Manipur violence: ಇಂಫಾಲ್ನಲ್ಲಿ ಪೊಲೀಸರ ವಿರುದ್ಧ ತಿರುಗಿಬಿದ್ದ ವಿದ್ಯಾರ್ಥಿಗಳು- ಹಿಂಸಾಚಾರದಲ್ಲಿ ಹಲವರಿಗೆ ಗಂಭೀರ ಗಾಯ
ಇಂಫಾಲ್, ಸೆಪ್ಟೆಂಬರ್ 27: ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ಸಂಘರ್ಷ ಉಂಟಾಗಿದೆ. ಮೈತೇಯಿ ಸಮುದಾಯದ ಇಬ್ಬರು ವಿದ್ಯಾರ್ಥಿಗಳ ಹತ್ಯೆ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ, ಕಲ್ಲು ತೂರಾಟ ನಡೆಸಿದ್ದಾರೆ. ಪೊಲೀಸರು ಉದ್ರಿಕ್ತ ವಿದ್ಯಾರ್ಥಿಗಳ ಮೇಲೆ ಅಶ್ರುವಾಯು ಸಿಡಿಸಿದ್ದಾರೆ.
ಸಿಎಂ ಕಚೇರಿಯಿಂದ ಸುಮಾರು 200 ಮೀಟರ್ ದೂರದಲ್ಲಿರುವ ಇಂಫಾಲ್ನ ಮೊಯಿರಾಂಗ್ಖೋಮ್ನಲ್ಲಿ ವಿದ್ಯಾರ್ಥಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಈ ಗುಂಪನ್ನು ಚದುರಿಸಲು ಭದ್ರತಾ ಪಡೆಗಳು ಹಲವು ಸುತ್ತಿನ ಅಶ್ರುವಾಯು ಶೆಲ್ಗಳನ್ನು ಹಾರಿಸಿವೆ. ಈ ವೇಳೆ, ಹಲವಾರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

ಜುಲೈನಲ್ಲಿ ನಾಪತ್ತೆಯಾದ ಇಬ್ಬರು ವಿದ್ಯಾರ್ಥಿಗಳನ್ನು ಅಪಹರಿಸಿ ಹತ್ಯೆಗೈಯ್ಯಲಾಗಿದೆ. ಈ ಇಬ್ಬರು ವಿದ್ಯಾರ್ಥಿಗಳನ್ನು ಕೊಲೆ ಮಾಡಿರುವ ಫೋಟೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ. ಈ ಹತ್ಯೆಯನ್ನು ಖಂಡಿಸಿ ನಿನ್ನೆಯಿಂದ ವಿದ್ಯಾರ್ಥಿಗಳು ಇಂಪಾಲ್ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
'ನಮಗೆ ನ್ಯಾಯ ಬೇಕು' ಎಂಬ ಘೋಷಣೆಗಳನ್ನು ಕೂಗುತ್ತಿದ್ದ ವಿದ್ಯಾರ್ಥಿಗಳು ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರ ಬಂಗಲೆಯತ್ತ ತೆರಳುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ವಿದ್ಯಾರ್ಥಿ ಮುಖಂಡ ಲಂತೆಂಗ್ಬಾ ಮಾತನಾಡಿ, 'ಇಬ್ಬರು ವಿದ್ಯಾರ್ಥಿಗಳ ಹಂತಕರನ್ನು 24 ಗಂಟೆಗಳ ಒಳಗೆ ಬಂಧಿಸಬೇಕು. ವಿದ್ಯಾರ್ಥಿಗಳ ಮೃತದೇಹಗಳನ್ನು ಪಡೆಯಬೇಕು. ಗೌರವಯುತವಾಗಿ ಅಂತ್ಯಕ್ರಿಯೆ ಮಾಡಬೇಕು ಎಂಬುದಾಗಿ ನಾವು ಒತ್ತಾಯಿಸುತ್ತೇವೆ' ಎಂದು ಹೇಳಿದ್ದಾರೆ.
ನಮ್ಮ ಸಮಸ್ಯೆಗಳ ಪರಿಹಾರಕ್ಕೆ ನಾವು ಮುಖ್ಯಮಂತ್ರಿಯನ್ನು ಭೇಟಿ ಮಾಡಲು ಬಯಸುತ್ತೇವೆ. ನಮ್ಮ ಸ್ನೇಹಿತರು ಮತ್ತು ಸಹಪಾಠಿಗಳು ಕೊಲೆಯಾದಾಗ ನಾವು ನಮ್ಮ ಅಧ್ಯಯನವನ್ನು ಮುಂದುವರಿಸಬಹುದೇ ಎಂದು ಪ್ರಶ್ನಿಸಿದ್ದಾರೆ.
'ವಿದ್ಯಾರ್ಥಿ ಮುಖಂಡರು ಮುಖ್ಯಮಂತ್ರಿ ಹಾಗೂ ರಾಜ್ಯಪಾಲರನ್ನು ಭೇಟಿ ಮಾಡಲು ವ್ಯವಸ್ಥೆ ಮಾಡಲಾಗುತ್ತಿದೆ' ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರತಿಭಟನೆ ವೇಳೆ, ಪರಿಸ್ಥಿತಿ ಇದ್ದಕ್ಕಿದ್ದಂತೆ ವಿಕೋಪಕ್ಕೆ ತಿರುಗಿತು. ಕೆಲವು ವಿದ್ಯಾರ್ಥಿಗಳು ಕಲ್ಲು ತೂರಾಟವನ್ನು ಪ್ರಾರಂಭಿಸಿದರು. ಭದ್ರತಾ ಪಡೆಗಳು ಅವರನ್ನು ಚದುರಿಸಲು ಹಲವಾರು ಸುತ್ತಿನ ಅಶ್ರುವಾಯು ಶೆಲ್ಗಳು ಸಿಡಿಸಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಘಟನೆಯಲ್ಲಿ ಸುಮಾರು 45 ವಿದ್ಯಾರ್ಥಿಗಳು ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.
ಮಣಿಪುರದಲ್ಲಿ ಮೈತೇಯಿ ಹಾಗೂ ಕೂಕಿ ಸಮುದಾಯದ ನಡುವೆ ಮೇ ತಿಂಗಳಿಂದ ಜನಾಂಗೀಯ ಘರ್ಷಣೆ ನಡೆಯುತ್ತಿದೆ. ಈ ಸಂಘರ್ಷದಲ್ಲಿ 180 ಕ್ಕೂ ಅಧಿಕ ಜನರು ಪ್ರಾಣ ಕಳೆದುಕೊಂಡಿದ್ದಾರೆ. 50,000 ಕ್ಕೂ ಅಧಿಕ ಮಂದಿ ಮನೆ ತೊರೆದು ಹೋಗಿದ್ದಾರೆ. ಹಿಂಸಾಚಾರಕ್ಕೆ ಬಿಜೆಪಿಯೇ ಕಾರಣವೆಂದು ವಿರೋಧ ಪಕ್ಷಗಳು ಆರೋಪಿಸಿವೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications