Manipur violence: ರಾತ್ರಿಯಿಡೀ ಗಲಭೆ, ಗುಂಡಿನ ದಾಳಿ, ಶಸ್ತ್ರಾಗಾರ ಧ್ವಂಸ, ಬಿಜೆಪಿ ನಾಯಕರ ಮನೆಗಳೇ ಟಾರ್ಗೆಟ್
ಗುವಾಹಟಿ, ಜೂನ್ 17: ಸಂಘರ್ಷ ಪೀಡಿತ ಮಣಿಪುರದ ಬಿಷ್ಣುಪುರ್ ಜಿಲ್ಲೆಯ ಕ್ವಾಕ್ಟಾ ಮತ್ತು ಚುರಾಚಂದ್ಪುರ ಜಿಲ್ಲೆಯ ಕಾಂಗ್ವಾಯ್ನಲ್ಲಿ ನಿನ್ನೆ ರಾತ್ರಿಯಿಡೀ ಗಲಭೆ, ದೊಂಬಿ ಹಾಗೂ ದಾಳಿಗಳು ನಡೆದಿವೆ. ಉದ್ರಿಕ್ತರ ಗುಂಪು ಸೇನಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆದಿವೆ. ಇಂದು ಬೆಳಗಿನ ವರೆಗೂ ರಕ್ತಸಿಕ್ತ ಸಂಘರ್ಷ ಮುಂದುವರಿದೇ ಇದೆ ಎಂದು ಪೊಲೀಸ್ ಮತ್ತು ಸೇನಾ ಮೂಲಗಳು ತಿಳಿಸಿವೆ. ವಿಧ್ವಂಸಕ ಕೃತ್ಯ ಮತ್ತು ಬೆಂಕಿ ಹಚ್ಚುವ ಅನೇಕ ಘಟನೆಗಳು ವರದಿಯಾಗಿವೆ.
ಸೇನೆ, ಅಸ್ಸಾಂ ರೈಫಲ್ಸ್, ರಾಪಿಡ್ ಆಕ್ಷನ್ ಫೋರ್ಸ್ ಮತ್ತು ರಾಜ್ಯ ಪೊಲೀಸರ ಜಂಟಿ ಪಡೆಗಳು ಇಂಫಾಲ್ ಪೂರ್ವ ಜಿಲ್ಲೆಯಲ್ಲಿ ಮಧ್ಯರಾತ್ರಿಯವರೆಗೆ ಪರೇಡ್ ಅನ್ನು ಕೈಗೊಂಡವು. ಬಳಿಕ ಶುರುವಾದ ಗಲಭೆ ಬೆಳಗಿನ ವರೆಗೂ ಮುಂದುವರಿಯಿತು ಎಂದು ತಿಳಿದುಬಂದಿದೆ.

ಅಡ್ವಾನ್ಸ್ ಆಸ್ಪತ್ರೆ ಬಳಿಯ ಅರಮನೆ ಕಾಂಪೌಂಡ್ನಲ್ಲಿ ಬೆಂಕಿ ಹಚ್ಚುವ ಯತ್ನ ನಡೆದಿದೆ. ಸುಮಾರು 1,000 ಜನರ ಗುಂಪು ನಿನ್ನೆ ಸಂಜೆ ಒಟ್ಟುಗೂಡಿತು. ಬೆಂಕಿ ಹಚ್ಚಿ ವಿಧ್ವಂಸಕ ಕೃತ್ಯಕ್ಕೆ ಪ್ರಯತ್ನಿಸಿತು. ಗುಂಪನ್ನು ಚದುರಿಸಲು ಆರ್ಎಎಫ್ ಅಶ್ರುವಾಯು ಮತ್ತು ರಬ್ಬರ್ ಬುಲೆಟ್ಗಳನ್ನು ಹಾರಿಸಲಾಯಿತು. ಇದರಲ್ಲಿ ಇಬ್ಬರು ನಾಗರಿಕರು ಗಾಯಗೊಂಡರು ಎಂದು ವರದಿಯಾಗಿದೆ.
