ಮಣಿಪುರದ ಬುಡಕಟ್ಟು ಜನರು ಮ್ಯಾನ್ಮಾರ್ನವರಲ್ಲ: ಅಮಿತ್ ಶಾ ಹೇಳಿಕೆಗೆ ರಾಜ್ಯಸಭಾ ಸದಸ್ಯ ತಿರುಗೇಟು- ಎನ್ಡಿಎ ಮೈತ್ರಿಯಲ್ಲಿ ಒಡಕು
ಐಜ್ವಾಲ್, ಆಗಸ್ಟ್ 11: ಮಿಜೋರಾಂನ ಏಕೈಕ ರಾಜ್ಯಸಭಾ ಸದಸ್ಯ ಕೆ ವನಲಾಲ್ವೆನಾ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಸಂಸತ್ತಿನಲ್ಲಿ ತೀವ್ರ ವಾಗ್ದಾಳಿ ನಡೆಸಿದ್ದಾರೆ ಎಂದು 'ಟೈಮ್ಸ್ ಆಫ್ ಇಂಡಿಯಾ' ವರದಿ ಮಾಡಿದೆ.
ವನಲಾಲ್ವೆನಾ ಅವರು ಎನ್ಡಿಎ ಮೈತ್ರಿಕೂಟದ ಅಂಗ ಪಕ್ಷವಾದ ಮಿಜೋ ನ್ಯಾಷನಲ್ ಫ್ರಂಟ್ (ಎಂಎನ್ಎಫ್) ನಾಯಕರಾಗಿದ್ದಾರೆ.

ಮಣಿಪುರದ ಬುಡಕಟ್ಟು ಜನರನ್ನು ಮ್ಯಾನ್ಮಾರ್ ಪ್ರಜೆಗಳು ಎಂದು ಅಮಿತ್ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಕೇಂದ್ರ ಗೃಹ ಸಚಿವರಿಗೆ ವನಲಾಲ್ವೆನಾ ತಿರುಗೇಟು ನೀಡಿದ್ದಾರೆ.
ಮಣಿಪುರದ ವಿಚಾರವಾಗಿ ಸಂಸತ್ನಲ್ಲಿ ನಡೆದ ಚರ್ಚೆ ವೇಳೆ ಮಾತನಾಡಿದ ವನ್ಲಾಲ್ವೆನಾ, 'ಮಣಿಪುರದ ಬುಡಕಟ್ಟು ಜನಸಂಖ್ಯೆಯು ಈಶಾನ್ಯ ರಾಜ್ಯಗಳಲ್ಲಿ 200 ವರ್ಷಗಳಿಂದ ನೆಲೆಸಿದೆ' ಎಂದು ಪ್ರತಿಪಾದಿಸಿದರು.

ಬ್ರಿಟಿಷರು ಭಾರತಕ್ಕೆ ಬರುವುದಕ್ಕಿಂತ ಮುಂಚಿತವಾಗಿಯೇ ಮಣಿಪುರದಲ್ಲಿ ಬುಡಕಟ್ಟು ಜನಾಂಗದವರು ನೆಲೆಸಿದ್ದಾರೆ ಎಂದು ಅವರು ಹೇಳಿದ್ದಾರೆ.
'ನಾನು ಮಿಜೋರಾಂನ ಬುಡಕಟ್ಟು ಜನಾಂಗಕ್ಕೆ ಸೇರಿದವನು. ನಾವು ವಿದೇಶಿಯರಲ್ಲ. ನಾವು ಮ್ಯಾನ್ಮಾರ್ ಪ್ರಜೆಗಳಲ್ಲ. ನಾವು ಭಾರತೀಯರು. ಭಾರತ ಸ್ವತಂತ್ರವಾಗುವ ನೂರಾರು ವರ್ಷಗಳ ಮೊದಲು ನಾವು ಈಶಾನ್ಯ ರಾಜ್ಯಗಳಲ್ಲಿ ನೆಲೆ ಕಂಡುಕೊಂಡಿದ್ದೇವೆ' ಎಂದು ವನಲಾಲ್ವೆನಾ ತಿಳಿಸಿದ್ದಾರೆ.
ಈ ಹೇಳಿಕೆಗೆ ಪ್ರತಿಕ್ರಿಯಿಸಿದ ರಾಜ್ಯಸಭೆಯ ಸ್ಪೀಕರ್ ಜಗದೀಪ್ ಧನಕರ್, ವನಲಾಲ್ವೆನಾ ಅವರ ಹೇಳಿಕೆಯನ್ನು ದಾಖಲಿಸಲಾಗುವುದಿಲ್ಲ. ಇದೊಂದು ಸೂಕ್ಷ್ಮ ಹಾಗೂ ಗಂಭೀರ ವಿಷಯವೆಂದು ತಿಳಿಸಿದರು.

ಚರ್ಚೆ ಬಳಿಕ ವನಲಾಲ್ವೆನಾ ಅವರು ಟೈಮ್ಸ್ ಆಫ್ ಇಂಡಿಯಾದೊಂದಿಗೆ ಮಾತನಾಡುತ್ತಾ ತಮ್ಮ ಹತಾಶೆಯನ್ನು ವ್ಯಕ್ತಪಡಿಸಿದ್ದಾರೆ.
'ಸದನದಲ್ಲಿ ನನ್ನ ಮೈಕ್ರೊಫೋನ್ ಸ್ವಿಚ್ ಆಫ್ ಮಾಡಲಾಗಿದೆ. ನನ್ನ ಧ್ವನಿಯ ಮುಕ್ಕಾಲು ಭಾಗವು ಕೇಳಿಸಲಿಲ್ಲ' ಎಂದು ಹೇಳಿದ್ದಾರೆ.
ಅಕ್ರಮ ನುಸುಳುಕೋರರಿಂದ ಮಣಿಪುರದಲ್ಲಿ ತೊಂದರೆಗಳು ಉಂಟಾಗಿವೆ ಎಂದು ಅಮಿಶ್ ಶಾ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆಯು ಮಣಿಪುರ ಸಿಎಂ ಎನ್ ಬಿರೇನ್ ಸಿಂಗ್ ಅವರ ನಿಲುವಿಗೆ ಹೊಂದಿಕೆಯಾಗುತ್ತದೆ ಎಂದು ಎಂಎನ್ಎಫ್ ಸಂಸದರು ತಿಳಿಸಿದ್ದಾರೆ.
ಮಿಜೋರಾಂ ಮುಖ್ಯಮಂತ್ರಿ ಝೋರಂತಂಗ ನೇತೃತ್ವದ ಎಂಎನ್ಎಫ್ ಬಿಜೆಪಿ ನೇತೃತ್ವದ ಎನ್ಡಿಎಗೆ ಬೆಂಬಲ ನೀಡಿದರೆ, ಈ ಬೆಂಬಲ ಸಮಸ್ಯೆಗೆ ಕಾರಣವಾಗಲಿದೆ ಎಂದು ಅವರು ಸ್ಪಷ್ಟಪಡಿಸಿದರು.
ಮೇ 3 ರಿಂದ ಮಣಿಪುರದಲ್ಲಿ ಗಲಭೆಗಳು ನಡೆಯುತ್ತಿವೆ. ಬಹುಸಂಖ್ಯಾತ ಮೈತೇಯಿ ಹಾಗೂ ಅಲ್ಪಸಂಖ್ಯಾತ ಕುಕಿ ಸಮುದಾಯಗಳ ನಡುವೆ ಸಂಘರ್ಷ ಏರ್ಪಟ್ಟಿದೆ. ಈ ವರೆಗೂ 160 ಕ್ಕೂ ಅಧಿಕ ಮಂದಿ ಸಂಘರ್ಷದಲ್ಲಿ ಮೃತಪಟ್ಟಿದ್ದಾರೆ. ಮಹಿಳೆಯರ ಮೇಲೆ ಅತ್ಯಾಚಾರಗಳಾಗಿವೆ. ಈ ವಿಚಾರವಾಗಿ ಪ್ರಧಾನಿ ಮೋದಿ ಮಾತನಾಡಬೇಕೆಂದು ವಿರೋಧ ಪಕ್ಷಗಳ ಮೈತ್ರಿಕೂಟ ಒತ್ತಾಯಿಸಿತ್ತು. ಈ ಹಿನ್ನೆಲೆಯಲ್ಲಿ ಸಂಸತ್ನಲ್ಲಿ ಅವಿಶ್ವಾಸ ನಿರ್ಣಯವನ್ನು ಮಂಡಿಸಲಾಯಿತು.
ಈ ಕುರಿತು ಗುರುವಾರ ಮಾತನಾಡಿರುವ ಪ್ರಧಾನಿ ಮೋದಿ, ಭಾರತ ಮಣಿಪುರದೊಂದಿಗೆ ಇರಲಿದೆ. ಅಲ್ಲಿ ಶಾಂತಿ ನೆಲೆಸುವಂತೆ ಮಾಡಲು ನಾವು ಎಲ್ಲ ರೀತಿಯ ಯತ್ನಗಳನ್ನು ಮಾಡುತ್ತೇವೆ ಎಂದು ಹೇಳಿದ್ದಾರೆ.
ಬುಧವಾರ ಸದನದಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಬಿಜೆಪಿಯವರು ಮಣಿಪುರದಲ್ಲಿ ಎರಡು ಮಣಿಪುರಗಳನ್ನು ಸೃಷ್ಟಿ ಮಾಡಿದ್ದಾರೆ. ಅವರು ದೇಶದ್ರೋಹಿಗಳು ಎಂದು ಕರೆದಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications