ಶಾಂತಿ ಸ್ಥಾಪಿಸಲು ಪ್ರಯತ್ನಿಸುತ್ತಿರುವ ಸೇನೆಗೆ ಮಹಿಳೆಯರ ಅಡ್ಡಿ: ವಿಡಿಯೋ ಬಿಡುಗಡೆ ಮಾಡಿದ ಸೇನೆ!
ಇಂಪಾಲ, ಜೂನ್. 27: ಮಣಿಪುರದ ಮಹಿಳಾ ಕಾರ್ಯಕರ್ತರು ಹಿಂಸಾಚಾರ ಪೀಡಿತ ರಾಜ್ಯದಲ್ಲಿ ತನ್ನ ಕಾರ್ಯಾಚರಣೆಯನ್ನು ನಿರ್ಬಂಧಿಸುತ್ತಿದ್ದಾರೆ ಮತ್ತು ಶಾಂತಿಯನ್ನು ಪುನಃಸ್ಥಾಪಿಸುವ ನಮ್ಮ ಪ್ರಯತ್ನಗಳಿಗೆ ಅಡ್ಡಿಪಡಿಸುತ್ತಿದ್ದಾರೆ ಎಂದು ಭಾರತೀಯ ಸೇನೆ ಹೇಳಿದೆ.
"ಮಣಿಪುರದ ಮಹಿಳಾ ಕಾರ್ಯಕರ್ತರು ಉದ್ದೇಶಪೂರ್ವಕವಾಗಿ ನಮ್ಮ ಮಾರ್ಗಗಳನ್ನು ನಿರ್ಬಂಧಿಸುತ್ತಿದ್ದಾರೆ ಮತ್ತು ಭದ್ರತಾ ಪಡೆಗಳ ಕಾರ್ಯಾಚರಣೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ. ಜೀವ ಮತ್ತು ಆಸ್ತಿಯನ್ನು ಉಳಿಸಲು ನಿರ್ಣಾಯಕ ಸಂದರ್ಭಗಳಲ್ಲಿ ಭದ್ರತಾ ಪಡೆಗಳ ಸಮಯೋಚಿತ ಪ್ರತಿಕ್ರಿಯೆಗೆ ಇಂತಹ ಅನಗತ್ಯ ಹಸ್ತಕ್ಷೇಪವು ಹಾನಿಕಾರಕವಾಗಿದೆ" ಎಂದು ಹೇಳಿದೆ.

" ರಾಜ್ಯದಲ್ಲಿ ಶಾಂತಿಯನ್ನು ಮರುಸ್ಥಾಪಿಸುವ ನಮ್ಮ ಪ್ರಯತ್ನಗಳನ್ನು ಬೆಂಬಲಿಸುವಂತೆ ಭಾರತೀಯ ಸೇನೆಯು ಎಲ್ಲಾ ವರ್ಗದ ಜನತೆಗೆ ಮನವಿ ಮಾಡುತ್ತದೆ. ಮಣಿಪುರಕ್ಕೆ ಸಹಾಯ ಮಾಡಲು ನೀವು ನಮಗೆ ಸಹಾಯ ಮಾಡಿ" ಎಂದು ಭಾರತೀಯ ಸೇನೆಯ ಸ್ಪಿಯರ್ ಕಾರ್ಪ್ಸ್ ಟ್ವೀಟ್ನಲ್ಲಿ ತಿಳಿಸಿದೆ.
ಮಣಿಪುರದ ಇಥಾಮ್ ಗ್ರಾಮದಲ್ಲಿ ಮಹಿಳೆಯರು ಮತ್ತು ಸ್ಥಳೀಯ ನಾಯಕರ ನೇತೃತ್ವದಲ್ಲಿ ಸುಮಾರು 1,500 ಜನರ ಗುಂಪು ಆ ಪ್ರದೇಶವನ್ನು ಸುತ್ತುವರೆದಿದ್ದರಿಂದ ಭದ್ರತಾ ಪಡೆಗಳು ಬಂಡುಕೋರ ಗುಂಪಿನ 12 ಕಾರ್ಯಕರ್ತರನ್ನು ಬಿಡುಗಡೆ ಮಾಡಬೇಕಾಯಿತು. ಇದಾದ ಕೆಲವು ಗಂಟೆಗಳ ನಂತರ ಸೇನೆಯ ಜನರಿಗೆ ಸಹಯಾ ಮಾಡುವಂತೆ ಮನವಿ ಮಾಡಿ ಟ್ವೀಟ್ ಮಾಡಿದೆ.
ಕಾರ್ಯಾಚರಣೆಯನ್ನು ಮುಂದುವರಿಸಲು ಪಡೆಗಳಿಗೆ ಅವಕಾಶ ನೀಡುವಂತೆ ಜನಸಮೂಹಕ್ಕೆ ಪದೇ ಪದೇ ಮನವಿ ಮಾಡಿದರೂ, ಅವರ ಪ್ರಯತ್ನಗಳು ವ್ಯರ್ಥವಾಯಿತು ಎಂದು ಸೇನೆ ಹೇಳಿಕೊಂಡಿದೆ. ದೊಡ್ಡ ಮತ್ತು ವಿಶೇಷವಾಗಿ ಮಹಿಳೆಯರ ನೇತೃತ್ವದಲ್ಲಿ ಬಂದ ಗುಂಪಿನ ವಿರುದ್ಧವಾಗಿ ಕಾರ್ಯಾಚರಣೆ ನಡೆಸುವುದು ಮತ್ತಿ ಅದರಿಂದ ಉಮಟಾಗುವ ಸಂಭವನೀಯ ಅಪಾಯಗಳು ಮತ್ತು ಸಾವುನೋವುಗಳನ್ನು ಪರಿಗಣಿಸಿ, ಎಲ್ಲಾ 12 ಬಂಧಿತ ಕಾರ್ಯಕರ್ತರನ್ನು ಸ್ಥಳೀಯ ನಾಯಕನಿಗೆ ಹಸ್ತಾಂತರಿಸಲು ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಸೇನೆಯು ಹೇಳಿಕೆಯಲ್ಲಿ ತಿಳಿಸಿದೆ.
ಟ್ವಿಟರ್ ಪೋಸ್ಟ್ ಸಾರ್ವಜನಿಕ ಮಾಹಿತಿಯ ಹೆಚ್ಚುವರಿ ನಿರ್ದೇಶನಾಲಯ, ಭಾರತೀಯ ಸೇನೆಯ ಪೂರ್ವ ಕಮಾಂಡ್ ಮತ್ತು ಅಸ್ಸಾಂ ರೈಫಲ್ಸ್ ಅನ್ನು ಟ್ಯಾಗ್ ಮಾಡಿದೆ. ಬಿಡುಗಡೆ ಮಾಡಿದವರಲ್ಲಿ 6 ನೇ ಡೋಗ್ರಾ ರೆಜಿಮೆಂಟ್ನ 18 ಸೈನಿಕರನ್ನು ಕೊಂದ 2015 ರ ಹೊಂಚುದಾಳಿಯ ಹಿಂದಿನ ಮಾಸ್ಟರ್ಮೈಂಡ್, ಸ್ವಯಂ-ಶೈಲಿಯ ಲೆಫ್ಟಿನೆಂಟ್ ಕರ್ನಲ್ ಮೊಯಿರಾಂಗ್ಥೆಮ್ ತಾಂಬಾ ಎಂದು ಸೇನೆಯು ಒಬ್ಬ ವ್ಯಕ್ತಿಯನ್ನು ಗುರುತಿಸಿದೆ.
Women activists in #Manipur are deliberately blocking routes and interfering in Operations of Security Forces. Such unwarranted interference is detrimental to the timely response by Security Forces during critical situations to save lives and property.
— SpearCorps.IndianArmy (@Spearcorps) June 26, 2023
🔴 Indian Army appeals to… pic.twitter.com/Md9nw6h7Fx
ಸೇನೆಯು 2 ನಿಮಿಷ 12 ಸೆಕೆಂಡುಗಳ ಅವಧಿಯ ವೀಡಿಯೋವನ್ನು ಬಿಡುಗಡೆ ಮಾಡಿದ್ದು, ಇದು ಹಲವಾರು ಕಾರ್ಯಾಚರಣೆಗಳ ದೃಶ್ಯಗಳನ್ನು ತೋರಿಸುತ್ತದೆ. ಮಹಿಳಾ ಕಾರ್ಯಕರ್ತರು ಬಂಡುಕೋರರನ್ನು ಪಲಾಯನ ಮಾಡಲು ಸಹಾಯ ಮಾಡುತ್ತಿದ್ದಾರೆ. ಹಗಲು ಅಥವಾ ರಾತ್ರಿಯಲ್ಲಿ ಕಾರ್ಯಾಚರಣೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ, ಸೇನೆಯ ಚಲನವಲನದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ನಾಲ್ಕು ಗಂಭೀರ ಆರೋಪಗಳನ್ನು ಮಾಡಿದೆ.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications