Manipur violence: ಮಣಿಪುರ ಹಿಂಸಾಚಾರ- ಓರ್ವ ಸಾವು, 40ಕ್ಕೂ ಹೆಚ್ಚು ಜನರಿಗೆ ಗಾಯ
ಇಂಫಾಲ ಮಾರ್ಚ್ 9: ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ರಾಷ್ಟ್ರಪತಿ ಆಡಳಿತ ಜಾರಿಯಾದ ಬಳಿಕ ಮತ್ತೆ ಹಿಂಸಾಚಾರ ಪ್ರಾರಂಭವಾಗಿದೆ. ಕಾಂಗ್ಪೊಕ್ಪಿ ಜಿಲ್ಲೆಯ ವಿವಿಧ ಭಾಗಗಳಲ್ಲಿ ಕುಕಿ ಪ್ರತಿಭಟನಾಕಾರರ ಗುಂಪು ಗಲಾಟೆ ನಡೆಸಿದೆ. ಹೀಗಾಗಿ ಗುಂಪನ್ನು ಚದುರಿಸಲು ಅಶ್ರುವಾಯು ಪ್ರಯೋಗಿಸಲಾಗಿದ್ದು, ಘಟನೆಯಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ. ಜೊತೆಗೆ 40 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆಂದು ವರದಿಯಾಗಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಾದ್ಯಂತ ಮುಕ್ತ ಚಳುವಳಿಗೆ ಅವಕಾಶ ನೀಡಿದ ನಿರ್ದೇಶನದ ವಿರುದ್ಧ ಪ್ರತಿಭಟನೆ ನಡೆಯುತ್ತಿದೆ. ಇದನ್ನು ಕುಕಿ ಪ್ರತಿಭಟನಾಕಾರರು ವಿರೋಧಿಸಿದ್ದಾರೆ. ಆದರೆ ಕುಕಿಗಳು ಮತ್ತು ಮೈತೈಗಳ ನಡುವೆ ಏಪ್ರಿಲ್ 2023 ರಿಂದ ರಾಜ್ಯದಲ್ಲಿ ಗಲಾಟೆ ನಡೆಯುತ್ತಿದ್ದು ಇದೀಗ ರಾಷ್ಟ್ರಪತಿ ಆಡಳಿತ ಹೊಸ ಹಿಂಸಾಚಾರದ ಅಲೆಯನ್ನು ಪ್ರಚೋದಿಸಿದೆ.

ಶನಿವಾರ ಕುಕಿ ಪ್ರತಿಭಟನೆಯನ್ನು ಚದುರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದ ನಂತರ ಘರ್ಷಣೆಗಳು ಭುಗಿಲೆದ್ದಿವೆ. ಪ್ರಸ್ತುತ ಮಣಿಪುರ ಬೂದಿಮುಚ್ಚಿದ ಕೆಂಡದಂತಿದೆ. ಹೀಗಾಗಿ ಕುಕಿ ಝೋ ಕೌನ್ಸಿಲ್ ಶನಿವಾರ ಮಧ್ಯರಾತ್ರಿಯಿಂದ ಎಲ್ಲಾ ಕುಕಿ ಪ್ರದೇಶಗಳಲ್ಲಿ ಅನಿರ್ದಿಷ್ಟಾವಧಿ ಬಂದ್ ಅನ್ನು ವಿಧಿಸಿದೆ. ಇತ್ತ ಕೇಂದ್ರ ಸರ್ಕಾರ ಮೂಲ ಸಮಸ್ಯೆಗಳನ್ನು ಪರಿಹರಿಸಲು ಮತ್ತು ಉದ್ವಿಗ್ನತೆ, ಹಿಂಸಾತ್ಮಕ ಘರ್ಷಣೆಯನ್ನು ಮತ್ತಷ್ಟು ಹೆಚ್ಚಿಸುವುದನ್ನು ತಪ್ಪಿಸಲು ಸ್ಥಳೀಯ ಅಧಿಕಾರಿಗಳಿಗೆ ಸೂಚನೆ ನೀಡಿದೆ.
ಘರ್ಷಣೆಯಲ್ಲಿ ಸಾವನ್ನಪ್ಪಿದ ಪ್ರತಿಭಟನಾಕಾರನನ್ನು 30 ವರ್ಷದ ಲಾಲ್ಗೌಥಾಂಗ್ ಸಿಂಗ್ಸಿಟ್ ಎಂದು ಗುರುತಿಸಲಾಗಿದೆ. ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಗುಂಡೇಟಿನಿಂದ ಗಾಯಗೊಂಡು ಅವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಬಹಿರಂಗಪಡಿಸಿದ್ದಾರೆ.
ಆಗಿದ್ದೇನು?
ರಾಷ್ಟ್ರಪತಿ ಆಡಳಿತ ಜಾರಿಯಾಗಿದ್ದರಿಂದ ಇಂಫಾಲ-ಕಾಂಗ್ಪೋಕ್ಪಿ-ಸೇನಾಪತಿ ಮಾರ್ಗದಲ್ಲಿ ಸಂಚರಿಸುತ್ತಿದ್ದ ರಾಜ್ಯ ಸಾರಿಗೆ ಬಸ್ ಮೇಲೆ ಗುಂಪೊಂದು ಕಲ್ಲು ತೂರಾಟ ನಡೆಸಿದೆ. ಗಮ್ಗಿಫೈನಲ್ಲಿ ಕಲ್ಲು ತೂರಾಟದ ಘಟನೆ ನಡೆದಿದ್ದು, ಭದ್ರತಾ ಪಡೆಗಳು ಜನಸಮೂಹವನ್ನು ಚದುರಿಸಲು ಅಶ್ರುವಾಯು ಮತ್ತು ಬಲಪ್ರಯೋಗ ಮಾಡಬೇಕಾಯಿತು.

ಆದರೆ ಪ್ರತಿಭಟನಾಕಾರರು ಗುಂಡಿನ ದಾಳಿ ಮಾಡಿದಾಗ ಪೊಲೀಸರು ಪ್ರತೀಕಾರದ ಕ್ರಮಗಳನ್ನು ತೆಗೆದುಕೊಂಡರು. ಪೊಲೀಸರು ಪ್ರತಿಯಾಗಿ ಗುಂಡಿನ ದಾಳಿ ಮಾಡಿದ್ದರು. ಈ ಪ್ರತಿಭಟನಾಕಾರರೊಂದಿಗಿನ ಹಿಂಸಾತ್ಮಕ ಘರ್ಷಣೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು 27 ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಮಣಿಪುರ ಪೊಲೀಸರು ತಿಳಿಸಿದ್ದಾರೆ.
ರಾಜ್ಯದಲ್ಲಿ ಸುಮಾರು ಎರಡು ವರ್ಷಗಳ ಜನಾಂಗೀಯ ಹಿಂಸಾಚಾರದಿಂದಾಗಿ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಕಳೆದ ತಿಂಗಳು ರಾಜೀನಾಮೆ ನೀಡಿದರು. ನಂತರ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾದ ಬಳಿಕ ಹೊಸ ಹಿಂಸಾಚಾರ ಸಂಭವಿಸಿದೆ.
ಮಣಿಪುರ ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಫೆಬ್ರವರಿ 20 ರಂದು ಭದ್ರತಾ ಪಡೆಗಳಿಂದ ದೋಚಲಾದ ಶಸ್ತ್ರಾಸ್ತ್ರಗಳು ಮತ್ತು ಇತರ ಅಕ್ರಮವಾಗಿ ಹೊಂದಿದ್ದ ಶಸ್ತ್ರಾಸ್ತ್ರಗಳನ್ನು ಏಳು ದಿನಗಳಲ್ಲಿ ಮರುಪಾವತಿಸಿ ಸ್ವಯಂಪ್ರೇರಣೆಯಿಂದ ಶರಣಾಗುವಂತೆ ಯುದ್ಧ ಗುಂಪುಗಳನ್ನು ಒತ್ತಾಯಿಸಿದ್ದರು.
ಇದಕ್ಕಾಗಿ ಬೆಟ್ಟ ಮತ್ತು ಕಣಿವೆ ಪ್ರದೇಶಗಳ ಜನರು ಹೆಚ್ಚುವರಿ ಸಮಯ ನೀಡುವಂತೆ ಒತ್ತಾಯಿಸಿದ್ದರು. ಹೀಗಾಗಿ ಅಜಯ್ ಕುಮಾರ್ ಭಲ್ಲಾ ಅವರು ಮಾರ್ಚ್ 6 ರಂದು ಸಂಜೆ 4 ಗಂಟೆಯವರೆಗೆ ಗಡುವನ್ನು ವಿಸ್ತರಿಸಿದರು. ಈ ಅವಧಿಯಲ್ಲಿ ಹಲವಾರು ಶಸ್ತ್ರಾಸ್ತ್ರಗಳನ್ನು ಶರಣಾಗಿಸಲಾಯಿತು. ಅವಧಿ ಮುಗಿದ ನಂತರ ಭದ್ರತಾ ಪಡೆಗಳು ವಿವಿಧ ಕಾರ್ಯಾಚರಣೆಗಳಲ್ಲಿ ರಾಜ್ಯಾದ್ಯಂತ 114 ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿವೆ.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications