ಕೊರೊನಾ 2 DG ಔಷಧ ಉತ್ಪಾದನೆ ಮಾಡಲು ಮ್ಯಾನ್ಕೈಂಡ್ ಸಂಸ್ಥೆಗೆ ಪರವಾನಗಿ
ನವದೆಹಲಿ, ಜುಲೈ 08: ಕೊರೊನಾ ಸೋಂಕಿಗೆ ಡಿಆರ್ಡಿಒ ಅಭಿವೃದ್ಧಿಪಡಿಸಿರುವ 2-ಡಿಜಿ (2 ಡಿಯಾಕ್ಸಿ-ಡಿ-ಗ್ಲೂಕೋಸ್) ಔಷಧದ ತಯಾರಿ ಹಾಗೂ ಮಾರುಕಟ್ಟೆಗೆ ಮ್ಯಾನ್ಕೈಂಡ್ ಫಾರ್ಮಾ ಔಷಧ ತಯಾರಿಕಾ ಸಂಸ್ಥೆ ಪರವಾನಗಿ ಪಡೆದುಕೊಂಡಿದೆ.
ಪೌಡರ್ ರೂಪದಲ್ಲಿರುವ ಈ ಔಷಧಿಯನ್ನು ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ(ಡಿಆರ್ಡಿಒ) ಹಾಗೂ ಹೈದರಾಬಾದ್ನ ಡಾ. ರೆಡ್ಡೀಸ್ ಲ್ಯಾಬೊರೇಟರಿ ಅಭಿವೃದ್ಧಿಪಡಿಸಿದ್ದವು. ಇದರ ವೈದ್ಯಕೀಯ ಪ್ರಯೋಗವನ್ನು ಇನ್ಸ್ಟಿಟ್ಯೂಟ್ ಆಫ್ ನ್ಯೂಕ್ಲಿಯಾರ್ ಮೆಡಿಸಿನ್ ಹಾಗೂ ಅಲೈಡ್ ಸೈನ್ಸಸ್, ಡಿಆರ್ಡಿಒ ನಡೆಸಿತ್ತು ಎಂದು ಮ್ಯಾನ್ಕೈಂಡ್ ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ.
ವಿಶಾಖಪಟ್ಟಣಂ ಹಾಗೂ ಹಿಮಾಚಲ ಪ್ರದೇಶದ ತಮ್ಮ ಘಟಕಗಳಲ್ಲಿ ಔಷಧಿ ತಯಾರಿ ಮಾಡುವುದಾಗಿ ಮ್ಯಾನ್ಕೈಂಡ್ ಕಂಪನಿ ತಿಳಿಸಿದೆ.

ಆಸ್ಪತ್ರೆಗೆ ಸೇರಿರುವ ರೋಗಿಗಳಿಗೆ ಈ ಔಷಧಿ ಬೇಗ ಗುಣುಮುಖರಾಗಲು ಸಹಾಯ ಮಾಡುತ್ತದೆ ಎಂದು ತಿಳಿದುಬಂದಿತ್ತು.
ಡಿಆರ್ಡಿಒದ ಇನ್ಸ್ಟಿಟ್ಯೂಟ್ ಆಫ್ ನ್ಯೂಕ್ಲಿಯಾರ್ ಮೆಡಿಸಿನ್ ಅಂಡ್ ಅಲೈಡ್ ಸೈನ್ಸಸ್ನ ಈ ಔಷಧಿಯ ತುರ್ತು ಬಳಕೆಗೆ ಡಿಸಿಜಿಐ ಅನುಮೋದನೆ ನೀಡಿದೆ. 2.34 ಗ್ರಾಂ ಪುಡಿಯ ಸ್ಯಾಶೆಗೆ 990 ರೂ ದರ ನಿಗದಿ ಮಾಡಿ ಮಾರಾಟಕ್ಕೆ ಯೋಜಿಸಿತ್ತು.
ಕೋವಿಡ್ ಮೊದಲ ಅಲೆ ಹೆಚ್ಚಾದ ಸಮಯದಲ್ಲಿ ಪ್ರಧಾನಿ ಮೋದಿ ಸಲಹೆ ಮೇರೆಗೆ ಡಿಆರ್ಡಿಒದ ವಿಭಾಗವಾದ ದಿ ಇನ್ ಸ್ಟಿಟ್ಯೂಟ್ ಆಫ್ ನ್ಯೂಕ್ಲಿಯರ್ ಮೆಡಿಸನ್ ಆಂಡ್ ಅಲೈಡ್ ಸೈನ್ಸಸ್ ಸಂಸ್ಥೆ ಹೈದರಾಬಾದ್ ಮೂಲದ ಸೆಂಟರ್ ಫಾರ್ ಸೆಲ್ಯೂಲರ್ ಆಂಡ್ ಮಾಲಿಕ್ಯುಲರ್ ಬಯೋಲಜಿ ಸಹಯೋಗದಲ್ಲಿ ಈ ಔಷಧವನ್ನು ಮೊದಲ ಪ್ರಯೋಗಕ್ಕೆ ಬಳಸಿತ್ತು.
ಕೆಲವು ದಿನಗಳ ಹಿಂದಷ್ಟೆ, ಕೊರೊನಾ ಸೋಂಕಿಗೆ ಡಿಆರ್ಡಿಒ ಅಭಿವೃದ್ಧಿಪಡಿಸಿರುವ 2-DG ಔಷಧ ಉತ್ಪಾದನೆ ಪರವಾನಗಿಯನ್ನು ಏಕೆ ರೆಡ್ಡಿ ಲ್ಯಾಬೊರೇಟರಿಗೆ ಮಾತ್ರ ನೀಡಲಾಗಿದೆ? ಬೇರೆ ಸಂಸ್ಥೆಗಳಿಗೆ ಪರವಾನಗಿ ನೀಡಿಲ್ಲವೇಕೆ ಎಂದು ಮದ್ರಾಸ್ ಹೈಕೋರ್ಟ್ ಕೇಂದ್ರವನ್ನು ಪ್ರಶ್ನಿಸಿತ್ತು. ಇದೀಗ ಮತ್ತೊಂದು ಸಂಸ್ಥೆಗೆ ಪರವಾನಗಿ ನೀಡಲಾಗಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications