ಮಣಿಪುರದಲ್ಲಿ ತಣ್ಣಗಾಗಿಲ್ಲ ಹಿಂಸಾಚಾರ: ಮುಖ್ಯಮಂತ್ರಿ ಬೆಂಗಾವಲು ವಾಹನದ ಮೇಲೆ ದಾಳಿ
ಇಂಫಾಲಾ, ಜೂನ್. 10: ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರ ಬೆಂಗಾವಲು ವಾಹನದ ಮೇಲೆ ಸೋಮವಾರ ಕಾಂಗ್ಪೋಕ್ಪಿ ಜಿಲ್ಲೆಯಲ್ಲಿ ಶಸ್ತ್ರಸಜ್ಜಿತ ಉಗ್ರರು ಹೊಂಚುದಾಳಿ ನಡೆಸಿದ್ದು, ಓರ್ವ ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ.
ಮುಖ್ಯಮಂತ್ರಿ ಕಚೇರಿಯ ಮೂಲಗಳ ಪ್ರಕಾರ, ಬೆಂಗಾವಲು ಪಡೆ ಇಂಫಾಲ್ನಿಂದ ಜಿರಿಬಾಮ್ ಜಿಲ್ಲೆಗೆ ತೆರಳುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ-37 ರ ಉದ್ದಕ್ಕೂ ಬೆಳಗ್ಗೆ 10.30 ರ ಸುಮಾರಿಗೆ ದಾಳಿ ನಡೆಸಿದೆ. ಜೂನ್ 6 ರಂದು ಅಪರಿಚಿತ ದುಷ್ಕರ್ಮಿಗಳು ವ್ಯಕ್ತಿಯೊಬ್ಬರ ಹತ್ಯೆಯಾಗಿದ್ದು, ಅಶಾಂತಿಯಿಂದ ನಲುಗಿರುವ ಜಿರಿಬಾಮ್ಗೆ ಭೇಟಿ ನೀಡಲು ಮುಖ್ಯಮಂತ್ರಿ ಪ್ಲ್ಯಾನ್ ಮಾಡಿದ್ದರು.

ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರು ಮಂಗಳವಾರ ಈ ಪ್ರದೇಶಕ್ಕೆ ಭೇಟಿ ನೀಡಲು ಯೋಜಿಸಿದ್ದರು. ಜಿರಿಬಾಮ್ನಲ್ಲಿನ ವ್ಯಕ್ತಿಯ ಹತ್ಯೆಯಿಂದಾಗಿ ಪ್ರದೇಶದಲ್ಲಿ ಉದ್ವಿಗ್ನತೆ ಉಂಟಾಗಿದೆ. ಇದರಿಂದಾಗಿ ಕೆಲವು ಸರ್ಕಾರಿ ಕಚೇರಿಗಳು ಸೇರಿದಂತೆ ಸುಮಾರು 70 ಮನೆಗಳಿಗೆ ಬೆಂಕಿ ಹಚ್ಚಲಾಗಿದೆ. ನೂರಾರು ನಾಗರಿಕರು ತಮ್ಮ ಸ್ಥಳಗಳಿಂದ ಸುರಕ್ಷಿತ ಸ್ಥಳಗಳಿಗೆ ಓಡಿಹೋಗಬೇಕಾದ ಸ್ಥಿತಿ ಬಂದಿದೆ.
ಜಿರಿಬಾಮ್ನಲ್ಲಿ ಮೈತಿಯಿ ಸಮುದಾಯದ 59 ವರ್ಷದ ರೈತ ಕೊಲೆಯಾಗಿದ್ದಾರೆ. ಮೃತರನ್ನು ಸೋಯಬಮ್ ಶರತ್ಕುಮಾರ್ ಸಿಂಗ್ ಎಂದು ಗುರುತಿಸಲಾಗಿದ್ದು, ಅವರು ತಮ್ಮ ಜಮೀನಿನಿಂದ ಹಿಂದಿರುಗುತ್ತಿದ್ದಾಗ ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರ ಮೃತದೇಹ ಸಿಕ್ಕಾಗ ದೇಹದ ಮೇಲೆಲ್ಲಾ ಚೂಪಾದ ವಸ್ತುವಿನಿಂದ ಉಂಟಾದ ಗಾಯಗಳಿವೆ.

ಈ ಘಟನೆಯು ಕಳೆದ ವರ್ಷದಿಂದ ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಲು ಕಾರಣವಾಗಿದೆ. ಶುಕ್ರವಾರ (ಜೂನ್ 7) ಜಿರಿಬಾಮ್ನ ಬಾಹ್ಯ ಪ್ರದೇಶಗಳಿಂದ ಸುಮಾರು 239 ಮೈತಿಯಿ ಜನರನ್ನು ಸ್ಥಳಾಂತರಿಸಲಾಗಿದೆ. ಜಿಲ್ಲೆಯ ಬಹು-ಕ್ರೀಡಾ ಸಂಕೀರ್ಣದಲ್ಲಿ ಹೊಸದಾಗಿ ಸ್ಥಾಪಿಸಲಾದ ಪರಿಹಾರ ಶಿಬಿರಕ್ಕೆ ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರೈತನ ಹತ್ಯೆಯ ಬಗ್ಗೆ ಕೋಪಗೊಂಡ ಸ್ಥಳೀಯರು, ಅಲ್ಲಿನ ಹಲವು ಸರ್ಕಾರಿ ಕಟ್ಟಡಗಳಿಗೆ ಬೆಂಕಿ ಹಚ್ಚಿದ್ದಾರೆ. ಇದಾದ ನಂತರ ಜಿರಿಬಾಮ್ನಲ್ಲಿ ನಿಷೇಧಾಜ್ಞೆಗಳನ್ನು ವಿಧಿಸಲಾಗಿತ್ತು. ಚುನಾವಣೆ ಸಂದರ್ಭದಲ್ಲಿ ಜಪ್ತಿ ಮಾಡಿರುವ ಪರವಾನಗಿ ಪಡೆದ ಬಂದೂಕುಗಳನ್ನು ವಾಪಸ್ ನೀಡುವಂತೆ ಒತ್ತಾಯಿಸಿ ಸ್ಥಳೀಯರು ಜಿರಿಬಾಮ್ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ.
ಜಿರಿಬಾಮ್, ಮೈತೀಸ್, ಮುಸ್ಲಿಮರು, ನಾಗಾಗಳು, ಕುಕಿಗಳು ಮತ್ತು ಮಣಿಪುರಿಯೇತರರಿಗೆ ನೆಲೆಯಾಗಿದೆ. ಇಂಫಾಲ್ ಕಣಿವೆ ಮೂಲದ ಮೈತೀಸ್ ಮತ್ತು ಬೆಟ್ಟಗಳ ಮೂಲದ ಕುಕಿಗಳ ನಡುವಿನ ಸಂಘರ್ಷವು 200 ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದೆ ಮತ್ತು ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ.
ಮಣಿಪುರದ ಹಿಂಸಾಚಾರ ಪೀಡಿತ ಅಸ್ಸಾಂನ ಗಡಿಯಲ್ಲಿರುವ ಜಿರಿಬಾಮ್ ಜಿಲ್ಲೆಯಲ್ಲಿ ನೆಲೆಸಿರುವ ಕನಿಷ್ಠ 600 ಜನರು ಕಳೆದ ನಾಲ್ಕು ದಿನಗಳಲ್ಲಿ ಅಸ್ಸಾಂನ ಕ್ಯಾಚಾರ್ ಜಿಲ್ಲೆಯಲ್ಲಿ ಆಶ್ರಯ ಪಡೆದಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಅವರಲ್ಲಿ ಹೆಚ್ಚಿನವರು ಲಖಿಪುರ ಪ್ರದೇಶದಲ್ಲಿ ಆಶ್ರಯ ಪಡೆದಿದ್ದಾರೆ ಎಂದು ಕ್ಯಾಚಾರ್ ಪೊಲೀಸ್ ಅಧೀಕ್ಷಕ ನುಮಲ್ ಮಹತ್ತಾ ಹೇಳಿದ್ದಾರೆ.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ












Click it and Unblock the Notifications