'ಮೋದಿಯನ್ನು ಟೀಕಿಸಿದರೆ ರಾಷ್ಟ್ರವನ್ನೇ ಟೀಕಿಸಿದಂತೆ' ಜೆಪಿ ನಡ್ಡಾ
ಮಣಿಪುರ, ಡಿಸೆಂಬರ್ 30: ಈ ರಾಜಕೀಯ ಪಕ್ಷಗಳು ಪ್ರಧಾನಿ ಮೋದಿಯನ್ನು ಟೀಕಿಸುವಾಗ ಅವರು ರಾಷ್ಟ್ರವನ್ನು ಟೀಕಿಸುತ್ತಿದ್ದಾರೆ ಎಂಬುದನ್ನು ಮರೆತುಬಿಡುತ್ತಾರೆ ಎಂದು ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹೇಳಿದರು.
2022ರ ವಿಧಾನಸಭಾ ಚುನಾವಣೆಗೆ ಐದು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ತಯಾರಿ ನಡೆಸುತ್ತಿದೆ. ಇಂದು ಮಣಿಪುರದ ಕಕ್ಚಿಂಗ್ ಪಟ್ಟಣದ ಯುವ ರ್ಯಾಲಿಯಲ್ಲಿನ್ನುದ್ದೇಶಿಸಿ ಮಾತನಾಡಿದ ಜೆ.ಪಿ. ನಡ್ಡಾ ರಾಜಕೀಯ ಪಕ್ಷಗಳ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ಇನ್ನಿತರ ಪಕ್ಷಗಳು ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸುವ ಉದ್ದೇಶವನ್ನು ಹೊಂದಿರುತ್ತಾರೆ. ಆದರೆ ಅವರನ್ನು ಟೀಕಿಸುವಾಗ ಅವರು ರಾಷ್ಟ್ರವನ್ನು ಟೀಕಿಸುತ್ತಿದ್ದಾರೆ ಎಂಬುದನ್ನು ಮರೆತುಬಿಡುತ್ತಾರೆ ಎಂದು ಹೇಳಿದ್ದಾರೆ. ವಿಪಕ್ಷಗಳು ಭ್ರಷ್ಟಾಚಾರ ಮತ್ತು ಆಯೋಗದ ಬಗ್ಗೆ ಮಾತ್ರ ಯೋಚಿಸುತ್ತಾರೆ. ಭಾರತವನ್ನು ಮುಂದೆ ಕೊಂಡೊಯ್ಯಲು ನಾವು ಪ್ರಯತ್ನಿಸುತ್ತಿದ್ದೇವೆ ಎಂದು ಹೇಳಿದರು.
ಮಣಿಪುರದಲ್ಲಿ ಕಮಲ (ಬಿಜೆಪಿಯ ಚಿಹ್ನೆ) ಅರಳಿದರೆ ಮಾತ್ರ ರಾಜ್ಯ ಪ್ರಗತಿಯಾಗುತ್ತದೆ ಎಂದು ಅವರು ಮಣಿಪುರದ ಜನರಿಗೆ ವಿವರಿಸಿದರು. "ನಿಮಗೆ ಬಂಡಾಯ, ಡ್ರಗ್ಸ್, ಅಶಾಂತಿ, ಆಳ್ವಿಕೆ, ಎನ್ಕೌಂಟರ್ ಬೇಕೇ ಅಥವಾ ಸಮೃದ್ಧಿ, ಶಾಂತಿ, ಔಷಧಗಳು ಅಥವಾ ಕ್ರೀಡೆಗಳು ಬೇಕೋ ಎಂಬುದನ್ನು ನೀವು ಆರಿಸಿಕೊಳ್ಳಬೇಕು. ಇಲ್ಲಿನ ಯುವಕರು ಡ್ರಗ್ಸ್ಗಿಂತ ಕ್ರೀಡೆಯನ್ನು ಮತ್ತು ಎನ್ಕೌಂಟರ್ಗಳಿಗಿಂತ ಶಾಂತಿಯನ್ನು ಆರಿಸಿಕೊಳ್ಳುತ್ತಾರೆ ಎಂದು ನಾನು ನಂಬುತ್ತೇನೆ" ಎಂದು ಬಿಜೆಪಿ ಮುಖ್ಯಸ್ಥರು ಹೇಳಿದರು.

ಅವರು ಕ್ರೀಡೆಯಲ್ಲಿ ಮಣಿಪುರದ ಕೊಡುಗೆಯನ್ನು ಶ್ಲಾಘಿಸಿದರು. "ಮಣಿಪುರವು ಕ್ರೀಡೆಗೆ ಅಸಮಾನ್ಯವಾಗಿದೆ ಮತ್ತು ಅನೇಕ ಮಹಿಳಾ ಆಟಗಾರರು ಮಣಿಪುರದಿಂದ ಬರುತ್ತಾರೆ" ಎಂದು ನಾಯಕ ಹೇಳಿದರು. ಖೇಲೋ ಇಂಡಿಯಾ ಅಭಿಯಾನದ ಅಡಿಯಲ್ಲಿ ಮಣಿಪುರದ ಗರಿಷ್ಠ ಸಂಖ್ಯೆಯ ಯುವಕರು ಕ್ರೀಡೆಯೊಂದಿಗೆ ತಮ್ಮನ್ನು ತಾವು ತೊಡಗಿಸಿಕೊಳ್ಳಲು ಕರೆ ನೀಡಿದರು. ಇಂದು ರಾಜ್ಯಕ್ಕೆ ಆಗಮಿಸಿದ ನಡ್ಡಾ ಅವರನ್ನು ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಬರಮಾಡಿಕೊಂಡರು. 2017ರಲ್ಲಿ ಮೊದಲ ಬಾರಿಗೆ ಮಣಿಪುರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿತ್ತು.
2017 ರ ಅಸೆಂಬ್ಲಿ ಚುನಾವಣೆಯ ನಂತರ, ಬಿಜೆಪಿ, ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್ಪಿಪಿ), ನಾಗಾ ಪೀಪಲ್ಸ್ ಫ್ರಂಟ್ ಮತ್ತು ಲೋಕ ಜನಶಕ್ತಿ ಪಕ್ಷ (ಎಲ್ಜೆಪಿ) ಯ ಒಕ್ಕೂಟವು ಸರ್ಕಾರವನ್ನು ರಚಿಸಿತು. ಇದು ಪ್ರಸ್ತುತ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರ ನೇತೃತ್ವದಲ್ಲಿದೆ. ಮಣಿಪುರ ವಿಧಾನಸಭೆಯ ಅಧಿಕಾರಾವಧಿ ಮಾರ್ಚ್ 19, 2022 ರಂದು ಮುಕ್ತಾಯಗೊಳ್ಳಲಿದೆ. 60 ಸದಸ್ಯರನ್ನು ಒಳಗೊಂಡಿರುತ್ತದೆ. ಇತ್ತೀಚೆಗೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮಣಿಪುರದಲ್ಲಿ 'ರಾಣಿ ಗೈಡಿನ್ಲಿಯು ಬುಡಕಟ್ಟು ಸ್ವಾತಂತ್ರ್ಯ ಹೋರಾಟಗಾರರ ವಸ್ತು ಸಂಗ್ರಹಾಲಯ'ಕ್ಕೆ ಶಂಕುಸ್ಥಾಪನೆ ಮಾಡಿದರು.

ಉತ್ತರ ಪ್ರದೇಶ, ಪಂಜಾಬ್, ಗೋವಾ, ಉತ್ತರಾಖಂಡ ಹಾಗೂ ಮಣಿಪುರದಲ್ಲಿ 2022 ರಲ್ಲಿ ವಿಧಾನಸಭೆ ಚುನಾವಣೆಯು ನಡೆಯಲಿದೆ. ಕೇಂದ್ರದಲ್ಲಿ ತನ್ನ ಸರ್ಕಾರವನ್ನು ಎರಡನೇ ಬಾರಿಯೂ ಉಳಿಸಿಕೊಳ್ಳುವಲ್ಲಿ ಸಫಲವಾಗಿರುವ ಬಿಜೆಪಿಯು ಈ ಪಂಚ ರಾಜ್ಯಗಳ ಪೈಕಿ ನಾಲ್ಕು ರಾಜ್ಯದಲ್ಲಿ ಆಡಳಿತವನ್ನು ಹೊಂದಿದೆ.
ಇನ್ನೂ ಈ ಎಲ್ಲಾ ರಾಜ್ಯಗಳ ನಡುವೆ ಮಣಿಪುರವು ಬಿಜೆಪಿಗೆ ಮತ್ತೆ ಒಲಿಯಲಿದೆಯೇ ಎಂದು ಮುಂದಿನ ಚುನಾವಣೆಯಲ್ಲಿ ನಾವು ಕಾದು ನೋಡಬೇಕಿದೆ. ಮಣಿಪುರದಲ್ಲಿ ಒಟ್ಟು 60 ವಿಧಾನಸಭೆ ಕ್ಷೇತ್ರಗಳು ಇದೆ. ಕಳೆದ 2017 ರ ವಿಧಾನಸಭೆ ಚುನಾವಣೆಯಲ್ಲಿ ಈ 60 ವಿಧಾನಸಭೆ ಕ್ಷೇತ್ರಗಳ ಪೈಕಿ ಬಿಜೆಪಿಯು 21 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಬಳಿಕ ಸ್ಥಳೀಯ ಪಕ್ಷ ನಾಗಾ ಪೀಪಲ್ಸ್ ಫ್ರಂಟ್ ಮತ್ತು ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್ಪಿಪಿ) ಜೊತೆ ಸೇರಿ ಸರ್ಕಾರವನ್ನು ರಚನೆ ಮಾಡಿದೆ. ಆದರೆ ಮುಂಬರುವ ಚುನಾವಣೆಯಲ್ಲಿ ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್ಪಿಪಿ) ಪ್ರತ್ಯೇಕವಾಗಿ ಸ್ಪರ್ಧೆಗೆ ಇಳಿಯಲಿದೆ ಎಂದು ವರದಿಯಾಗಿದೆ.
ಹಾಗೆಯೇ ಮಣಿಪುರದ ಹೆಚ್ಚಿನ ಕ್ಷೇತ್ರದಲ್ಲಿ ಎನ್ಪಿಪಿ ತನ್ನ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಿದೆ. ಪ್ರಸ್ತುತ ಎನ್ಪಿಪಿಯ ನಾಲ್ವರು ಶಾಸಕರುಗಳು ಇದ್ದಾರೆ. ಈ ಪೈಕಿ ಇಬ್ಬರು ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ಸಚಿವರು ಆಗಿದ್ದಾರೆ. ಬಿಜೆಪಿಯು ಈಗ ಮಣಿಪುರದಲ್ಲಿ ಒಬಿಸಿ ನಾಯಕ ಹಾಗೂ ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ರನ್ನು ಚುನಾವಣಾ ಉಸ್ತುವಾರಿ ಆಗಿ ನೇಮಕ ಮಾಡಿದೆ. ಇತ್ತೀಚೆಗೆ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಮುಂಬರುವ ವಿಧಾನಸಭಾ ಚುನಾವಣೆಯ ಕುರಿತು ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಮತ್ತು ಇತರ ಪಕ್ಷದ ನಾಯಕರೊಂದಿಗೆ ಸಮಾಲೋಚನೆ ನಡೆಸಿದರು. ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್, ಚುನಾವಣಾ ಉಸ್ತುವಾರಿ ಯಾದವ್ ಮತ್ತು ಪಕ್ಷದ ವಕ್ತಾರ ಸಂಬಿತ್ ಪಾತ್ರಾ ಕೂಡ ಸಭೆಯಲ್ಲಿ ಹಾಜರಿದ್ದರು. ಬಿಜೆಪಿ ನಾಯಕರು ರಾಜ್ಯದ ರಾಜಕೀಯ ಪರಿಸ್ಥಿತಿ ಕುರಿತು ಚರ್ಚಿಸಿದ್ದಾರೆ.












Click it and Unblock the Notifications