ಮಣಿಪುರದಲ್ಲಿ ನಿಲ್ಲದ ಹಿಂಸಾಚಾರ: ನಮ್ಮ ಸರ್ಕಾರದ ಮೇಲೆ ಜನರು ನಂಬಿಕೆ ಕಳೆದುಕೊಂಡಿದ್ದಾರೆ- ಅಮಿತ್ ಶಾಗೆ ಬಿಜೆಪಿ ಶಾಸಕರ ಪತ್ರ
ಇಂಫಾಲ, ಮೇ 19: ಮಹತ್ವದ ಬೆಳವಣಿಗೆಯೊಂದರಲ್ಲಿ, ಚಿನ್-ಕುಕಿ-ಮಿಜೋ-ಝೋಮಿ-ಹ್ಮಾರ್ ಸಮುದಾಯವನ್ನು ಪ್ರತಿನಿಧಿಸುವ ಮಣಿಪುರದ 10 ಶಾಸಕರು ಆಡಳಿತಾರೂಢ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ಮೇಲಿನ ನಂಬಿಕೆಯನ್ನು ಕಳೆದುಕೊಂಡಿದ್ದಾಗಿ ತಿಳಿಸಿದ್ದಾರೆ.
ಅವರು ತಮ್ಮ ಕಳವಳವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರದ ಮೂಲಕ ತಿಳಿಸಿದ್ದಾರೆ. ಮೇ 3 ರಂದು ಇತ್ತೀಚೆಗೆ ನಡೆದ ಹಿಂಸಾಚಾರದಿಂದಾಗಿ ಕಣಿವೆಯಲ್ಲಿ ಪುನರ್ವಸತಿ ಕಲ್ಪಿಸುವ ಕುರಿತಾಗಿ ಜನರು ನಂಬಿಕೆಯನ್ನು ಕಳೆದುಕೊಂಡಿದ್ದಾಗಿಯೂ ಹೇಳಿದ್ದಾರೆ.

ಸೋಮವಾರ ದೆಹಲಿಯಲ್ಲಿ ನಡೆದ ಸಭೆಯಲ್ಲಿ ಬಿಜೆಪಿಯ ಏಳು ಮಂದಿ, ಕುಕಿ ಪೀಪಲ್ಸ್ ಅಲೈಯನ್ಸ್ನ ಇಬ್ಬರು ಸದಸ್ಯರು ಮತ್ತು ಒಬ್ಬ ಸ್ವತಂತ್ರ ಶಾಸಕ ಸೇರಿದಂತೆ 10 ಶಾಸಕರು ಮಣಿಪುರದಲ್ಲಿ ಮುಂದುವರಿದಿರುವ ಅಶಾಂತಿಯ ಬಗ್ಗೆ ಶಾ ಅವರಿಗೆ ತಿಳಿಸಿದ್ದಾರೆ. ತಮ್ಮ ಸಮುದಾಯಗಳಿಗೆ ಪ್ರತ್ಯೇಕ ಆಡಳಿತದ ಬೇಡಿಕೆಯನ್ನೂ ಮುಂದಿಟ್ಟಿದ್ದಾರೆ.
'ನಮ್ಮ ಜನರು ಮಣಿಪುರ ಸರ್ಕಾರದ ಮೇಲೆ ನಂಬಿಕೆಯನ್ನು ಕಳೆದುಕೊಂಡಿದ್ದಾರೆ. ತಮ್ಮ ಜೀವನವು ಇನ್ನು ಮುಂದೆ ಸುರಕ್ಷಿತವಾಗಿಲ್ಲ. ಕಣಿವೆಯಲ್ಲಿ ಪುನರ್ವಸತಿ ಕಲ್ಪಿಸುವುದನ್ನು ಇನ್ನು ಮುಂದೆ ಊಹಿಸಲು ಸಾಧ್ಯವಿಲ್ಲ' ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಮೂರು ಪುಟಗಳ ಈ ಜ್ಞಾಪಕ ಪತ್ರವು ಮಣಿಪುರ ಸರ್ಕಾರದ ಮೇಲಿನ ನಂಬಿಕೆ ಕಡಿಮೆಯಾಗುತ್ತಿರುವುದನ್ನು ಮತ್ತು ಕಣಿವೆಯಲ್ಲಿ ಅವರ ಜನರು ಎದುರಿಸುತ್ತಿರುವ ಅಭದ್ರತೆಯನ್ನು ಎತ್ತಿ ತೋರಿಸಿದೆ. ಇದು ತಮ್ಮ ಸಮುದಾಯಗಳು ವಾಸಿಸುವ ಗುಡ್ಡಗಾಡು ಪ್ರದೇಶಗಳಿಗೆ ವಿಶಿಷ್ಟವಾದ ಆಡಳಿತವನ್ನು ಸ್ಥಾಪಿಸುವ ಮೂಲಕ ಔಪಚಾರಿಕ ಪ್ರತ್ಯೇಕತೆಯ ಅಗತ್ಯವನ್ನು ಒತ್ತಿಹೇಳಿದೆ. ಮೈಟಿ ಸಮುದಾಯದೊಂದಿಗೆ ಆಳವಾದ ಬಿರುಕು ಮತ್ತು ಪರಸ್ಪರ ಗೌರವದ ಕೊರತೆಯನ್ನು ಉಲ್ಲೇಖಿಸುತ್ತದೆ. ಇನ್ನು ಸಹಬಾಳ್ವೆಗೆ ಅವಕಾಶವಿಲ್ಲ ಎಂಬ ಅಭಿಪ್ರಾಯವನ್ನು ಶಾಸಕರು ವ್ಯಕ್ತಪಡಿಸಿದ್ದಾರೆ.
ಮೇ 3 ರಿಂದ ಮಣಿಪುರದಲ್ಲಿ ಭಾರೀ ಪ್ರಮಾಣದಲ್ಲಿ ಹಿಂಸಾಚಾರವಾಗುತ್ತಿದೆ. ಕೇಂದ್ರ ಸಚಿವರು ರಾಜ್ಯಕ್ಕೆ ಭೇಟಿ ನೀಡದಿರುವುದರ ಬಗ್ಗೆಯೂ ಆಕ್ರೋಶ ವ್ಯಕ್ತವಾಗಿದೆ. ಕುಕಿ ಮತ್ತು ನಾಗಾ ಬುಡಕಟ್ಟು ಜನಾಂಗದವರು ಪ್ರಧಾನವಾಗಿ ಆಕ್ರಮಿಸಿಕೊಂಡಿರುವ ಗುಡ್ಡಗಾಡು ಪ್ರದೇಶಗಳು ಹಿಂಸಾಚಾರಕ್ಕೆ ಒಳಗಾಗುತ್ತಿವೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಶಾಂತಿಯ ಪ್ರತಿಕ್ರಿಯಿಸಿ, ಮಣಿಪುರದಲ್ಲಿ ಹಿಂಸಾಚಾರವನ್ನು ಪ್ರಚೋದಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಸುಸ್ಥಿರ ಶಾಂತಿಗಾಗಿ ರಾಜ್ಯ ಸರ್ಕಾರಕ್ಕೆ ಕೇಂದ್ರದಿಂದ ನಿರಂತರ ಬೆಂಬಲವಿದೆ ಎಂದು ಅವರು ಭರವಸೆ ನೀಡಿದ್ದಾರೆ.
ಸರಣಿ ಸಭೆಗಳಲ್ಲಿ, ಶಾ ಮಣಿಪುರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್, ಮೈತೆ ಮತ್ತು ಕುಕಿ ಸಮುದಾಯಗಳ ಪ್ರತಿನಿಧಿಗಳು ಮತ್ತು ಇತರ ಮಧ್ಯಸ್ಥಗಾರರೊಂದಿಗೆ ರಾಜ್ಯದಲ್ಲಿ ಶಾಶ್ವತ ಶಾಂತಿಯನ್ನು ಪುನಃಸ್ಥಾಪಿಸಲು ಇದುವರೆಗೆ ತೆಗೆದುಕೊಂಡ ಕ್ರಮಗಳು ಕೆಲಸ ಮಾಡಿಲ್ಲವೆಂದು ಹೇಳಲಾಗುತ್ತಿದೆ.
ಶಾ ಅವರ ಸಂದೇಶವು ಎಲ್ಲಾ ಬಣಗಳಿಗೆ ನಿರಂತರ ಶಾಂತಿ ಮತ್ತು ನ್ಯಾಯವನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರದಿಂದ ಬೆಂಬಲವನ್ನು ತಿಳಿಸುತ್ತದೆ. ಸಮನ್ವಯದ ಉದ್ದೇಶದಿಂದ ಮುಕ್ತ ಚರ್ಚೆಗಳು ಮತ್ತು ಶಾಂತಿಯುತ ಸಂವಾದದ ಮಹತ್ವವನ್ನು ಅವರು ಒತ್ತಿ ಹೇಳಿದೆ.












Click it and Unblock the Notifications