ಮಣಿಪುರ ವಿಶ್ವವಿದ್ಯಾನಿಲಯದ ಬಳಿ ಗುಂಪು ಗಲಭೆ ಆರಂಭಿಸಿತು. ರಾತ್ರಿ 10.40ಕ್ಕೆ ತೊಂಗ್ಜು ಬಳಿ ಜಮಾಯಿಸಿದ 200ರಿಂದ 300 ಮಂದಿ ಸ್ಥಳೀಯ ಶಾಸಕರ ನಿವಾಸವನ್ನು ಧ್ವಂಸಗೊಳಿಸಲು ಯತ್ನಿಸಿದರು ಎಂದು ತಿಳಿದುಬಂದಿದೆ.

ನಿನ್ನೆ ರಾತ್ರಿ ಮತ್ತೊಂದು ಗುಂಪು ಇಂಫಾಲ್ ಪಶ್ಚಿಮ ಜಿಲ್ಲೆಯ ಇರಿಂಗ್ಬಾಮ್ ಪೊಲೀಸ್ ಠಾಣೆಯ ಶಸ್ತ್ರಾಗಾರವನ್ನು ಧ್ವಂಸಗೊಳಿಸಲು ಪ್ರಯತ್ನಿಸಿದೆ. ರಾತ್ರಿ 11.40ರ ವೇಳೆಗೆ 300ರಿಂದ 400 ಮಂದಿ ಪೊಲೀಸ್ ಠಾಣೆಗೆ ನುಗ್ಗಲು ಯತ್ನಿಸಿದರು. ಆರ್ಎಎಫ್ನಿಂದ ಗುಂಪನ್ನು ಚದುರಿಸಲಾಗಿದೆ ಎಂದು ವರದಿಯಾಗಿದೆ.
ಸೇನಾ ಮೂಲಗಳ ಪ್ರಕಾರ, 200 ರಿಂದ 300 ಜನರ ಗುಂಪು ಮಧ್ಯರಾತ್ರಿಯ ನಂತರ ಸಿಂಜೆಮೈಯಲ್ಲಿ ಬಿಜೆಪಿ ಕಚೇರಿಯನ್ನು ಸುತ್ತುವರೆದಿತು ಧ್ವಂಸಕ್ಕೆ ಪ್ರಯತ್ನಿಸಿದೆ. ಗುಂಪನ್ನು ಚದುರಿಸಲು ಸೇನೆ ಸಫಲವಾಗಿದೆ ಎಂದು ತಿಳಿದುಬಂದಿದೆ.
ಮಧ್ಯರಾತ್ರಿ ಇಂಫಾಲ್ ವೆಸ್ಟ್ನಲ್ಲಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಅಧಿಕಾರಿಮಯುಮ್ ಶಾರದಾ ದೇವಿ ಅವರ ನಿವಾಸವನ್ನು ಗುಂಪು ಧ್ವಂಸ ಮಾಡಲು ಪ್ರಯತ್ನಿಸಿದೆ. ಆದರೆ ಅದನ್ನು ಸೇನೆ ಮತ್ತು ಆರ್ಎಎಫ್ ತಡೆಯಿತು ಎಂದು ಸೇನೆಯ ಮೂಲಗಳು ತಿಳಿಸಿವೆ.
ಕೇಂದ್ರ ಸಚಿವ ಆರ್ಕೆ ರಂಜನ್ ಸಿಂಗ್ ಅವರ ಮನೆಯನ್ನು 1200 ಜನರ ಗುಂಪೊಂದು ಪೆಟ್ರೋಲ್ ಬಾಂಬ್ಗಳನ್ನು ಎಸೆದು ಸುಟ್ಟು ಹಾಕಿದ ಒಂದು ದಿನದ ನಂತರ ಮಣಿಪುರದಲ್ಲಿ ದಾಳಿಗಳು ಮತ್ತೆ ಭುಗಿಲೆದ್ದಿವೆ.
ಕಳೆದ ಕೆಲವು ದಿನಗಳಿಂದ ಮಣಿಪುರದಲ್ಲಿ ಎರಡು ಸಮುದಾಯಗಳ ನಡುವಿನ ಹಿಂಸಾಚಾರ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಬಿಜೆಪಿ ನಾಯಕರ ಆಸ್ತಿಪಾಸ್ತಿಗಳು ಗುರಿಯಾಗುತ್ತಿದೆ. ಪ್ರಸ್ತುತ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿ ಅತ್ಯಂತ ಅಸ್ಥಿರವಾಗಿದೆ ಎಂದು ಹೇಳಲಾಗುತ್ತಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications