ಮಣಿಪುರ: ಇದೇ ಮೊದಲ ಬಾರಿಗೆ ಮುಸ್ಲಿಂ ಮಹಿಳೆ ಕಣಕ್ಕೆ
ಇದೇ ಮೊದಲ ಬಾರಿಗೆ ಮಣಿಪುರ ವಿಧಾನಸಭಾ ಚುನಾವಣೆಯಲ್ಲಿ ಮುಸ್ಲಿಂ ಮಹಿಳೆಯೊಬ್ಬರು ಕಣಕ್ಕಿಳಿಯುತ್ತಿದ್ದಾರೆ. ವಿಶೇಷ ಅಂದರೆ ಈಕೆ ಕಣಕ್ಕಿಳಿಯುತ್ತಿರುವುದು ಇರೋಮ್ ಶರ್ಮಿಳಾರ 'ಪೀಪಲ್ ರಿಸರ್ಜೆನ್ಸ್ ಅಂಡ್ ಜಸ್ಟಿಸ್ ಅಲಯನ್ಸ್ (PRAJA)' ಎಂಬ ಹೊಸ ಪಕ್ಷದಿಂದ.
16 ವರ್ಷಗಳ ಕಾಲ 'ಸೇನಾ ವಿಶೇಷಾಧಿಕಾರ ಕಾಯ್ದೆ (AFSPA)' ವಿರುದ್ಧ ಅಮರಣಾಂತ ಉಪವಾಸ ನಿರಶನ ಕೈಗೊಂಡು ರಾಷ್ಟ್ರ , ಅಂತರಾಷ್ಟ್ರೀಯ ಮಟ್ಟದಲ್ಲಿ ಜನಪ್ರಿಯರಾಗಿದ್ದ ಇರೋಮ್ ಶರ್ಮಿಳಾ ಕಳೆದ ವರ್ಷ ತಮ್ಮ ಉಪವಾಸ ಹೋರಾಟ ನಿಲ್ಲಿಸಿದ್ದರು. ಇದೀಗ ಸಕ್ರಿಯ ರಾಜಕಾರಣದ ಮೂಲಕ ಶರ್ಮಿಳಾ ತಮ್ಮ ಹೋರಾಟ ಮುಂದುವರಿಸಲು ಹೊರಟಿದ್ದು, ಮಣಿಪುರ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ.[5 ರಾಜ್ಯಗಳಲ್ಲಿ ಚುನಾವಣೆ ಮತದಾನ, ಫಲಿತಾಂಶ: ನಿಮಗಿದು ತಿಳಿದಿರಲಿ]

ಚುಣಾವಣೆಯಲ್ಲಿ ಸ್ಪರ್ಧಿಸಲು ಇರೋಮ್ ಶರ್ಮಿಳಾ 'ಪೀಪಲ್ ರಿಸರ್ಜೆನ್ಸ್ ಅಂಡ್ ಜಸ್ಟಿಸ್ ಅಲಯನ್ಸ್' ಎಂಬ ಪಕ್ಷ ಹುಟ್ಟುಹಾಕಿದ್ದಾರೆ. ಅರವಿಂದ್ ಕೇಜ್ರಿವಾಲ್ ಮಾದರಿಯಲ್ಲಿ ಶರ್ಮಿಳಾ ಮಣಿಪುರ ಮುಖ್ಯಮಂತ್ರಿ ಓಕ್ರಾಮ್ ಇಬೋಬಿ ಸಿಂಗ್ ವಿರುದ್ಧ ಸ್ಪರ್ಧಿಸುವುದಾಗಿ ಹೇಳಿಕೆ ನೀಡಿದ್ದಾರೆ.
ಮಾತ್ರವಲ್ಲ ಮಣಿಪುರ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಮುಸ್ಲಿಂ ಮಹಿಳೆಯೊಬ್ಬರನ್ನು ಅವರ ಪಕ್ಷ ಕಣಕ್ಕಿಳಿಸುತ್ತಿದೆ.[ಐರೋಮ್ ಶರ್ಮಿಳಾ ಹೊಸ ರಾಜಕೀಯ ಪಕ್ಷ ಘೋಷಣೆ]
50 ವರ್ಷಗಳ ನಂತರ ಮಣಿಪುರ ಹೇಗಿರಬೇಕು ಎಂಬ ಯೋಜನೆ ಹಾಕಿಕೊಂಡು ಇರೋಮ್ ಶಾರ್ಮಿಳಾ ಚುನಾವಣೆಗೆ ಹೊರಟಿದ್ದಾರೆ. ಅವರ ಜತೆ ವಿಶ್ವಸಂಸ್ಥೆ ಸೇರಿದಂತೆ ಮತ್ತಿತರ ಪ್ರತಿಷ್ಠಿತ ಕೇಂದ್ರಗಳಲ್ಲಿ ಕೆಲಸ ಮಾಡಿದ ಪರಿಣತರು ಕೈಜೋಡಿಸದ್ದಾರೆ. ಮಣಿಪುರದ ಸಾಂಪ್ರದಾಯಿಕ ಸಂಸ್ಕೃತಿ 'ಮೀತೇಯಿ' ಪುನರ್ ಸ್ಥಾಪನೆ ಅವರ ಚುನಾವಣಾ ಮಂತ್ರವಾಗಿದೆ.
ಇದು ಇರೋಮ್ ಶರ್ಮಿಳಾ ಪಕ್ಷ ಸ್ಪರ್ಧಿಸುತ್ತಿರುವ ಮೊದಲ ಚುನಾವಣೆ ಇದಾಗಿದ್ದು, 60ರಲ್ಲಿ 5 ಸ್ಥಾನಗಳಿಗಷ್ಟೇ ಸ್ಪರ್ಧಿಸುತ್ತಿದೆ. ಈ ಮೂಲಕ ಸಣ್ಣ ಹೆಜ್ಜೆಯಿಂದ ತನ್ನ ರಾಜಕೀಯ ಜೀವನ ಆರಂಭಿಸಲು ಇರೋಮ್ ಶರ್ಮಿಳಾ ಹೊರಟಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications