ರಹಿಸಿ ಶರ್ಮಿಳಾ ಅವರು ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ. ಈ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಲು ಬಯಸಿರುವುದಾಗಿ ಮಂಗಳವಾರ ಇಂಫಾಲ್ ಕೋರ್ಟಿನ ಆವರಣದಲ್ಲಿ ಸುದ್ದಿಗಾರರಿಗೆ ತಿಳಿಸಿದರು.
ನವೆಂಬರ್ 1, 2000ರಂದು ಮಣಿಪುರದ ಇಂಫಾಲ್ ವಿಮಾನ ನಿಲ್ದಾಣದ ಸಮೀಪದ 'ಮಾಲೋಂ' ಎಂಬಲ್ಲಿ ಬಸ್ಸಿಗಾಗಿ ಕಾಯುತಿದ್ದ ಹತ್ತು ಜನ ಸಾರ್ವಜನಿಕರನ್ನು ಅಸ್ಸಾಂ ರೈಫಲ್ಸ್ ಯೋಧರು ಗುಂಡಿಕ್ಕಿ ಕೊಂದರು. ಇದನ್ನು ಪ್ರತಿಭಟಿಸಿ ಶರ್ಮಿಳಾ ಉಪವಾಸ ಸತ್ಯಾಗ್ರಹ ಆರಂಭಿಸಿದ್ದರು.ಈಗ ಚುನಾವಣೆಗೆ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದು, ಬಹುಶಃ ಪಕ್ಷೇತರರಾಗಿ ಕಣಕ್ಕಿಳಿಯುವ ಸಾಧ್ಯತೆಯಿದೆ.

ನ್ಯಾಯಾಂಗ ಬಂಧನದ ವಶದಲ್ಲಿರುವ ಶರ್ಮಿಳಾ
2006ರಲ್ಲಿ ದೆಹಲಿ ಜಂತರ್ ಮಂತರ್ ಬಳಿ ಉಪವಾಸ ಸತ್ಯಾಗ್ರಹ ಕೈಗೊಂಡ ವೇಳೆ ಐರೋಮ್ ಅವರ ವಿರುದ್ಧ ಐಪಿಸಿ ಸೆಕ್ಷನ್ 309 (ಆತ್ಮಹತ್ಯೆಗೆ ಯತ್ನ) ಅಡಿಯಲ್ಲಿ ದೂರು ದಾಖಲಿಸಲಾಗಿತ್ತು. ನ್ಯಾಯಾಂಗ ಬಂಧನದ ವಶದಲ್ಲಿರುವ ಶರ್ಮಿಳಾ ಅವರಿಗೆ ಮೂಗಿನ ಮೂಲಕ ನಳಿಕೆಯಿಂದ ದ್ರವ ಆಹಾರ ನೀಡಲಾಗುತ್ತಿದೆ.

ಚುನಾವಣೆಗೆ ಸ್ಪರ್ಧಿಸುವಂತೆ ಈ ಹಿಂದೆ ಆಹ್ವಾನ ಬಂದಿತ್ತು
2014ರ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವಂತೆ ಕಾಂಗ್ರೆಸ್ ಮತ್ತು ಆಮ್ಆದ್ಮಿ ಪಕ್ಷಗಳು ಶರ್ಮಿಳಾ ಬಳಿ ವಿನಂತಿಸಿಕೊಂಡಿದ್ದವು. ಆದರೆ ಶರ್ಮಿಳಾ ಈ ಬೇಡಿಕೆ ತಿರಸ್ಕರಿಸಿದ್ದು 'ನಾನು ರಾಜಕಾರಣಿಯಲ್ಲ, ಸಾಮಾಜಿಕ ಹೋರಾಟಗಾರ್ತಿ, ಇದನ್ನು ಮೊದಲು ಅರ್ಥ ಮಾಡಿಕೊಳ್ಳಿ' ಎಂದು ಹೇಳಿದ್ದರು.

ರವೀಂದ್ರನಾಥ ಠಾಗೋರ್ ಶಾಂತಿ ಪ್ರಶಸ್ತಿ ಸಿಕ್ಕಿದೆ
ಮಾನವ ಹಕ್ಕುಗಳ ಹೋರಾಟಕ್ಕೆ ಸಂಬಂಧಿಸಿ ಶರ್ಮಿಳಾ ಅವರಿಗೆ ಗ್ವಾನ್ಗು, ಮಲೆಯಾಳಂ ಫೌಂಡೇಶನ್ನಿಂದ 'ಮೈಲಮ್ಮಾ', ಮತ್ತು ರವೀಂದ್ರನಾಥ ಠಾಗೋರ್ ಶಾಂತಿ ಪ್ರಶಸ್ತಿಗಳನ್ನು ನೀಡಿ ಪುರಸ್ಕರಿಸಲಾಗಿದೆ.

ಏತಕ್ಕಾಗಿ ಹೋರಾಟ
ಸಶಸ್ತ್ರ ಪಡೆಗಳಿಗೆ ಈ ಕಾಯ್ದೆ ವಿಶೇಷಾಧಿಕಾರ ನೀಡುತ್ತದೆ. ಅನುಮಾನ ಬಂದವರನ್ನು ಬಂಧಿಸುವ ಮತ್ತು ಹತ್ಯೆ ಮಾಡುವ ಅಧಿಕಾರ ಪೊಲೀಸರಿಗೆ ದೊರೆಯುತ್ತದೆ. ಈಶಾನ್ಯ ರಾಜ್ಯಗಳು ಮತ್ತು ಜಮ್ಮು-ಕಾಶ್ಮೀರಕ್ಕೆ ಈ ಕಾನೂನು ಅನ್ವಯಿಸುತ್ತದೆ.
ಮಣಿಪುರ ಸೇರಿದಂತೆ ಸೇರಿದಂತೆ ಈಶಾನ್ಯ ರಾಜ್ಯಗಳಲ್ಲಿ ಸಶಸ್ತ್ರ ಪಡೆಗಳಿಗೆ ವಿಶೇಷಾಧಿಕಾರ ನೀಡಿರುವುದನ್ನು ವಿರೋಧಿಸಿ ಹೋರಾಟ ಆರಂಭ.ಸಶಸ್ತ್ರ ಪಡೆಗಳಿಗೆ ವಿಶೇಷಾಧಿಕಾರ ಕಾಯ್ದೆ ಸಪ್ಟೆಂಬರ್ 11, 1958ರಲ್ಲಿ ಜಾರಿಯಾಯಿತು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications