Manipur Video: ಆರೋಪಿ ಕುರಿತು ತಪ್ಪು ಮಾಹಿತಿ ಹಂಚಿಕೊಂಡ ಬಳಿಕ ಕ್ಷಮೆಯಾಚಿಸಿದ ಸುದ್ದಿಸಂಸ್ಥೆ 'ಎಎನ್ಐ'- ಏನಿದು ಬೆಳವಣಿಗೆ?
ನವದೆಹಲಿ, ಜುಲೈ 22: ಮಣಿಪುರದಲ್ಲಿ ಇಬ್ಬರು ಕುಕಿ-ಜೋ ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿ, ಕಿರುಕುಳ ನೀಡಿರುವ ಪ್ರಕರಣ ದೇಶದಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಬೆತ್ತಲೆ ಮೆರವಣಿಗೆ ನಡೆಸಿ ಸಾಮೂಹಿಕ ಅತ್ಯಾಚಾರವೆಸಗಿದ ಭೀಕರ ಘಟನೆಯು ಎರಡು ತಿಂಗಳ ನಂತರ ಬಯಲಿಗೆ ಬಂದಿದೆ.
ಜೂನ್ 19ರಂದು ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ವಿಡಿಯೊ ವೈರಲ್ ಆಗಿದ್ದು, ಇಬ್ಬರು ಮಹಿಳೆಯರ ಮೇಲೆ ದೌರ್ಜನ್ಯ ಎಸಗಲಾಗಿರುವುದು ತಿಳಿದುಬಂದಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಾದ ಒಂದು ತಿಂಗಳ ನಂತರ ಮೊದಲ ಬಂಧನವನ್ನು ಗುರುವಾರ ಮಾಡಲಾಗಿದೆ. ಆ ನಂತರ ಮತ್ತೆ ಮೂವರ ಬಂಧನವಾಗಿದೆ ಎಂದು ಸರ್ಕಾರ ತಿಳಿಸಿದೆ.

ಹುಯಿರೆಮ್ ಹೆರೋಡಾಸ್ ಮೈತೆಯ್ ಈ ಪ್ರಕರಣದಲ್ಲಿ ಬಂಧಿತನಾಗಿರುವ ಪ್ರಮುಖ ಆರೋಪಿಯಾಗಿದ್ದು, ವಿಡಿಯೊದ 26 ಸೆಕೆಂಡುಗಳ ಕ್ಲಿಪ್ನಲ್ಲಿ ಪ್ರಮುಖವಾಗಿ ಕಾಣಿಸಿಕೊಂಡಿದ್ದಾನೆ.
ಈ ಘಟನೆಗೆ ಸಂಬಂಧಿಸಿದಂತೆ ಸುದ್ದಿಸಂಸ್ಥೆ ಎಎನ್ಐ ವಿವಾದವೊಂದನ್ನು ಹುಟ್ಟುಹಾಕಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಮೊದಲ ಆರೋಪಿ ಅಬ್ದುಲ್ ಹಿಲ್ಮಿ (ಹುಯಿರೆಮ್ ಹೆರೋಡಾಸ್ ಮೈತೆಯ್) ಎಂದು ಟ್ವೀಟ್ ಮಾಡಿದೆ.
ಇದಕ್ಕೆ ಪ್ರತಿಕ್ರಿಯಿಸಿರುವ ಮಣಿಪುರ ಪೊಲೀಸರು ಮತ್ತೊಂದು ಪ್ರಕರಣದಲ್ಲಿ ಹಿಲ್ಮಿಯನ್ನು ಬಂಧಿಸಿದ್ದಾರೆ ತಿಳಿಸಿದ್ದಾರೆ. ಹಿಲ್ಮಿಗೂ ವಿಡಿಯೊ ಪ್ರಕರಣಕ್ಕೆ ಯಾವುದೇ ಸಂಬಂಧವಿಲ್ಲವೆಂದು ಮಣಿಪುರ ಪೊಲೀಸರು ಟ್ವೀಟ್ ಮಾಡಿದ್ದಾರೆ.

ಎಎನ್ಐ ಮಾಡಿರುವ ಟ್ವೀಟ್ ಸದ್ದು ಮಾಡಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಟ್ವೀಟ್ ಮಾಡಿ 12 ಗಂಟೆಯಾದ ಬಳಿಕ ಎಎನ್ಐ ಟ್ವೀಟ್ ಅನ್ನು ಡಿಲೀಟ್ ಮಾಡಿದೆ. ಇದಾದ ಮೇಲೆ ಕ್ಷಮೆಯನ್ನೂ ಕೇಳಿದೆ.
ಮಣಿಪುರದಲ್ಲಿ ಮೇ 3 ರಿಂದ ಇಂಫಾಲ್ ಕಣಿವೆಯಲ್ಲಿ ಹಿಂಸಾಚಾರ ಉಲ್ಬಣಗೊಂಡಿದ್ದು, ಇಲ್ಲಿಯವರೆಗೆ 160 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.
ಈ ಭೀಕರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪುರ ಪೊಲೀಸರು ಇಂದು ಮತ್ತೊಬ್ಬನನ್ನು ಬಂಧಿಸಿದ್ದಾರೆ. ವೈರಲ್ ವಿಡಿಯೊದಲ್ಲಿ ಕಾಣಬಹುದಾದ ಒಂದು ಡಜನ್ ಶಂಕಿತರನ್ನು ಪತ್ತೆಹಚ್ಚಲು ಪೊಲೀಸರು ಮುಂದಾಗಿದ್ದಾರೆ.

ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರು ಶೋಧ ಕಾರ್ಯಾಚರಣೆಯನ್ನು ಖುದ್ದಾಗಿ ಗಮನಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ಹಲವು ಶಂಕಿತ ಅಡಗುತಾಣಗಳ ಮೇಲೆ ದಾಳಿ ನಡೆಸಲಾಗುತ್ತಿದ್ದು, ಪರಿಸ್ಥಿತಿ ಇನ್ನೂ ಉದ್ವಿಗ್ನವಾಗಿದೆ. ಹಲವೆಡೆ ಶಾಂತಿಯುತವಾಗಿ ಧರಣಿ ಪ್ರತಿಭಟನೆ ನಡೆಸಲಾಗುತ್ತಿದೆ.
ಈ ಪ್ರಕರಣದಲ್ಲಿ ಭಾಗಿಯಾಗಿರುವ ಪ್ರಮುಖ ಆರೋಪಿ ಹುಯಿರೆಮ್ ಹೆರೋಡಾಸ್ ಮೈತೆ ಸೇರಿದಂತೆ ನಾಲ್ವರನ್ನು ನಿನ್ನೆ ಬಂಧಿಸಲಾಗಿತ್ತು. ಹೆರೋದಾಸ್ ಮನೆಗೆ ನಿನ್ನೆ ಪೆಚ್ಚಿ ಗ್ರಾಮದ ಮಹಿಳೆಯರು ಬೆಂಕಿ ಹಚ್ಚಿದ್ದಾರೆ.
ವದಂತಿಗಳನ್ನು ನಂಬಬೇಡಿ ಎಂದು ರಾಜ್ಯ ಸರ್ಕಾರ ಜನರಲ್ಲಿ ಮನವಿ ಮಾಡಿದೆ. ಲೂಟಿ ಮಾಡಿದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಸ್ಫೋಟಕಗಳನ್ನು ಪೊಲೀಸರಿಗೆ ನೀಡುವಂತೆ ಸರ್ಕಾರ ಮನವಿ ಮಾಡಿದೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ?












Click it and Unblock the Notifications