20 ವರ್ಷಗಳ ಬಳಿಕ ಮದ್ಯವನ್ನು ಕಾನೂನುಬದ್ಧಗೊಳಿಸಿದ ರಾಜ್ಯ, ಯಾವುದು ತಿಳಿಯಿರಿ
ಇಂಫಾಲ್, ಡಿಸೆಂಬರ್ 6: ಸುಮಾರು 20 ವರ್ಷಗಳ ನಂತರ ಮಣಿಪುರ ರಾಜ್ಯ ಕ್ಯಾಬಿನೆಟ್ ರಾಜ್ಯದಾದ್ಯಂತ ಮದ್ಯ ಮಾರಾಟ ಮತ್ತು ಸೇವನೆಯನ್ನು ಕಾನೂನುಬದ್ಧಗೊಳಿಸಿದೆ.
ಮಣಿಪುರ ಸಿಎಂ ಬಿರೇನ್ ಸಿಂಗ್ ನೇತೃತ್ವದ ರಾಜ್ಯ ಸಚಿವ ಸಂಪುಟವು ಮದ್ಯ ಮಾರಾಟದಿಂದ ವಾರ್ಷಿಕ ಸುಮಾರು 6,000-7,000 ಕೋಟಿ ರೂಪಾಯಿ ಆದಾಯ ಸಂಗ್ರಹವಾಗಲಿದೆ ಎಂದು ತಿಳಿಸಿದೆ.

ಸಭೆಯಲ್ಲಿ ರಾಜ್ಯವು ಮದ್ಯದ ತಯಾರಿಕೆ, ಉತ್ಪಾದನೆ, ಸ್ವಾಧೀನ, ರಫ್ತು, ಆಮದು, ಸಾಗಣೆ, ಖರೀದಿ, ಮಾರಾಟ ಮತ್ತು ಬಳಕೆಯನ್ನು ಅನುಮೋದಿಸಿದೆ. ಎಲ್ಲ ವಿವರಗಳು ಮತ್ತು ನಿಯಮಗಳಿರುವ ಗೆಜೆಟ್ ಅಧಿಸೂಚನೆಯನ್ನು ಬುಧವಾರ ಅಧಿಕೃತವಾಗಿ ಹೊರಡಿಸಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
1991ರಲ್ಲಿ ಮಣಿಪುರದಲ್ಲಿ ಮದ್ಯ ನಿಷೇಧ:
ವರದಿಗಳ ಪ್ರಕಾರ 1991 ರಲ್ಲಿ ಮಣಿಪುರ ಮದ್ಯ ನಿಷೇಧ ಕಾಯಿದೆ ಜಾರಿಗೆ ಬಂದ ನಂತರ ಮಣಿಪುರವು ಶುಷ್ಕ ರಾಜ್ಯವಾಯಿತು. ಆದಾಗ್ಯೂ, ರಾಜ್ಯವು ಪರಿಶಿಷ್ಟ ಜಾತಿ (ಎಸ್ಸಿ) ಮತ್ತು ಪರಿಶಿಷ್ಟ ಪಂಗಡ (ಎಸ್ಟಿ) ಸಮುದಾಯಗಳಿಂದ ಮದ್ಯವನ್ನು ತಯಾರಿಸಲು ವಿನಾಯಿತಿ ನೀಡಿತು. ಇಂಫಾಲ್ ಪಶ್ಚಿಮ ಜಿಲ್ಲೆಯ ಸೆಕ್ಮೈ ಮತ್ತು ಫಾಯೆಂಗ್ ಮತ್ತು ಇಂಫಾಲ್ ಪೂರ್ವದ ಆಂಡ್ರೋ ರಾಜ್ಯದಲ್ಲಿ ಜನಪ್ರಿಯ ಮದ್ಯ ತಯಾರಕ ಪ್ರದೇಶಗಳಾಗಿವೆ.
ಸೆಪ್ಟೆಂಬರ್ 2022ರಲ್ಲಿ ನಿಷೇಧವನ್ನು ಭಾಗಶಃ ರದ್ದು:
ಸೆಪ್ಟೆಂಬರ್ 2022 ರಲ್ಲಿ ಮಣಿಪುರದ ಆದಾಯವನ್ನು ಹೆಚ್ಚಿಸುವ ಮತ್ತು ನಕಲಿ ಮದ್ಯದ ಸೇವನೆಯಿಂದ ಉಂಟಾಗುವ ಆರೋಗ್ಯದ ಅಪಾಯಗಳನ್ನು ಪರಿಶೀಲಿಸುವ ಭರವಸೆಯೊಂದಿಗೆ ನಿಷೇಧವನ್ನು ಭಾಗಶಃ ತೆಗೆದುಹಾಕಲಾಯಿತು. ಭಾಗಶಃ ವಿನಾಯಿತಿಯ ಅಡಿಯಲ್ಲಿ ಜಿಲ್ಲಾ ಕೇಂದ್ರಗಳು ಮತ್ತು 20 ಹಾಸಿಗೆಗಳಿಗಿಂತ ಕಡಿಮೆಯಿಲ್ಲದ ಹೋಟೆಲ್ಗಳಲ್ಲಿ ಮದ್ಯ ಮಾರಾಟ ಮತ್ತು ಸೇವನೆಯನ್ನು ಅನುಮತಿಸಲಾಗಿದೆ. ಹೆಚ್ಚುವರಿಯಾಗಿ ಸ್ಥಳೀಯವಾಗಿ ತಯಾರಿಸಿದ ದೇಶದ ಮದ್ಯವನ್ನು ರಾಜ್ಯದ ಹೊರಗೆ ರಫ್ತು ಮಾಡಲಾಗುವುದು ಎಂದು ತಿಳಿಸಲಾಗಿದೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!












Click it and Unblock the Notifications