ಮಣಿಪುರದ ಇಂಫಾಲದಲ್ಲಿ ಸಚಿವರ ಅಧಿಕೃತ ನಿವಾಸಕ್ಕೆ ಬೆಂಕಿ: ಸಿಎಂ ಬಂಧನಕ್ಕೆ ಕಾಂಗ್ರೆಸ್ ಆಗ್ರಹ!
ಇಂಫಾಲ, ಜೂನ್. 15: ಗಲಭೆ ಪೀಡಿತ ಮಣಿಪುರ ರಾಜ್ಯದಲ್ಲಿ ಹೊಸ ಹಿಂಸಾಚಾರ ಭುಗಿಲೆದ್ದಿದ್ದು, ದುಷ್ಕರ್ಮಿಗಳು ಇಂಫಾಲ್ ಪಶ್ಚಿಮದಲ್ಲಿರುವ ಮಣಿಪುರದ ಸಚಿವೆ ನೆಮ್ಚಾ ಕಿಪ್ಗೆನ್ ಅವರ ಅಧಿಕೃತ ನಿವಾಸಕ್ಕೆ ಬೆಂಕಿ ಹಚ್ಚಿ ಸುಟ್ಟು ಹಾಕಿದ್ದಾರೆ. ಮೂಲಗಳ ಪ್ರಕಾರ ಬುಧವಾರ ರಾತ್ರಿ ಈ ಘಟನೆ ನಡೆದಿದೆ.
ಪಶ್ಚಿಮ ಜಿಲ್ಲೆಯ ಲಂಫೇಲ್ ಪ್ರದೇಶದಲ್ಲಿರುವ ಕೈಗಾರಿಕಾ ಸಚಿವೆ ನೆಮ್ಚಾ ಕಿಪ್ಗೆನ್ ನಿವಾಸಕ್ಕೆ ಅಪರಿಚತ ವ್ಯಕ್ತಿಗಳು ಬೆಂಕಿ ಹಚ್ಚಿದ್ದಾರೆ. ಮೈತೀಯಿ ಮತ್ತು ಕುಕಿ ಸಮುದಾಯಗಳ ನಡುವಿನ ಜನಾಂಗೀಯ ಘರ್ಷಣೆ ಮತ್ತಷ್ಟು ಮುಂದುವರೆದಿದೆ. ಘಟನೆ ವೇಳೆ ನಿವಾಸದಲ್ಲಿ ಯಾರು ಇಲ್ಲದೇ ಇದ್ದ ಕಾರಣ ಅನಾಹುತ ತಪ್ಪಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ತಲುಪಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇನ್ನು, ಮಂಗಳವಾರ ಕಾಂಗ್ಪೋಕ್ಪಿ ಜಿಲ್ಲೆಯ ಖಮೆನ್ಲೋಕ್ ಪ್ರದೇಶದ ಹಳ್ಳಿಯೊಂದರಲ್ಲಿ ದುಷ್ಕರ್ಮಿಗಳು ದಾಳಿ ಮಾಡಿದ ನಂತರ ಕನಿಷ್ಠ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಮತ್ತು ಒಂಬತ್ತು ಮಂದಿ ಗಾಯಗೊಂಡಿದ್ದಾರೆ. ಗ್ರಾಮದಲ್ಲಿ ಕಿಡಿಗೇಡಿಗಳು ಗುಂಡಿನ ದಾಳಿ ನಡೆಸಿ ದುಷ್ಕರ್ಮಿಗಳು ಹಲವಾರು ಮನೆಗಳನ್ನು ಸುಟ್ಟುಹಾಕಿದ್ದಾರೆ ಮತ್ತು ತಮೆಂಗ್ಲಾಂಗ್ ಜಿಲ್ಲೆಯ ಗೋಬಜಾಂಗ್ನಲ್ಲಿ ಹಲವಾರು ಜನರು ಗಾಯಗೊಂಡಿದ್ದಾರೆ.
ಹಿಂಸಾಚಾರ ಪೀಡಿತ ಈಶಾನ್ಯ ರಾಜ್ಯದಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದೆ. ಕಾನೂನು ಮತ್ತು ಸುವ್ಯವಸ್ಥೆ ಹದಗೆಡುವುದನ್ನು ತಡೆಯಲು ಭದ್ರತಾ ಸಿಬ್ಬಂದಿ ಹೆಚ್ಚಿನ ಅಪಾಯದ ಪ್ರದೇಶಗಳಲ್ಲಿ ಗಸ್ತು ತಿರುಗುವುದನ್ನು ಮುಂದುವರೆಸಿದ್ದಾರೆ. ಕಳೆದ 24 ಗಂಟೆಗಳಲ್ಲಿ, ತೆಂಗ್ನೌಪಾಲ್ ಮತ್ತು ಇಂಫಾಲ್ ಪೂರ್ವ ಜಿಲ್ಲೆಗಳಿಂದ ಬಂದೂಕುಗಳು ಮತ್ತು 63 ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮಣಿಪುರದ ಭದ್ರತಾ ಸಲಹೆಗಾರ ಕುಲ್ದೀಪ್ ಸಿಂಗ್ ಪ್ರಕಾರ, ಇದುವರೆಗೆ ಒಟ್ಟು 1,040 ಶಸ್ತ್ರಾಸ್ತ್ರಗಳು, 13,601 ಮದ್ದುಗುಂಡುಗಳು ಮತ್ತು 230 ವಿವಿಧ ರೀತಿಯ ಬಾಂಬ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಜಿಲ್ಲಾ ಅಧಿಕಾರಿಗಳು ಇಂಫಾಲ್ ಪೂರ್ವ ಜಿಲ್ಲೆ ಮತ್ತು ಇಂಫಾಲ್ ಪಶ್ಚಿಮ ಜಿಲ್ಲೆಯಲ್ಲಿ ಎಂದಿನಂತೆ ಬೆಳಗ್ಗೆ 5 ರಿಂದ ಸಂಜೆ 6 ರವರೆಗೆ ಕರ್ಫ್ಯೂ ಸಡಿಲಿಕೆ ಸಮಯವನ್ನು ಬೆಳಗ್ಗೆ 5 ರಿಂದ 9 ಕ್ಕೆ ಕಡಿತಗೊಳಿಸಿದ್ದಾರೆ. ಮಣಿಪುರದ 16 ಜಿಲ್ಲೆಗಳಲ್ಲಿ 11 ಜಿಲ್ಲೆಗಳಲ್ಲಿ ಕರ್ಫ್ಯೂ ಜಾರಿಯಲ್ಲಿದ್ದರೆ, ಇಡೀ ಈಶಾನ್ಯ ರಾಜ್ಯದಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.
ಇತ್ತ, ಮಣಿಪುರ ಚುನಾವಣೆಗೆ ಕುಕಿ ಉಗ್ರಗಾಮಿ ಗುಂಪಿನ ನಾಯಕರ ಸಹಾಯ ಪಡೆದ ಆರೋಪದ ಮೇಲೆ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್ಎಸ್ಎ) ಅಡಿಯಲ್ಲಿ ಬಂಧಿಸಬೇಕು ಎಂದು ಅಸ್ಸಾಂ ಕಾಂಗ್ರೆಸ್ ಮುಖ್ಯಸ್ಥ ಭೂಪೇನ್ ಬೋರಾಹ್ ಬುಧವಾರ ಒತ್ತಾಯಿಸಿದ್ದಾರೆ.
"ಕುಕಿ ಉಗ್ರಗಾಮಿಗಳೊಂದಿಗಿನ ಅಸಂವಿಧಾನಿಕ ಸಂಬಂಧ" ಕ್ಕಾಗಿ ಹಿಮಂತ ಬಿಸ್ವಾ ಶರ್ಮಾ ವಿರುದ್ಧ ಪ್ರತಿಭಟಿಸಲು ಪಕ್ಷವು ಗುವಾಹಟಿಯಲ್ಲಿ ಉಪವಾಸ ಸತ್ಯಾಗ್ರಹವನ್ನು ನಡೆಸಿದೆ. ಪ್ರಜಾಪ್ರಭುತ್ವದ ಪ್ರಕ್ರಿಯೆಯಿಂದ ಚುನಾಯಿತರಾದ ಮುಖ್ಯಮಂತ್ರಿಯೊಬ್ಬರು ಮಣಿಪುರದ ಚುನಾವಣೆಯಲ್ಲಿ ಗೆಲ್ಲಲು ಮಣಿಪುರ ವಿಧಾನಸಭೆಯಲ್ಲಿ ಕುಕಿ ಉಗ್ರಗಾಮಿಗಳನ್ನು ಭೇಟಿಯಾಗಿದ್ದಾರೆ. ಉಗ್ರಗಾಮಿ ಗುಂಪಿನ ನಾಯಕ ಇದನ್ನು ಹೇಳಿದ್ದಾನೆ. ಬಿಜೆಪಿ ಹೈಕಮಾಂಡ್ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತದೆಯೇ ಎಂದು ನಾವು ಕಾಯುತ್ತಿದ್ದೇವೆ ಎಂದು ಹೇಳಿದ್ದಾರೆ.
ಯುನೈಟೆಡ್ ಲಿಬರೇಶನ್ ಫ್ರಂಟ್ ಆಫ್ ಅಸ್ಸಾಂ-ಇಂಡಿಪೆಂಡೆಂಟ್ (ಉಲ್ಫಾ-I) ಮುಖ್ಯಸ್ಥ ಪರೇಶ್ ಬರುವಾ ಅವರು ಯಾವಾಗಲೂ ಹಿಮಂತ ಬಿಸ್ವಾ ಶರ್ಮಾ ಅವರನ್ನು ತಮ್ಮ ಮಾಜಿ ಕೌಂಟರ್ಪಾರ್ಟ್ ಎಂದು ಒಪ್ಪಿಕೊಂಡಿದ್ದಾರೆ ಎಂದು ಕಾಂಗ್ರೆಸ್ ಮುಖ್ಯಸ್ಥ ಭೂಪೇನ್ ಬೋರಾಹ್ ಹೇಳಿದ್ದಾರೆ.
ಮಣಿಪುರವು ಮೈತೇಯಿ ಮತ್ತು ಕುಕಿ ಸಮುದಾಯಗಳ ನಡುವಿನ ಜನಾಂಗೀಯ ಘರ್ಷಣೆಯಲ್ಲಿ ನಲುಗುತ್ತಿರುವಾಗ, 2019 ರಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಕುಕಿ ಸಂಘಟನೆಯ ನಾಯಕರೊಬ್ಬರು ಬರೆದ ಪತ್ರದಲ್ಲಿ ಇಬ್ಬರು ಬಿಜೆಪಿ ನಾಯಕರಾದ ಹಿಮಂತ ಬಿಸ್ವಾ ಶರ್ಮಾ ಮತ್ತು ರಾಮ್ ಮಾಧವ್ ಅವರು ಅದರ ಉಸ್ತುವಾರಿ ವಹಿಸಿದ್ದಾರೆ ಎಂದು ಹೇಳಿದ್ದಾರೆ.
2017ರ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಲು ಕುಕಿ ಸಂಘಟನೆಗಳ ನೆರವು ಪಡೆದಿದ್ದವು. ಬಿಜೆಪಿ 2017 ರಲ್ಲಿ ಮಣಿಪುರದಲ್ಲಿ ಮೊದಲ ಬಾರಿಗೆ ಅಧಿಕಾರಕ್ಕೆ ಬಂದಿತು ಮತ್ತು ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ನೇತೃತ್ವದಲ್ಲಿ ಸರ್ಕಾರವನ್ನು ರಚಿಸಿತ್ತು. ಜೂನ್ 8, 2023 ರಂದು ಎನ್ಐಎ ನ್ಯಾಯಾಲಯದಲ್ಲಿ SoO ಅಡಿಯಲ್ಲಿನ ಸಶಸ್ತ್ರ ಸಂಘಟನೆಗಳಲ್ಲಿ ಒಂದಾದ ಯುನೈಟೆಡ್ ಕುಕಿ ಲಿಬರೇಶನ್ ಫ್ರಂಟ್ (UKLF) ಅಧ್ಯಕ್ಷ ಎಸ್ಎಸ್ ಹಾಕಿಪ್ ಅವರು ಸಲ್ಲಿಸಿದ ಅಫಿಡವಿಟ್ನೊಂದಿಗೆ ಪತ್ರವನ್ನು ಲಗತ್ತಿಸಲಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications