Manipur Violance End: ಸರ್ಕಾರದ ಜತೆ ಉಗ್ರಗಾಮಿ ಗುಂಪು ಒಪ್ಪಂದ, 60 ವರ್ಷದ ಚಳವಳಿ ಸುಖಾಂತ್ಯ: ಅಮಿತ್ ಶಾ
ನವದೆಹಲಿ ನವೆಂಬರ್ 29: ದೇಶಾದ್ಯಂತ ಚರ್ಚೆ, ಆಕ್ರೋಶ ಕಾರಣವಾಗಿದ್ದ ಮಣಿಪುರ ಹಿಂಸಾಚಾರವು ಅಂತ್ಯ ಕಾಣಲಿದೆ. ಇಲ್ಲಿನ ಉಗ್ರಗಾಮಿ ಗುಂಪು ಸರ್ಕಾರಕ್ಕೆ ತಲೆಬಾಗಿದ್ದು, ಹಿಂಸಾಚಾರ ತ್ಯೆಜಿಸಲು ಒಪ್ಪಿಕೊಂಡು ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದೆ. ಇದರಿಂದ ಮಣಿಪುರದ ಜನರು ನಿಟ್ಟುಸಿರು ಬಿಡುವಂತಾಗಿದೆ.
ಮಣಿಪುರದಲ್ಲಿ ಕಾರ್ಯಾಚರಿಸುತ್ತಿರುವ ಉಗ್ರಗಾಮಿ ಗುಂಪು ಯುನೈಟೆಡ್ ನ್ಯಾಷನಲ್ ಲಿಬರೇಶನ್ ಫ್ರಂಟ್ (UNLF) ನವೆಂಬರ್ 29 ರಂದು ಸರ್ಕಾರದೊಂದಿಗೆ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದೆ. ಇನ್ನುಮುಂದೆ ಹಿಂಸಾಚಾರವನ್ನು ತ್ಯಜಿಸಲು ಒಪ್ಪಿಕೊಂಡಿದೆ ಎಂದು ಸ್ವತಃ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ ಘೋಷಣೆ ಮಾಡಿದ್ದಾರೆ.

UNLF ಇದೊಂದು ಮಣಿಪುರದ ಅತ್ಯಂತ ಹಳೆಯ ಇಂಫಾಲ್ ಕಣಿವೆ ಮೂಲದ ಸಶಸ್ತ್ರಧಾರಿ ಗುಂಪು. ಇದರ ಸದಸ್ಯರು ಸಾಕಷ್ಟು ಹಿಂಸಾಚಾರ ಕೃತ್ಯಗಳನ್ನು ಮಾಡಿದ್ದಾರೆ. ಇದೀಗ ಸರ್ಕಾರದೊಂದಿಗೆ ಶಾಂತಿ ಒಪ್ಪಂದ ಮಾಡಿಕೊಳ್ಳಲು ಗುಂಪಿನ ಎಲ್ಲ ಸದಸ್ಯರು ಒಪ್ಪಿದ್ದಾರೆ.
ಪ್ರಧಾನಿ ಮೋದಿ ಸರ್ಕಾರದ ಸಾಧನೆ
ಈಶಾನ್ಯದಲ್ಲಿ ಶಾಶ್ವತ ಶಾಂತಿ ಸ್ಥಾಪಿಸಲು ಮೋದಿ ಸರ್ಕಾರದ ಅವಿರತ ಪ್ರಯತ್ನಗಳು ಮೂಲಕ ಐತಿಹಾಸಿಕ ಮೈಲಿಗಲ್ಲು ಸಾಧಿಸಿದೆ. ಶಾಂತಿ ಸ್ಥಾಪನೆಯ ಹೊಸ ಅಧ್ಯಾಯ ಆರಂಭವಾಗಲಿದೆ. ಒಪ್ಪಂದಂತೆ ಯುನೈಟೆಡ್ ನ್ಯಾಶನಲ್ ಲಿಬರೇಶನ್ ಫ್ರಂಟ್ (ಯುಎನ್ಎಲ್ಎಫ್) ಬುಧವಾರ ನವದೆಹಲಿಯಲ್ಲಿ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿತು ಎಂದು ಅಮಿತ್ ಶಾ ತಿಳಿಸಿದ್ದಾರೆ.

ಮಣಿಪುರದ ಅತ್ಯಂತ ಹಳೆಯ ಕಣಿವೆ ಮೂಲದ ಸಶಸ್ತ್ರ ಗುಂಪು UNLF ಹಿಂಸಾಚಾರವನ್ನು ತ್ಯಜಿಸಲು ಮತ್ತು ಮುಖ್ಯವಾಹಿನಿಗೆ ಸೇರಲು ಒಪ್ಪಿಕೊಂಡಿದೆ. ಈ ಮೂಲಕ ಗುಂಪಿನ ಸದಸ್ಯರನ್ನು ಪ್ರಜಾಪ್ರಭುತ್ವ ಪ್ರಕ್ರಿಯೆಗಳಿಗೆ ಸ್ವಾಗತಿಸುತ್ತೇನೆ. ಮುಂದಿನ ಶಾಂತಿ ಮತ್ತು ಪ್ರಗತಿಯ ಹಾದಿಯಲ್ಲಿ ಗುಂಪಿನ ಪ್ರಯಾಣಕ್ಕೆ ಶುಭ ಹಾರೈಸುವುದಾಗಿ ಸಾಮಾಜಿಕ ಜಾಲತಾಣ X ನಲ್ಲಿ ಗೃಹ ಸಚಿವರು ಪೋಸ್ಟ್ ಮಾಡಿದ್ದಾರೆ.
A historic milestone achieved!!!
— Amit Shah (@AmitShah) November 29, 2023
Modi govt’s relentless efforts to establish permanent peace in the Northeast have added a new chapter of fulfilment as the United National Liberation Front (UNLF) signed a peace agreement, today in New Delhi.
UNLF, the oldest valley-based armed… pic.twitter.com/AiAHCRIavy
ಒಪ್ಪಂದಿಂದ 6 ದಶಕದ ಚಳವಳಿ ಅಂತ್ಯ
ಭಾರತ ಸರ್ಕಾರ ಮತ್ತು ಮಣಿಪುರ ಸರ್ಕಾರದ ಯುಎನ್ಎಲ್ಎಫ್ನೊಂದಿಗೆ ಇಂದು ನಡೆದ ಶಾಂತಿ ಒಪ್ಪಂದವು ಕಳೆದ ಆರು ದಶಕಗಳ (60)ನಡೆದುಕೊಂಡು ಬಂದಿದ್ದ ಸುದೀರ್ಘ ಸಶಸ್ತ್ರ ಚಳವಳಿಯ ಅಂತ್ಯದ ಪ್ರತೀಕವಾಗಿದೆ ಎಂದು ಅಮಿತ್ ಶಾ ವಿವರಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಸರ್ವರನ್ನೊಳಗೊಂಡ ಅಭಿವೃದ್ಧಿಯ ದೃಷ್ಟಿಕೋನವನ್ನು ಸಾಕಾರಗೊಳಿಸುವಲ್ಲಿ ಮತ್ತು ಈಶಾನ್ಯ ಭಾರತದ ಯುವಕರಿಗೆ ಉತ್ತಮ ಭವಿಷ್ಯವನ್ನು ಒದಗಿಸುವಲ್ಲಿ ಇಂದಿನ ಒಪ್ಪಂದು ಒಂದು ಹೆಗ್ಗುರುತು ಸಾಧನೆ ಆಗಿದೆ ಎಂದು ಅವರು ತಿಳಿಸಿದ್ದಾರೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications