Breaking: ಮಣಿಪುರ ವಿಧಾನಸಭಾ ಚುನಾವಣೆ ದಿನಾಂಕ ಪ್ರಕಟ
ಮಣಿಪುರ, ಜನವರಿ 8: ಮಣಿಪುರ ರಾಜ್ಯದ ವಿಧಾನಸಭಾ ಕ್ಷೇತ್ರಗಳ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದೆ. ಮಣಿಪುರದಲ್ಲಿ ಎರಡು ಹಂತದ ಮತದಾನ ನಡೆಸಲು ಚುನಾವಣಾ ಆಯೋಗ ತೀರ್ಮಾನಿಸಿದೆ.
ಮಣಿಪುರದ ಒಟ್ಟು 60 ವಿಧಾನಸಭಾ ಕ್ಷೇತ್ರಗಳಿಗೆ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಫೆಬ್ರವರಿ 27ರಂದು ಮೊದಲ ಹಂತದ ಚುನಾವಣೆ ನಡೆದರೆ, ಮಾರ್ಚ್ 3ರಂದು ಎರಡನೇ ಹಾಗೂ ಕೊನೆಯ ಹಂತದ ಚುನಾವಣೆ ನಡೆಯಲಿದೆ. ಮಾರ್ಚ್ 10ರಂದು ಮಣಿಪುರದ ಜೊತೆಗೆ ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.
ಮಣಿಪುರದಲ್ಲಿ ಮೊದಲ ಹಂತದ ಚುನಾವಣೆ ಫೆಬ್ರವರಿ 1ರಂದು ಚುನಾವಣಾ ಅಧಿಸೂಚನೆ ಹೊರಬೀಳಲಿದ್ದು, ನಾಮಪತ್ರ ಸಲ್ಲಿಸಲು ಫೆಬ್ರವರಿ 8 ಕೊನೆಯ ದಿನಾಂಕವಾಗಿರುತ್ತದೆ, ಜನವರಿ 9ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ, ನಾಮಪತ್ರ ಹಿಂಪಡೆಯಲು ಫೆಬ್ರವರಿ 11 ಕೊನೆಯ ದಿನಾಂಕವಾಗಿರುತ್ತದೆ. ಫೆಬ್ರವರಿ 27ರಂದು ಮೊದಲ ಹಂತದ ಮತದಾನ ನಡೆಯಲಿದೆ.

ಇನ್ನು ಎರಡನೇ ಹಂತದ ಚುನಾವಣೆಯಲ್ಲಿ ಫೆಬ್ರವರಿ 4ರಂದು ಚುನಾವಣಾ ಅಧಿಸೂಚನೆ ಹೊರಬೀಳಲಿದ್ದು, ನಾಮಪತ್ರ ಸಲ್ಲಿಸಲು ಫೆಬ್ರವರಿ 11 ಕೊನೆಯ ದಿನಾಂಕವಾಗಿರುತ್ತದೆ, ಜನವರಿ 14ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ, ನಾಮಪತ್ರ ಹಿಂಪಡೆಯಲು ಫೆಬ್ರವರಿ 16 ಕೊನೆಯ ದಿನಾಂಕವಾಗಿರುತ್ತದೆ. ಮಾರ್ಚ್ 3ರಂದು ಎರಡನೇ ಹಂತದ ಮತದಾನ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಮಾಹಿತಿ ನೀಡಿದೆ.
ಮಣಿಪುರದಲ್ಲಿ ಅಭ್ಯರ್ಥಿಗಳ ವೆಚ್ಚದ ಮಿತಿ 28 ಲಕ್ಷ ರೂ. ಇರುತ್ತದೆ ಎಂದು ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ತಿಳಿಸಿದರು.
ಕಠಿಣ ಪರಿಸ್ಥಿತಿಯಲ್ಲೂ ಚುನಾವಣೆ
ಕಠಿಣ ಪರಿಸ್ಥಿತಿಯಲ್ಲೂ ಚುನಾವಣೆ ನಡೆಸುವುದು ನಮ್ಮ ಕರ್ತವ್ಯ. ಮುನ್ನೆಚ್ಚರಿಕೆ ನಿಯಮಗಳೊಂದಿಗೆ ಚುನಾವಣೆ ನಡೆಸಲು ತಿರ್ಮಾನಿಸಲಾಗಿದೆ. ಕೋವಿಡ್ ಸೇಫ್ ಎಲೆಕ್ಷನ್ ನಡೆಸಲಾಗುವುದು. ಹೆಚ್ಚು ಜನರು ಎಲೆಕ್ಷನ್ನಲ್ಲಿ ಭಾಗಿಯಾಗುವಂತೆ ಮಾಡಲಾಗುವುದು. ಈಗಾಗಲೇ ಸಾಕಷ್ಟು ಸಭೆಗಳನ್ನು ನಡೆಸಲಾಗಿದೆ ಎಂದು ಚುನಾವಣಾ ಆಯೋಗದ ಮುಖ್ಯ ಆಯುಕ್ತ ಸುಶೀಲ್ ಚಂದ್ರ ತಿಳಿಸಿದ್ದಾರೆ.
ಗೃಹ ಇಲಾಖೆ, ಆರೋಗ್ಯ ಇಲಾಖೆ, ರಾಜಕೀಯ ಪಕ್ಷಗಳ ಜೊತೆಗೆ ಸಭೆ ನಡೆಸಿದೆ. ರಾಜ್ಯ ಸರ್ಕಾರದ ಹಲವು ಅಧಿಕಾರಿಗಳ ಜೊತೆಗೆ ಸಭೆ ನಡೆದಿದೆ. ಅವರಿಂದ ಹಲವು ಸಲಹೆಗಳನ್ನು ಪಡೆಯಲಾಗಿದೆ ಎಂದು ಸುಶೀಲ್ ಚಂದ್ರ ಹೇಳಿದರು.
ಎಲ್ಲ ಮತದಾನ ಕೇಂದ್ರಗಳಲ್ಲಿ ಎಲ್ಲ ರೀತಿಯ ಮೂಲ ಸೌಕರ್ಯಗಳಿಗೆ ಆದ್ಯತೆ ನೀಡಲಾಗುತ್ತಿದೆ. ಕೆಳ ಮಹಡಿಯಲ್ಲಿ ಮತದಾನ ಕೇಂದ್ರಗಳಿರಲಿವೆ. ಸ್ಯಾನಿಟೈಜರ್ ವ್ಯವಸ್ಥೆ ಮಾಡಲಾಗುವುದು. ಕೋವಿಡ್ ಸೋಂಕಿತರು ಅಂಚೆ ಮತದಾನ ಮಾಡಬಹುದು ಎಂದು ಮಾಹಿತಿ ನೀಡಿದ್ದಾರೆ.
ಚುನಾವಣಾ ರ್ಯಾಲಿ, ರೋಡ್ ಶೋ ಇಲ್ಲ
ಕೋವಿಡ್ ಮುಕ್ತ ಚುನಾವಣೆ ನಡೆಸುವ ಆಶಯ ವ್ಯಕ್ತಪಡಿಸಿರುವ ಕೇಂದ್ರ ಚುನಾವಣಾ ಆಯೋಗವು, ಜ.15ರವರೆಗೆ ಚುನಾವಣಾ ಮೆರವಣಿಗೆ, ರೋಡ್ ಶೋ, ಪಾದಯಾತ್ರೆ, ಪ್ರಚಾರ ಸಭೆಗಳಿಗೆ ನಿರ್ಬಂಧ ವಿಧಿಸಿದೆ. ನಾಮಪತ್ರ ಸಲ್ಲಿಕೆ ವೇಳೆಯೂ ಮೆರವಣಿಗೆ ನಡೆಸುವಂತಿಲ್ಲ ಎಂದು ಆಯೋಗ ಹೇಳಿದೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications