ಮಣಿಪುರ ಹಿಂಸಾಚಾರ: ಪರಿಸ್ಥಿತಿ ಉದ್ವಿಗ್ನವಾಗಿದೆ, ಆದರೆ ನಿಯಂತ್ರಣದಲ್ಲಿದೆ ಎಂದ ಪೊಲೀಸರು
ಇಂಫಾಲ, ಜೂನ್. 25: ಮಣಿಪುರ ರಾಜ್ಯದಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದೆ. ಕೆಲವು ಜಿಲ್ಲೆಗಳಲ್ಲಿ ಕೆಲವು ಅಪರೂಪದ ಘಟನೆಗಳೊಂದಿಗೆ ನಿಯಂತ್ರಣದಲ್ಲಿದೆ. ಆದರೆ, ಹೆಚ್ಚಿನ ಜಿಲ್ಲೆಗಳಲ್ಲಿ ಸಾಮಾನ್ಯವಾಗಿದೆ ಎಂದು ಪೊಲೀಸರು ತಿಳಿಸಿದ್ದು, ಕಳೆದ 24 ಗಂಟೆಗಳಲ್ಲಿ ಇಂಫಾಲ್ ಪೂರ್ವ ಜಿಲ್ಲೆಯಿಂದ ಐದು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದಿದ್ದಾರೆ.
ಇಲ್ಲಿಯವರೆಗೆ ಪೊಲೀಸರು ಒಟ್ಟು 1100 ಶಸ್ತ್ರಾಸ್ತ್ರಗಳು, 13,702 ಮದ್ದುಗುಂಡುಗಳು ಮತ್ತು ವಿವಿಧ ರೀತಿಯ 250 ಬಾಂಬ್ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಣಿಪುರ ಪೊಲೀಸ್ ಇಲಾಖೆಯ ಪತ್ರಿಕಾ ಟಿಪ್ಪಣಿ ತಿಳಿಸಿದೆ.

ಜಿಲ್ಲಾ ಭದ್ರತಾ ಸಮನ್ವಯ ಸಮಿತಿ ಸಭೆಯು ನಿಯಮಿತವಾಗಿ ಜಿಲ್ಲೆಗಳಲ್ಲಿ ನಡೆಯುತ್ತದೆ. ಪೆಟ್ರೋಲಿಂಗ್, ಧ್ವಜ ಮೆರವಣಿಗೆಗಳು ಮತ್ತು ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಗಳನ್ನು ದುರ್ಬಲ ಪ್ರದೇಶಗಳಲ್ಲಿ ನಡೆಸಲಾಗುತ್ತದೆ. ಬೆಟ್ಟ ಮತ್ತು ಕಣಿವೆಯ ಎರಡೂ ಜಿಲ್ಲೆಗಳ ಅಂಚಿನ ಪ್ರದೇಶಗಳಿಗೆ ವಿಶೇಷ ಒತ್ತು ನೀಡಲಾಗುತ್ತದೆ ಎಂದು ಪೊಲೀಸರು ಹೇಳಿದ್ದಾರೆ.
ಶುಕ್ರವಾರ ರಾತ್ರಿ 8.35 ರ ಸುಮಾರಿಗೆ, ಮಣಿಪುರದ ಇಂಫಾಲ್ ಪೂರ್ವ ಜಿಲ್ಲೆಯ ಹೀಂಗಾಂಗ್ ಪೊಲೀಸ್ ಠಾಣೆ ವ್ಯಾಪ್ತಿಯ ಕಂಗ್ಲಾ ಸಂಗೋಲ್ಮ್ಸಾಂಗ್ನಲ್ಲಿ ಒಂದು ಗೋದಾಮಿಗೆ ಜನಸಮೂಹ ಬೆಂಕಿಯಿಟ್ಟಿತು. ಇಂಫಾಲ್ ಪೂರ್ವ ಜಿಲ್ಲಾ ಪೊಲೀಸರು ಗುಂಪನ್ನು ಚದುರಿಸಿದರು ಮತ್ತು ಅಗ್ನಿಶಾಮಕ ದಳ ಬೆಂಕಿಯನ್ನು ನಿಯಂತ್ರಿಸಿದ್ದಾರೆ.
"ಇಂಫಾಲ್ ಪೂರ್ವ ಜಿಲ್ಲೆಯ ಇತರ ಎರಡು ಸ್ಥಳಗಳಲ್ಲಿ ಬೆಂಕಿ ಹಚ್ಚಿರುವ ಘಟನೆಗಳು ನಡೆದಿವೆ. ಆದರೂ, ರಾಜ್ಯ ಪೊಲೀಸರು ಮತ್ತು ಕೇಂದ್ರ ಪಡೆಗಳು ಪರಿಸ್ಥಿತಿಯನ್ನು ನಿಯಂತ್ರಿಸಿದ್ದು, ಹೆಚ್ಚಿನ ಸಂಖ್ಯೆಯ ಅಶ್ರುವಾಯು ಬಳಸಿಕೊಂಡು ಗುಂಪನ್ನು ಚದುರಿಸಿದ್ದಾರೆ" ಎಂದು ಪೊಲೀಸರು ತಿಳಿಸಿದ್ದಾರೆ.
ಕಾಂಗ್ಪೊಕ್ಪಿ ಜಿಲ್ಲೆಯ ನಾಲ್ಕು ಸ್ಥಳಗಳಲ್ಲಿ ಕಾಂಗ್ಪೊಕ್ಪಿ ಜಿಲ್ಲಾ ಪೊಲೀಸ್ ಮತ್ತು ಕೇಂದ್ರ ಪಡೆಗಳ ಜಂಟಿ ತಂಡವು ಶೋಧ ಕಾರ್ಯಾಚರಣೆಯನ್ನು ನಡೆಸಿತು ಮತ್ತು ನಾಲ್ಕು ಬಂಕರ್ಗಳನ್ನು ಧ್ವಂಸಗೊಳಿಸಲಾಗಿದೆ ಎಂದು ತಿಳಿಸಿದ್ದು, ಇನ್ನೂ ಆರು ಬಂಕರ್ಗಳನ್ನು ಭದ್ರತಾ ಪಡೆಗಳು ಆಕ್ರಮಿಸಿಕೊಂಡಿವೆ ಎಂದು ಮಣಿಪುರ ಪೊಲೀಸರು ಹೇಳಿದ್ದಾರೆ.
ಶನಿವಾರದಂದು, ಇಂಫಾಲ್ ಪಶ್ಚಿಮ ಜಿಲ್ಲೆಯ ಪೊಲೀಸ್ ಮತ್ತು ಕೇಂದ್ರೀಯ ಪಡೆಗಳ ಸಂಯೋಜಿತ ತಂಡವು ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ನೊಂದಿಗೆ ಇಂಫಾಲ್ ಪಶ್ಚಿಮ ಜಿಲ್ಲೆಯ ಎರಡು ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದೆ. ರಾಷ್ಟ್ರೀಯ ಹೆದ್ದಾರಿ 37 ರ ಉದ್ದಕ್ಕೂ ಅಗತ್ಯ ವಸ್ತುಗಳ ಸರಬರಾಜನ್ನು ಕಟ್ಟುನಿಟ್ಟಾದ ಭದ್ರತಾ ಕ್ರಮಗಳೊಂದಿಗೆ ಖಚಿತಪಡಿಸಿಕೊಳ್ಳಲಾಗಿದೆ ಎಂದು ಮತ್ತಷ್ಟು ಮಾಹಿತಿ ನೀಡಿದ್ದಾರೆ.
ಅದೇ ಸಮಯದಲ್ಲಿ ರಾಜ್ಯದಲ್ಲಿ ಅಶಾಂತಿ ಆರಂಭವಾದಾಗಿನಿಂದ ವಿಧಿಸಲಾಗಿದ್ದ ಕರ್ಫ್ಯೂ ಅನ್ನು ಜಿರಿಬಾಮ್ ಮತ್ತು ಫೆರ್ಜಾಲ್ ಜಿಲ್ಲೆಗಳ ಜೊತೆಗೆ ಐದು ಕಣಿವೆ ಜಿಲ್ಲೆಗಳಲ್ಲಿ 12 ರಿಂದ 15 ಗಂಟೆಗಳವರೆಗೆ, ಉಳಿದ ಆರು ಗುಡ್ಡಗಾಡಿನ ಚುರಾಚಂದ್ಪುರ ತೆಂಗ್ನೌಪಾಲ್ ಮತ್ತು ಕಾಂಗ್ಪೋಕ್ಪಿ ಜಿಲ್ಲೆಗಳಲ್ಲಿ 8 ರಿಂದ 10 ಗಂಟೆಗಳ ಕಾಲ ಕರ್ಫ್ಯೂ ಇಲ್ಲದಿದ್ದರೂ ಸಡಿಲಿಸಲಾಗಿದೆ.
ಹಿಂಸಾಚಾರ ಪೀಡಿತ ರಾಜ್ಯದಲ್ಲಿ ಸಹಜ ಸ್ಥಿತಿಗೆ ತರಲು ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುವಂತೆ ಸಾರ್ವಜನಿಕರಿಗೆ ಮನವಿ ಮಾಡಿದ ಕಾನೂನು ಜಾರಿ ಇಲಾಖೆಯು ಯಾವುದೇ ವದಂತಿಯನ್ನು ಸ್ಪಷ್ಟಪಡಿಸಲು ಕೇಂದ್ರ ನಿಯಂತ್ರಣ ಕೊಠಡಿಯ ವದಂತಿ ಮುಕ್ತ ಸಂಖ್ಯೆ 9233522822 ಅನ್ನು ಡಯಲ್ ಮಾಡಲು ಹೇಳಿದೆ. ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಸ್ಫೋಟಕಗಳನ್ನು ಹಿಂದಿರುಗಿಸಲು ಮತ್ತು ತಕ್ಷಣ ಪೊಲೀಸ್ ಅಥವಾ ಭದ್ರತಾ ಪಡೆಗಳಿಗೆ ಜಮಾ ಮಾಡಲು ತಿಳಿಸಿದೆ.












Click it and Unblock the Notifications