Manipur violence: ಭಾರತ-ಮ್ಯಾನ್ಮಾರ್ ಗಡಿಗೆ ಚಾಚಿದ ಮಣಿಪುರ ಬೆಂಕಿ, ಮೈತೇಯಿ ಸಮುದಾಯದ ಮನೆಗಳನ್ನು ಸುಟ್ಟು ಹಾಕಿದ ಮಹಿಳೆಯರು
ಗುವಾಹಟಿ, ಜುಲೈ 26: ಕಲಹ ಪೀಡಿತ ಮಣಿಪುರದ ಹಿಂಸಾಚಾರ ಭಾರತ-ಮ್ಯಾನ್ಮಾರ್ ಗಡಿಗೆ ಚಾಚಿಕೊಂಡಿದೆ. ಹೊಸದಾಗಿ ವರದಿಯಾಗಿರುವ ಹಿಂಸಾಚಾರದಲ್ಲಿ ಮೈತೇಯಿ ಸಮುದಾಯದ ಮನೆಗಳು ಭಸ್ಮಗೊಂಡಿವೆ. ಈ ಘಟನೆ ಭಾರತ-ಮ್ಯಾನ್ಮಾರ್ ಗಡಿಯಲ್ಲಿರುವ ಪಟ್ಟಣದಲ್ಲಿ ನಡೆದಿದೆ.
ಸುಮಾರು 2,000 ಜನರ ಗುಂಪೊಂದು ಭಾರತ-ಮ್ಯಾನ್ಮಾರ್ ಗಡಿ ಪಟ್ಟಣವಾದ ಮೊರೆಹ್ನಲ್ಲಿ ಬುಧವಾರ ಬೆಳಿಗ್ಗೆ ಮನೆಗಳನ್ನು ಸುಟ್ಟುಹಾಕಿದೆ. ಸುಮಾರು 30 ಮನೆಗಳಿಗೆ ಬೆಂಕಿ ಹಚ್ಚಿದೆ. ಇತರ ನಾಲ್ಕು ಮನೆಗಳನ್ನು ನೆಲಸಮಗೊಳಿಸಿದೆ. ಈ ಮನೆಗಳೆಲ್ಲವೂ ಮೈತೇಯಿ ಸಮುದಾಯದ ಜನರಿಗೆ ಸೇರಿವೆ ಎಂದು ವರದಿಯಾಗಿವೆ.

ಬಹುತೇಕ ಮಹಿಳೆಯರಿಂದಲೇ ತುಂಬಿದ್ದ ಗುಂಪು ಬೆಳಗ್ಗೆ 10 ಗಂಟೆ ಸುಮಾರಿಗೆ ಮೋರೆ ಬಜಾರ್ ಪ್ರದೇಶದಲ್ಲಿ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ. ದಾಳಿಗಳು ಮುಂದುವರಿಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಭದ್ರತಾ ಸಿಬ್ಬಂದಿ ಸ್ಥಳದಲ್ಲಿದ್ದರೂ ಮೂಕ ಪ್ರೇಕ್ಷಕರಾಗಿದ್ದರು ಎಂದು ವರದಿಯಾಗಿದೆ. ಮೇ 3 ರಂದು ರಾಜ್ಯದಲ್ಲಿ ಹಿಂಸಾಚಾರ ಭುಗಿಲೆದ್ದ ನಂತರ ಈ ಪಟ್ಟಣವನ್ನು ಮೈತೇಯಿ ಸಮುದಾಯದವರು ತೊರೆದಿದ್ದಾರೆ.
ಮೊರೆಹ್ ಪಟ್ಟಣವು ವಿವಿಧ ಸಮುದಾಯಗಳ ಮಿಶ್ರ ಜನಸಂಖ್ಯೆಯನ್ನು ಹೊಂದಿದೆ. ಕುಕಿಗಳು, ಮೈತೇಯಿಗಳು, ತಮಿಳರು, ಗೂರ್ಖಾಗಳು, ಬೆಂಗಾಲಿಗಳು, ಪಂಜಾಬಿಗಳು ಸೇರಿದಂತೆ ಇತ್ಯಾದಿ ಸಮಯದಾಯದ ಜನರು ಈ ಸ್ಥಳದಲ್ಲಿ ವಾಸವಾಗಿದ್ದಾರೆ.

ಇಲ್ಲಿನ ಆದಿವಾಸಿಗಳಲ್ಲದವರು ಹೆಚ್ಚಾಗಿ ವ್ಯಾಪಾರಿಗಳು. ಅವರು ಹೆಚ್ಚಾಗಿ ಮ್ಯಾನ್ಮಾರ್ನ ಗ್ರಾಹಕರನ್ನು ಅವಲಂಬಿಸಿದ್ದಾರೆ. ಆದಾಗ್ಯೂ, ಈಗ ಮ್ಯಾನ್ಮಾರ್ ದೇಶದ ಜನರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಇದು ವ್ಯಾಪಾರದ ಮೇಲೆ ತೀವ್ರ ಹೊಡೆತ ಬಿದ್ದಿದೆ ಎಂದು ಹೇಳಲಾಗಿದೆ.
ಬಿಷ್ಣುಪುರ್-ಚುರಚಂದ್ಪುರ ಜಿಲ್ಲೆಗಳ ಗಡಿಗೆ ಸಮೀಪವಿರುವ ಸ್ಥಳದಲ್ಲಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಈ ಪ್ರಕರಣದಲ್ಲಿ ಇಬ್ಬರು ರೈತರು ಗಾಯಗೊಂಡಿದ್ದಾರೆ. ಇದಾದ, ಮರುದಿನ ಮನೆಗೆ ಹಂಚಿದ ಪ್ರಕರಣ ನಡೆದಿದೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications