Get Updates
Get notified of breaking news, exclusive insights, and must-see stories!

Manipur violence: ಮಣಿಪುರ ಹಿಂಸಾಚಾರ- ಓರ್ವ ಸಾವು, 40ಕ್ಕೂ ಹೆಚ್ಚು ಜನರಿಗೆ ಗಾಯ

ಇಂಫಾಲ ಮಾರ್ಚ್ 9: ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ರಾಷ್ಟ್ರಪತಿ ಆಡಳಿತ ಜಾರಿಯಾದ ಬಳಿಕ ಮತ್ತೆ ಹಿಂಸಾಚಾರ ಪ್ರಾರಂಭವಾಗಿದೆ. ಕಾಂಗ್‌ಪೊಕ್ಪಿ ಜಿಲ್ಲೆಯ ವಿವಿಧ ಭಾಗಗಳಲ್ಲಿ ಕುಕಿ ಪ್ರತಿಭಟನಾಕಾರರ ಗುಂಪು ಗಲಾಟೆ ನಡೆಸಿದೆ. ಹೀಗಾಗಿ ಗುಂಪನ್ನು ಚದುರಿಸಲು ಅಶ್ರುವಾಯು ಪ್ರಯೋಗಿಸಲಾಗಿದ್ದು, ಘಟನೆಯಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ. ಜೊತೆಗೆ 40 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆಂದು ವರದಿಯಾಗಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಾದ್ಯಂತ ಮುಕ್ತ ಚಳುವಳಿಗೆ ಅವಕಾಶ ನೀಡಿದ ನಿರ್ದೇಶನದ ವಿರುದ್ಧ ಪ್ರತಿಭಟನೆ ನಡೆಯುತ್ತಿದೆ. ಇದನ್ನು ಕುಕಿ ಪ್ರತಿಭಟನಾಕಾರರು ವಿರೋಧಿಸಿದ್ದಾರೆ. ಆದರೆ ಕುಕಿಗಳು ಮತ್ತು ಮೈತೈಗಳ ನಡುವೆ ಏಪ್ರಿಲ್ 2023 ರಿಂದ ರಾಜ್ಯದಲ್ಲಿ ಗಲಾಟೆ ನಡೆಯುತ್ತಿದ್ದು ಇದೀಗ ರಾಷ್ಟ್ರಪತಿ ಆಡಳಿತ ಹೊಸ ಹಿಂಸಾಚಾರದ ಅಲೆಯನ್ನು ಪ್ರಚೋದಿಸಿದೆ.

Manipur violence One dead over 40 injured

ಶನಿವಾರ ಕುಕಿ ಪ್ರತಿಭಟನೆಯನ್ನು ಚದುರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದ ನಂತರ ಘರ್ಷಣೆಗಳು ಭುಗಿಲೆದ್ದಿವೆ. ಪ್ರಸ್ತುತ ಮಣಿಪುರ ಬೂದಿಮುಚ್ಚಿದ ಕೆಂಡದಂತಿದೆ. ಹೀಗಾಗಿ ಕುಕಿ ಝೋ ಕೌನ್ಸಿಲ್ ಶನಿವಾರ ಮಧ್ಯರಾತ್ರಿಯಿಂದ ಎಲ್ಲಾ ಕುಕಿ ಪ್ರದೇಶಗಳಲ್ಲಿ ಅನಿರ್ದಿಷ್ಟಾವಧಿ ಬಂದ್ ಅನ್ನು ವಿಧಿಸಿದೆ. ಇತ್ತ ಕೇಂದ್ರ ಸರ್ಕಾರ ಮೂಲ ಸಮಸ್ಯೆಗಳನ್ನು ಪರಿಹರಿಸಲು ಮತ್ತು ಉದ್ವಿಗ್ನತೆ, ಹಿಂಸಾತ್ಮಕ ಘರ್ಷಣೆಯನ್ನು ಮತ್ತಷ್ಟು ಹೆಚ್ಚಿಸುವುದನ್ನು ತಪ್ಪಿಸಲು ಸ್ಥಳೀಯ ಅಧಿಕಾರಿಗಳಿಗೆ ಸೂಚನೆ ನೀಡಿದೆ.

ಘರ್ಷಣೆಯಲ್ಲಿ ಸಾವನ್ನಪ್ಪಿದ ಪ್ರತಿಭಟನಾಕಾರನನ್ನು 30 ವರ್ಷದ ಲಾಲ್‌ಗೌಥಾಂಗ್ ಸಿಂಗ್‌ಸಿಟ್ ಎಂದು ಗುರುತಿಸಲಾಗಿದೆ. ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಗುಂಡೇಟಿನಿಂದ ಗಾಯಗೊಂಡು ಅವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಬಹಿರಂಗಪಡಿಸಿದ್ದಾರೆ.

ಆಗಿದ್ದೇನು?

ರಾಷ್ಟ್ರಪತಿ ಆಡಳಿತ ಜಾರಿಯಾಗಿದ್ದರಿಂದ ಇಂಫಾಲ-ಕಾಂಗ್ಪೋಕ್ಪಿ-ಸೇನಾಪತಿ ಮಾರ್ಗದಲ್ಲಿ ಸಂಚರಿಸುತ್ತಿದ್ದ ರಾಜ್ಯ ಸಾರಿಗೆ ಬಸ್ ಮೇಲೆ ಗುಂಪೊಂದು ಕಲ್ಲು ತೂರಾಟ ನಡೆಸಿದೆ. ಗಮ್ಗಿಫೈನಲ್ಲಿ ಕಲ್ಲು ತೂರಾಟದ ಘಟನೆ ನಡೆದಿದ್ದು, ಭದ್ರತಾ ಪಡೆಗಳು ಜನಸಮೂಹವನ್ನು ಚದುರಿಸಲು ಅಶ್ರುವಾಯು ಮತ್ತು ಬಲಪ್ರಯೋಗ ಮಾಡಬೇಕಾಯಿತು.

Manipur violence One dead over 40 injured

ಆದರೆ ಪ್ರತಿಭಟನಾಕಾರರು ಗುಂಡಿನ ದಾಳಿ ಮಾಡಿದಾಗ ಪೊಲೀಸರು ಪ್ರತೀಕಾರದ ಕ್ರಮಗಳನ್ನು ತೆಗೆದುಕೊಂಡರು. ಪೊಲೀಸರು ಪ್ರತಿಯಾಗಿ ಗುಂಡಿನ ದಾಳಿ ಮಾಡಿದ್ದರು. ಈ ಪ್ರತಿಭಟನಾಕಾರರೊಂದಿಗಿನ ಹಿಂಸಾತ್ಮಕ ಘರ್ಷಣೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು 27 ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಮಣಿಪುರ ಪೊಲೀಸರು ತಿಳಿಸಿದ್ದಾರೆ.

ರಾಜ್ಯದಲ್ಲಿ ಸುಮಾರು ಎರಡು ವರ್ಷಗಳ ಜನಾಂಗೀಯ ಹಿಂಸಾಚಾರದಿಂದಾಗಿ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಕಳೆದ ತಿಂಗಳು ರಾಜೀನಾಮೆ ನೀಡಿದರು. ನಂತರ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾದ ಬಳಿಕ ಹೊಸ ಹಿಂಸಾಚಾರ ಸಂಭವಿಸಿದೆ.

ಮಣಿಪುರ ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಫೆಬ್ರವರಿ 20 ರಂದು ಭದ್ರತಾ ಪಡೆಗಳಿಂದ ದೋಚಲಾದ ಶಸ್ತ್ರಾಸ್ತ್ರಗಳು ಮತ್ತು ಇತರ ಅಕ್ರಮವಾಗಿ ಹೊಂದಿದ್ದ ಶಸ್ತ್ರಾಸ್ತ್ರಗಳನ್ನು ಏಳು ದಿನಗಳಲ್ಲಿ ಮರುಪಾವತಿಸಿ ಸ್ವಯಂಪ್ರೇರಣೆಯಿಂದ ಶರಣಾಗುವಂತೆ ಯುದ್ಧ ಗುಂಪುಗಳನ್ನು ಒತ್ತಾಯಿಸಿದ್ದರು.

ಇದಕ್ಕಾಗಿ ಬೆಟ್ಟ ಮತ್ತು ಕಣಿವೆ ಪ್ರದೇಶಗಳ ಜನರು ಹೆಚ್ಚುವರಿ ಸಮಯ ನೀಡುವಂತೆ ಒತ್ತಾಯಿಸಿದ್ದರು. ಹೀಗಾಗಿ ಅಜಯ್ ಕುಮಾರ್ ಭಲ್ಲಾ ಅವರು ಮಾರ್ಚ್ 6 ರಂದು ಸಂಜೆ 4 ಗಂಟೆಯವರೆಗೆ ಗಡುವನ್ನು ವಿಸ್ತರಿಸಿದರು. ಈ ಅವಧಿಯಲ್ಲಿ ಹಲವಾರು ಶಸ್ತ್ರಾಸ್ತ್ರಗಳನ್ನು ಶರಣಾಗಿಸಲಾಯಿತು. ಅವಧಿ ಮುಗಿದ ನಂತರ ಭದ್ರತಾ ಪಡೆಗಳು ವಿವಿಧ ಕಾರ್ಯಾಚರಣೆಗಳಲ್ಲಿ ರಾಜ್ಯಾದ್ಯಂತ 114 ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿವೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+