Manipur violence: ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಭಾರೀ ಮಳೆ: ಅಗತ್ಯ ವಸ್ತುಗಳ ಪೂರೈಕೆಗೆ ಅಡ್ಡಿ!
ಇಂಫಾಲ್ ಆಗಸ್ಟ್ 17: ದೇಶದಲ್ಲಿ ಹಲವೆಡೆ ವರುಣನ ಅರ್ಭಟ ಜೋರಾಗಿದ್ದು ಉತ್ತರಖಂಡ, ಹಿಮಾಚಲ ಪ್ರದೇಶ ತತ್ತರಿಸಿ ಹೋಗಿವೆ. ಈ ನಡುವೆ ಮಣಿಪುರವನ್ನೂ ಮಳೆರಾಯ ಬಿಟ್ಟಿಲ್ಲ. ಹೀಮಸಾಚಾರ ಪೀಡಿತ ರಾಜ್ಯದಲ್ಲಿ ಅಗತ್ಯ ವಸ್ತುಗಳ ಪೂರೈಕೆಗೆ ವರುಣ ಅಡ್ಡಿಪಡಿಸಿದೆ.
ಅಧಿಕ ಮಳೆಯಿಂದಾಗಿ ಮಣಿಪುರದ ನೋನಿ ಜಿಲ್ಲೆಯಲ್ಲಿ ಭಾರಿ ಭೂಕುಸಿತ ಉಂಟಾಗಿದೆ. ಹೀಗಾಗಿ ಇಂಫಾಲ್-ಸಿಲ್ಚಾರ್ ಹೆದ್ದಾರಿಯನ್ನು ನಿರ್ಬಂಧಿಸಲಾಗಿದೆ. ಇದರಿಂದಾಗಿ ಕನಿಷ್ಠ 500 ಸರಕು ವಾಹನಗಳು ಸಿಲುಕಿಕೊಂಡಿವೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಇರಾಂಗ್ ಮತ್ತು ಅವಾಂಗ್ಖುಲ್ ಭಾಗ 2, ಖೋಂಗ್ಸಾಂಗ್ ಮತ್ತು ಅವಾಂಗ್ಖುಲ್ ಮತ್ತು ರಂಗ್ಖುಯಿ ಗ್ರಾಮದ ನಡುವಿನ ರಾಷ್ಟ್ರೀಯ ಹೆದ್ದಾರಿ 37 ರಲ್ಲಿ ಬುಧವಾರ ಭೂಕುಸಿತ ಸಂಭವಿಸಿದೆ. ರಸ್ತೆಯನ್ನು ತೆರವುಗೊಳಿಸಿ, ಸಂಚಾರವನ್ನು ಪುನರಾರಂಭಿಸುವ ಕೆಲಸ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯು ಭೂಕುಸಿತಕ್ಕೆ ಕಾರಣವಾಗಿದೆ. ಭೂಕುಸಿತದಿಂದಾಗಿ ಕನಿಷ್ಠ 500 ಸರಕು ವಾಹನಗಳು ಹೆದ್ದಾರಿಯ ವಿವಿಧ ಭಾಗಗಳಲ್ಲಿ ಸಿಲುಕಿಕೊಂಡಿವೆ.
ಕಳೆದ ವರ್ಷ ಜೂನ್ನಲ್ಲಿ ಜಿಲ್ಲೆಯಲ್ಲಿ ರೈಲ್ವೆ ನಿರ್ಮಾಣದ ಸ್ಥಳದಲ್ಲಿ ಭಾರಿ ಭೂಕುಸಿತ ಸಂಭವಿಸಿ ಕನಿಷ್ಠ 61 ಜನರು ಸಾವನ್ನಪ್ಪಿದ್ದರು. ಜೂನ್ 30 ರಂದು ಜಿರಿಬಾಮ್-ಇಂಫಾಲ್ ರೈಲು ಮಾರ್ಗದ ತುಪುಲ್ ರೈಲ್ವೆ ಯಾರ್ಡ್ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿತ್ತು.
ಹಿಂಸಾಚಾರ ಪೀಡಿತ ರಾಜ್ಯದಲ್ಲಿ ಭೂಕುಸಿತದಿಂದಾಗಿ ಅಗತ್ಯ ವಸ್ತುಗಳ ಪೂರೈಕೆಯು ಪರಿಣಾಮ ಬೀರುವ ಆತಂಕವಿದೆ. ಅಲ್ಲಿ ದಿನಗಟ್ಟಲೆ ರಸ್ತೆ ತಡೆ ಸರಕು ವಾಹನಗಳ ಸಂಚಾರದ ಮೇಲೆ ಪರಿಣಾಮ ಬೀರಿದೆ. ದೈನಂದಿನ ಜೀವನವನ್ನು ದುರ್ಬಲಗೊಳಿಸಿದೆ.
ಮೇ ತಿಂಗಳಲ್ಲಿ ರಾಜ್ಯದಲ್ಲಿ ಜನಾಂಗೀಯ ಘರ್ಷಣೆಗಳು ಭುಗಿಲೆದ್ದಿದ್ದು ಮೂರು ತಿಂಗಳಿಗೂ ಹೆಚ್ಚು ಕಾಲ ಹೊಂಸಾಚಾರ ಮುಂದುವರೆದಿದೆ. ಇದು 160 ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಯಿತು.
ಮಣಿಪುರ ಹಿಂಸಾಚಾರ
ಕಳೆದ ಮೂರು ತಿಂಗಳಿನಿಂದ ಮಣಿಪುರದಲ್ಲಿ ಮೈಟಿ ಮತ್ತು ಕುಕಿ ಜನಾಂಗಗಳ ನಡುವೆ ಘರ್ಷಣೆ ನಡೆಯುತ್ತಿದೆ. ವಿವಾದ ಶುರುವಾಗಿದ್ದು ಹೇಗೆ ಅಂದರೆ, ತಮಗೂ ಎಸ್ಟಿ ಸ್ಥಾನಮಾನ ನೀಡಬೇಕು ಎಂಬುದು ಮೈತೇಯಿ ಸಮುದಾಯದ ಹಲವು ದಶಕಗಳ ಆಗ್ರಹ. ಈ ಸಮುದಾಯದವರು ಮಣಿಪುರ ಹೈಕೋರ್ಟ್ನಲ್ಲೂ ಅರ್ಜಿ ಸಲ್ಲಿಸಿದ್ದರು. ''ಮಣಿಪುರ 1949ರಲ್ಲಿ ಭಾರತದೊಂದಿಗೆ ವಿಲೀನವಾಯಿತು. ಇದಕ್ಕೂ ಪೂರ್ವದಲ್ಲಿ ನಮಗೆ ಬುಡಕಟ್ಟು ಸ್ಥಾನಮಾನವಿತ್ತು,'' ಎಂದೂ ವಾದಿಸಿದ್ದರು. ಅಂತಿಮವಾಗಿ ಹೈಕೋರ್ಟ್, ಮೈತೇಯಿ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ (ಎಸ್ಟಿ) ಸೇರಿಸುವಂತೆ ರಾಜ್ಯ ಸರಕಾರಕ್ಕೆ ಶಿಫಾರಸು ಮಾಡಿತ್ತು.
ನಾಗಾ- ಕುಕಿಗಳ ವಾದವೇನು? ಮೈತೇಯಿ ಸಮುದಾಯಕ್ಕೆ ಮೀಸಲಾತಿ ನೀಡಲೇಬಾರದು. ರಾಜ್ಯದ 60 ವಿಧಾನಸಭಾ ಸ್ಥಾನಗಳಲ್ಲಿ 40 ಸೀಟುಗಳು ಮೈತೇಯಿ ಪ್ರಾಬಲ್ಯದ ಇಂಫಾಲ್ ಕಣಿವೆಯಲ್ಲಿವೆ. ಹೀಗಿರುವಾಗ ಇವರನ್ನು ಎಸ್ಟಿ ವರ್ಗಕ್ಕೆ ಸೇರಿಸಿದರೆ, ಬೆಟ್ಟಗಳಲ್ಲಿ ಇವರು ಜಮೀನು ಖರೀದಿಸಲು, ಮನೆ ಕಟ್ಟಲು ಮುಂದಾಗುತ್ತಾರೆ. ನಮ್ಮ ಹಕ್ಕುಗಳನ್ನು ಕಸಿದುಕೊಳ್ಳುತ್ತಾರೆ. ಮೈತೇಯಿ ಇನ್ನಷ್ಟು ಪ್ರಬಲಗೊಳ್ಳುತ್ತದೆ''. ಇದು ಮಣಿಪುರದಲ್ಲಿ ಘರ್ಷಣೆಗೆ ಕಾರಣವಾಗಿದೆ.
ಹಿಂಸಾಚಾರ ಪೀಡಿತ ಸ್ಥಳಗಳಿಗೆ ಅಗತ್ಯ ವಸ್ತುಗಳ ಪೂರೈಕೆಗೆ ಮಳೆ ಅಡ್ಡಿಯನ್ನುಂಟು ಮಾಡಿದೆ.
-
Bengaluru Rain: ಬೆಂಗಳೂರಲ್ಲಿ ಮಳೆ ಬಂದಾಗ ಪವರ್ ಕಟ್ ಆಗುವುದ್ಯಾಕೆ, ಡಾಕ್ಟರ್ ಪ್ರಶ್ನೆಗೆ ನೆಟ್ಟಿಗರು ಹೇಳಿದ್ದೇನು -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ












Click it and Unblock the Notifications