ಮಣಿಪುರ ಹಿಂಸಾಚಾರ: ಕೆಲ ಗಂಟೆಗಳ ಕಾಲ ಕರ್ಫ್ಯೂ ಸಡಿಲಿಕೆ, ಜನ ಗುಂಪು ಸೇರುವುದು ನಿಷೇಧ!
ಮಣಿಪುರದಲ್ಲಿ ಪರಿಸ್ಥಿತಿ ಚಿಂತಾಜನಕವಾಗಿದೆ. ಅಲ್ಲಿ ಮತ್ತೆ ಹಿಂಸಾಚಾರ ನಡೆದ ಕಾರಣ ಸರ್ಕಾರ ಹಲವು ಪ್ರದೇಶಗಳಲ್ಲಿ ಕರ್ಫ್ಯೂ ವಿಧಿಸಿತ್ತು. ಆದರೆ ಇಂದು ಅಂದರೆ ಮೇ 26ರಂದು ಕೆಲ ಗಂಟೆಗಳ ಕಾಲ ಕರ್ಫ್ಯೂ ಸಡಿಲಗೊಳಿಸಲಾಗಿದೆ. ಇದರಿಂದ ಜನರು ಮನೆಯಿಂದ ಹೊರಬಂದು ಅಗತ್ಯ ವಸ್ತುಗಳನ್ನು ಖರೀದಿಸಲು ಅನುವು ಮಾಡಿಕೊಡಲಾಗಿದೆ. ಆದರೆ ಜನರು ಒಟ್ಟಿಗೆ ಗುಂಪು ಸೇರುವುದನ್ನು ನಿಷೇಧಿಸಲಾಗಿದೆ.
ಮಾಹಿತಿಯ ಪ್ರಕಾರ, ಆಡಳಿತ ಪೂರ್ವ ಮತ್ತು ಪಶ್ಚಿಮ ಮಣಿಪುರದಲ್ಲಿ ಕರ್ಫ್ಯೂ ಅನ್ನು ಬೆಳಿಗ್ಗೆ 5 ರಿಂದ 12 ರವರೆಗೆ ಸಡಿಲಗೊಳಿಸಲಾಗಿತ್ತು. ಅಧಿಕಾರಿಗಳ ಪ್ರಕಾರ, ಜನರು ತಮ್ಮ ಮನೆಯಿಂದ ಹೊರಬಂದು ಸರಕುಗಳು ಮತ್ತು ಇತರ ಅಗತ್ಯ ವಸ್ತುಗಳನ್ನು ಖರೀದಿಸಲು ಕೆಲವು ಗಂಟೆಗಳ ಕಾಲ ಕರ್ಫ್ಯೂ ಸಡಿಲಗೊಳಿಸಲಾಗಿತ್ತು. ಅಗತ್ಯ ಔಷಧಿಗಳು ಮತ್ತು ಆಹಾರ ಪದಾರ್ಥಗಳ ಖರೀದಿ ಮಾಡಲು ಜನ ಮನೆಯಿಂದ ಹೊರಬಂದಿದ್ದು ಎಲ್ಲೆಡೆ ಕಂಡು ಬಂದಿದೆ.

ಯಾವ ಪ್ರದೇಶಗಳಲ್ಲಿ ಹಿಂಸಾಚಾರ?
ಮಾಹಿತಿ ಪ್ರಕಾರ, ಮಣಿಪುರದಲ್ಲಿ ಬುಧವಾರ ಮತ್ತೆ ಹಿಂಸಾಚಾರ ಭುಗಿಲೆದ್ದಿತ್ತು. ಈ ವೇಳೆ ದುಷ್ಕರ್ಮಿಗಳು ಇಂಫಾಲದಲ್ಲಿರುವ ಸಚಿವರ ಮನೆಗೂ ನುಗ್ಗಿದ್ದಾರೆ. ಮತ್ತೊಂದೆಡೆ, ಬಿಷ್ಣುಪುರ ಜಿಲ್ಲೆಯಲ್ಲಿ ಶಂಕಿತ ಉಗ್ರನೊಬ್ಬ ಗುಂಡಿನ ದಾಳಿ ನಡೆಸಿದ್ದು, ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಘಟನೆಯ ನಂತರ ಆಡಳಿತವು ಬಿಷ್ಣುಪುರ್, ಇಂಫಾಲ್ ಪೂರ್ವ, ಇಂಫಾಲ್ ಪಶ್ಚಿಮ ಮತ್ತು ಜಿರಿಬಾಮ್ ಜಿಲ್ಲೆಗಳಲ್ಲಿ ಕರ್ಫ್ಯೂ ವಿಧಿಸಿದೆ. ಮಂಗಳವಾರ ರಾತ್ರಿ ಟ್ರಾಂಗ್ಲೋಬಿ ಮತ್ತು ಬಿಷ್ಣುಪುರ್ ಜಿಲ್ಲೆಗಳಲ್ಲಿ ಕೆಲವು ಮನೆಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ಕೆಲವು ವರದಿಗಳು ಹೇಳಿವೆ.
ಗೃಹ ಸಚಿವರು ಮಣಿಪುರಕ್ಕೆ ಭೇಟಿ
ಮಣಿಪುರ ಹಿಂಸಾಚಾರದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಗಂಭೀರವಾಗಿದ್ದು, ಶೀಘ್ರದಲ್ಲೇ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಎರಡು-ಮೂರು ದಿನಗಳ ಕಾಲ ಅಲ್ಲಿಯೇ ಇದ್ದು ಪರಿಸ್ಥಿತಿಯನ್ನು ತಿಳಿದುಕೊಳ್ಳಲಿದ್ದಾರೆ.

ಮತ್ತೊಂದೆಡೆ, ಗುರುವಾರ ಗುವಾಹಟಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಶಾ ಭಾಗವಹಿಸಿದ್ದರು. ಅಲ್ಲಿ ಅವರು ಮಣಿಪುರ ಹಿಂಸಾಚಾರದ ಬಗ್ಗೆ ಮೊದಲ ಬಾರಿಗೆ ಹೇಳಿಕೆ ನೀಡಿದರು. ಹೈಕೋರ್ಟ್ ಆದೇಶದಿಂದಾಗಿ ರಾಜ್ಯದಲ್ಲಿ ಹಿಂಸಾಚಾರ ಭುಗಿಲೆದ್ದಿದೆ ಎಂದರು. ಈ ಹಿಂದೆ ಸುಪ್ರೀಂ ಕೋರ್ಟ್ ಕೂಡ ಮಣಿಪುರ ಹೈಕೋರ್ಟ್ ತೀರ್ಪನ್ನು ತಪ್ಪು ಎಂದು ಬಣ್ಣಿಸಿತ್ತು. ಶಾಂತಿ ಕಾಪಾಡುವಂತೆ ಜನತೆಗೆ ಮನವಿ ಮಾಡಿದರು.
ಮಣಿಪುರ ಹಿಂಸಾಚಾರಕ್ಕೆ ಕಾರಣವೇನು?
ಮಣಿಪುರದಲ್ಲಿ ಹಿಂಸಾಚಾರ ಮುಂದುವರಿದಿದೆ. ಈಗಾಗಲೇ ಎಪ್ಪತ್ತಕ್ಕೂ ಹೆಚ್ಚು ಜನರು ಹಿಂಸಾಚಾರದಲ್ಲಿ ಸಾವಿಗೀಡಾಗಿದ್ದಾರೆ. ಇಂಫಾಲ ಸುತ್ತಮುತ್ತ ನೆಲೆಗೊಂಡಿರುವ ಮೈಟೈಸ್ ಸಮುದಾಯ ಹಾಗೂ ಮಣಿಪುರ ಗುಡ್ಡಗಾಡು ಪ್ರದೇಶದಲ್ಲಿ ವಾಸಿಸುತ್ತಿರುವ ಕುಕಿ ಹಾಗೂ ನಾಗಾ ಸಮುದಾಯಗಳ ನಡುವೆ ನಡೆಯುತ್ತಿರುವ ಸಂಘರ್ಷದಿಂದ ಈಶಾನ್ಯ ರಾಜ್ಯ ನಲುಗುತ್ತಿದೆ. ನಾಗಾಗಳು, ಕುಕಿಗಳು ಮತ್ತು ಮೈಟೈಸ್ ಸೇರಿದಂತೆ ರಾಜ್ಯದ ವಿವಿಧ ಜನಾಂಗೀಯ ಗುಂಪುಗಳು ಈ ಸಂಘರ್ಷದಲ್ಲಿ ತೊಡಗಿಕೊಂಡಿವೆ. ಇದು ಕೇವಲ ಮೀಸಲಾತಿ ಸಮಸ್ಯೆಯಿಂದ ನಡೆದಿರುವ ಸಂಘರ್ಷವಲ್ಲ. ಇದರ ಆಳದಲ್ಲಿ ಅಸ್ಮಿತೆಗಾಗಿ ನಡೆಸುತ್ತಿರುವ ಸುದೀರ್ಘ ಹೋರಾಟವೂ ಇದೆ.
ಮಣಿಪುರ ಸೇರಿದಂತೆ ಸುತ್ತಮುತ್ತಲಿನ ನಾಗಾ ಜನಾಂಗದವರು ಪ್ರತ್ಯೇಕ ರಾಜ್ಯಕ್ಕಾಗಿ ಸುದೀರ್ಘ ಹೋರಾಟವನ್ನೇ ನಡೆಸುತ್ತಿದ್ದಾರೆ. ಇದು ಹಲವು ಬಾರಿ ಹಿಂಸಾತ್ಮಕ ಸ್ವರೂಪ ಪಡೆದುಕೊಂಡು ಹಲವಾರು ಸಮಸ್ಯೆಗಳನ್ನು ಹುಟ್ಟಿಹಾಕಿದೆ. ಮಣಿಪುರದ ಅತಿ ದೊಡ್ಡ ಜನಾಂಗವಾದ ಮೈಟೈಸ್ ಸಮುದಾಯವು ಪ್ರತ್ಯೇಕ ನಾಗಾಲ್ಯಾಂಡ್ ರಾಜ್ಯದ ಬೇಡಿಕೆಯನ್ನು ವಿರೋಧಿಸುತ್ತಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications