Blast: ರಾಷ್ಟ್ರೀಯ ಹೆದ್ದಾರಿಯ ಸೇತುವೆಯಲ್ಲಿ ಬಾಂಬ್ ಸ್ಫೋಟ
ಎರಡನೇ ಹಂತದ ಲೋಕಸಭೆ ಚುನಾವಣೆಗೆ ಇನ್ನು 2 ದಿನ ಇರುವಾಗಲೇ ಮಣಿಪುರದಲ್ಲಿ 3 ಸ್ಫೋಟಗಳು ಸಂಭವಿಸಿವೆ. ಮಂಗಳವಾರ ಮತ್ತು ಬುಧವಾರದ ನಡುವಿನ ರಾತ್ರಿ ನಡೆದ ಈ ಸ್ಫೋಟದಿಂದ ಕಾಂಗ್ಪೋಕ್ಪಿ ಜಿಲ್ಲೆಯ ಸೇತುವೆಗೆ ಹಾನಿಯಾಗಿದೆ. ವರದಿಗಳ ಪ್ರಕಾರ, ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಾಯದ ಬಗ್ಗೆ ಯಾವುದೇ ವರದಿ ಆಗಿಲ್ಲ.
ಇಂಫಾಲನ್ನು ನಾಗಾಲ್ಯಾಂಡ್ನ ದಿಮಾಪುರ್ಗೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ-2 ರ ಸಂಚಾರದ ಮೇಲೆ ಪರಿಣಾಮ ಬೀರುತ್ತದೆ. ಘಟನೆಯ ನಂತರ ಭದ್ರತಾ ಪಡೆಗಳಿಗೆ ಎಚ್ಚರಿಕೆ ನೀಡಲಾಗಿದ್ದು, ಬಿಗಿ ಬಂದೋಬಸ್ತ್ ಮಾಡಲಾಗಿದೆ. ಸಪರ್ಮಿನಾ ಮತ್ತು ಕುಬ್ರು ಲಿಖಾ ಪ್ರದೇಶಗಳ ನಡುವಿನ ಸೇತುವೆಯ ಮೇಲೆ 12.45 ರ ಸುಮಾರಿಗೆ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟದಲ್ಲಿ ಬಳಸಿರುವ ಸಾಧ್ಯತೆ ಇದೆ ಎಂದು ಅವರು ಹೇಳಿದರು. ಸೇತುವೆಯ ಎರಡೂ ತುದಿಗಳಲ್ಲಿ ಮೂರು ಗುಂಡಿಗಳು ಮತ್ತು ಬಿರುಕುಗಳನ್ನು ಗಮನಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಭಾರೀ ವಾಹನ ಸಂಚಾರಕ್ಕೆ ಬ್ರೇಕ್
ಈ ಸೇತುವೆಯ ಮೇಲೆ ಭಾರೀ ವಾಹನಗಳ ಸಂಚಾರವನ್ನು ನಿಲ್ಲಿಸಲಾಗಿದೆ. ಸ್ಫೋಟದ ಕೆಲವೇ ನಿಮಿಷಗಳಲ್ಲಿ, ಪೊಲೀಸರು ಸ್ಥಳಕ್ಕೆ ತಲುಪಿ ಸೇತುವೆಯನ್ನು ತಮ್ಮ ವಶಕ್ಕೆ ಪಡೆದಿದ್ದಾರೆ. ಐಇಡಿ ಸ್ಫೋಟದ ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ಹೇಳಿದರು.
ಸ್ಫೋಟದಿಂದಾಗಿ ಸೇತುವೆಯ ಮಧ್ಯದಲ್ಲಿ 3 ಗುಂಡಿಗಳು ಮತ್ತು ಎರಡೂ ತುದಿಗಳಲ್ಲಿ ಬಿರುಕುಗಳು ಉಂಟಾಗಿವೆ. ಘಟನೆಯ ನಂತರ ಸೇತುವೆಯ ಮೇಲೆ ಭಾರೀ ವಾಹನಗಳ ಪ್ರವೇಶವನ್ನು ನಿಷೇಧಿಸಲಾಗಿದೆ ಮತ್ತು ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. ಇಲ್ಲಿಯವರೆಗೆ ಯಾವುದೇ ಗುಂಪು ದಾಳಿಯ ಹೊಣೆಯನ್ನು ಹೊತ್ತುಕೊಂಡಿಲ್ಲ ಮತ್ತು ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭದ್ರತಾ ಪಡೆಗಳು ಸಮೀಪದ ಪ್ರದೇಶಗಳನ್ನು ಸೀಲ್ ಮಾಡಿದ್ದು, ತಪಾಸಣೆ ನಡೆಸಲಾಗುತ್ತಿದೆ.
Search Operation, Movement of Essential Items and Naka Checking:
— Manipur Police (@manipur_police) April 23, 2024
Search operations and area domination were conducted by security forces in the fringe and vulnerable areas of hill and valley districts.
Movement of 204 vehicles along NH-2 with essential items have been ensured.… pic.twitter.com/usVi0aaCI8
ಮರು ಮತದಾನ
ಏಪ್ರಿಲ್ 19 ರಂದು ಮೊದಲ ಹಂತದ ಮತದಾನದ ವೇಳೆ, ಮಣಿಪುರದ ಕೆಲವು ಭಾಗಗಳಲ್ಲಿ ಹಿಂಸಾಚಾರದ ಘಟನೆಗಳು ವರದಿಯಾಗಿದ್ದವು. ರಾಜ್ಯದ ಮತಗಟ್ಟೆಯೊಂದರಲ್ಲಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದರು. ಕೆಲವು ಭಾಗಗಳಲ್ಲಿ ಇವಿಎಂಗಳನ್ನು ನಾಶಪಡಿಸಲಾಗಿದೆ ಮತ್ತು ದಬ್ಬಾಳಿಕೆ ಮತ್ತು ಬೆದರಿಕೆಯ ಆರೋಪಗಳನ್ನು ಮಾಡಲಾಗಿತ್ತು. ಹೀಗಾಗಿ 11 ಕ್ಷೇತ್ರಗಳಲ್ಲಿ ಏಪ್ರಿಲ್ 22 ರಂದು ಮರು ಮತದಾನ ನಡೆಸಲಾಗುದೆ.
🚨 #KukiNarcoTerrorist have blown up a bridge located between #Sapermeina & #KoubruLeikha along NH-2 in Kangpokpi District in the wee hours of Wednesday.#Kuki_ZoEngineeredViolence#kukiatrocities#kukiwarcrimes pic.twitter.com/OtOaGeW1ZF
— Tongjei Maril (@Tongjei_Maril) April 24, 2024
ಶೇ.81.6 ಮತದಾನ
11 ಲೋಕಸಭಾ ಕ್ಷೇತ್ರಗಳಲ್ಲಿ ನಡೆದ ಮರು ಮತದಾನದಲ್ಲಿ 81.6 ಶೇಕಡಾ ಮತದಾನವಾಗಿದೆ. ಈ ವೇಳೆ ಯಾವುದೇ ಅಹಿತಕರ ಘಟನೆಗಳು ವರದಿಯಾಗಿಲ್ಲ.
-
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ












Click it and Unblock the Notifications