Manipur violence: ಮಣಿಪುರ ಹಿಂಸಾಚಾರ: 8 ಜಿಲ್ಲೆಗಳಲ್ಲಿ ಕರ್ಫ್ಯೂ- ಇಂಟರ್ನೆಟ್ ಸೇವೆ ಸ್ಥಗಿತ
ಮಣಿಪುರದಲ್ಲಿ ಬುಧವಾರ (ಮೇ 3) ಮೇಟಿ ಸಮುದಾಯವನ್ನು ಪರಿಶಿಷ್ಟ ಪಂಗಡ (ಎಸ್ಟಿ) ವರ್ಗಕ್ಕೆ ಸೇರಿಸುವ ಬೇಡಿಕೆಯನ್ನು ವಿರೋಧಿಸಿ ಬುಡಕಟ್ಟು ಗುಂಪುಗಳಿಂದ ಬೃಹತ್ ಪ್ರತಿಭಟನೆ ನಡೆದಿದೆ. ಈ ವೇಳೆ ಹಿಂಸಾಚಾರ ಭುಗಿಲೆದ್ದು, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಪೊಲೀಸರು ಅಶ್ರುವಾಯು ಶೆಲ್ಗಳನ್ನು ಹಾರಿಸಿರುವುದು ವರದಿಗಳಾಗಿವೆ.
ಬುಡಕಟ್ಟು ಆಂದೋಲನದ ಸಂದರ್ಭದಲ್ಲಿ ಹಿಂಸಾಚಾರ ಭುಗಿಲೆದ್ದು ಪರಿಸ್ಥಿತಿ ನಿಯಂತ್ರಣಕ್ಕೆ ಬಾರದಿದ್ದಾಗ ಎಂಟು ಜಿಲ್ಲೆಗಳಲ್ಲಿ ಕರ್ಫ್ಯೂ ಹೇರಲಾಗಿದೆ. ಇದರಿಂದಾಗಿ ರಾಜ್ಯದಾದ್ಯಂತ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಘಟನೆಯಲ್ಲಿ ಅಪಾರ ಆಸ್ತಿಪಾಸ್ತಿ ಹಾನಿಗೊಳಗಾಗಿದೆ. 4000 ಕ್ಕೂ ಹೆಚ್ಚು ಜನರನ್ನು ರಕ್ಷಣೆ ಮಾಡಲಾಗಿದೆ.

ಮೇಟಿ ಸಮುದಾಯವನ್ನು ಪರಿಶಿಷ್ಟ ಪಂಗಡ (ಎಸ್ಟಿ) ವರ್ಗಕ್ಕೆ ಸೇರಿಸುವ ಬೇಡಿಕೆಯನ್ನು ವಿರೋಧಿಸಿ ಬುಧವಾರ (ಮೇ 3) ಪ್ರತಿಭಟಿಸಲು ವಿದ್ಯಾರ್ಥಿಗಳ ಸಂಘಟನೆ ಕರೆ ನೀಡಿತ್ತು. ರಾಜ್ಯದ ಎಲ್ಲಾ ಹತ್ತು ಗುಡ್ಡಗಾಡು ಜಿಲ್ಲೆಗಳ ಜನರನ್ನು ಮೆರವಣಿಗೆಯಲ್ಲಿ ಪಾಲ್ಗೊಳ್ಳುವಂತೆ ಕರೆ ನೀಡಲಾಗಿತ್ತು.
My state Manipur is burning, kindly help @narendramodi @PMOIndia @AmitShah @rajnathsingh @republic @ndtv @IndiaToday pic.twitter.com/VMdmYMoKqP
— M C Mary Kom OLY (@MangteC) May 3, 2023
ಈ 'ಆದಿವಾಸಿ ಏಕತಾ ಮಾರ್ಚ್' ವೇಳೆ ಹಿಂಸಾಚಾರ ಭುಗಿಲೆದ್ದಿದೆ. ಈ ಸಂದರ್ಭದಲ್ಲಿ ಚುರಾಚಂದ್ಪುರದಲ್ಲಿ ಉದ್ವಿಗ್ನತೆಯ ನಡುವೆ ಗುಂಪು ಮನೆಗಳಿಗೆ ನುಗ್ಗಿದೆ. ಇದರಿಂದಾಗಿ ಘರ್ಷಣೆ ಹಿಂಸಾಚಾರ ತೀವ್ರತೆ ಪಡೆದುಕೊಂಡಿದೆ. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಅಶ್ರುವಾಯು ಶೆಲ್ಗಳನ್ನು ಹಾರಿಸಿದ್ದಾರೆ.

ರ್ಯಾಲಿಯಲ್ಲಿ ಸಾವಿರಾರು ಆಂದೋಲನಕಾರರು ಭಾಗವಹಿಸಿದ್ದರು. ಈ ವೇಳೆ ಟೋರ್ಬಂಗ್ ಪ್ರದೇಶದಲ್ಲಿ ಬುಡಕಟ್ಟು ಮತ್ತು ಬುಡಕಟ್ಟು ಅಲ್ಲದವರ ನಡುವೆ ಹಿಂಸಾಚಾರ ನಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇಂದು ಬೆಳಿಗ್ಗೆ ವೇಳೆಗೆ ಪರಿಸ್ಥಿತಿ ತಿಳಿಯಾಗಿದೆ.
ಐದು ದಿನಗಳ ಕಾಲ ಮೊಬೈಲ್ ಇಂಟರ್ನೆಟ್ ಸ್ಥಗಿತ
ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಬುಡಕಟ್ಟು ಪ್ರಾಬಲ್ಯವಿರದ ಇಂಫಾಲ್ ಪಶ್ಚಿಮ, ಕಾಕ್ಚಿಂಗ್, ತೌಬಲ್, ಜಿರಿಬಾಮ್ ಮತ್ತು ಬಿಷ್ಣುಪುರ್ ಜಿಲ್ಲೆಗಳಲ್ಲಿ ಮತ್ತು ಬುಡಕಟ್ಟು ಪ್ರಾಬಲ್ಯವಿರುವ ಚುರಾಚಂದ್ಪುರ, ಕಾಂಗ್ಪೋಕ್ಪಿ ಮತ್ತು ತೆಂಗನೌಪಾಲ್ ಜಿಲ್ಲೆಗಳಲ್ಲಿ ಕರ್ಫ್ಯೂ ವಿಧಿಸಲಾಗಿದೆ. ತಕ್ಷಣವೇ ಜಾರಿಗೆ ಬರುವಂತೆ ಐದು ದಿನಗಳ ಕಾಲ ರಾಜ್ಯದಾದ್ಯಂತ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಬ್ರಾಡ್ಬ್ಯಾಂಡ್ ಸೇವೆಗಳು ಕಾರ್ಯನಿರ್ವಹಿಸುತ್ತಿವೆ.

ಮೇಟಿಯನ್ನು ST ಗೆ ಸೇರಿಸುವುದರ ವಿರುದ್ಧ ಪ್ರತಿಭಟನೆ
ರಾಜ್ಯದ ಸಾರ್ವಜನಿಕ ಪ್ರತಿನಿಧಿಗಳು ಮೇಟಿಯ ಬೇಡಿಕೆಯನ್ನು ಬಹಿರಂಗವಾಗಿ ಬೆಂಬಲಿಸುತ್ತಿದ್ದು, ಬುಡಕಟ್ಟು ಹಿತಾಸಕ್ತಿಗಳನ್ನು ಸಾಮೂಹಿಕವಾಗಿ ರಕ್ಷಿಸಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದೆ ಎಂದು ವಿದ್ಯಾರ್ಥಿ ಸಂಘಟನೆ ಹೇಳಿದೆ. ಮಣಿಪುರದ ಗುಡ್ಡಗಾಡು ಜಿಲ್ಲೆಗಳಲ್ಲಿ ಮೈತೇಯ್ (ಮೇಟಿ) ವಾಸಿಸುತ್ತಿದ್ದಾರೆ. ಇದು ರಾಜ್ಯ ಪ್ರದೇಶದ ಸುಮಾರು ಹತ್ತು ಪ್ರತಿಶತವನ್ನು ಹೊಂದಿದೆ. ಮ್ಯಾನ್ಮಾರ್ ಮತ್ತು ಬಾಂಗ್ಲಾದೇಶೀಯರ ದೊಡ್ಡ ಪ್ರಮಾಣದ ಅಕ್ರಮ ವಲಸೆಯಿಂದಾಗಿ ಸಂಕಷ್ಟವನ್ನು ಎದುರಿಸುತ್ತಿರುವುದಾಗಿ ಸಮುದಾಯವು ಹೇಳಿಕೊಂಡಿದೆ. ಹೀಗಾಗಿ ಬೇರೆ ಜಾತಿಯನ್ನು ಮೇಟಿ ಸಮುದಾಯಕ್ಕೆ ಸೇರಿಸುವುದನ್ನು ಸಮುದಾಯ ತರಸ್ಕರಿಸಿದೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications