'ಬ್ಯಾಂಕಿಗೆ ಹಣ ಹಾಕಬಹುದು, ಆದ್ರೆ ವಾಪಸ್ ತಗಳಂಗಿಲ್ಲ' - ತಕ್ಕಳಪ್ಪ!
"ಅಪನಗದೀಕರಣದಿಂದ ದೀರ್ಘಕಾಲೀನ ಲಾಭವಿದೆ ಎಂದು ಅಂದುಕೊಳ್ಳುವವರು ಈ ಹೇಳಿಕೆಯನ್ನು ಗಮನಿಸಬೇಕು. ಅದೇನೆಂದರೆ, ಆ ಸುದೀರ್ಘ ಪಯಣದಲ್ಲಿ ನಾವು ಸತ್ತೇ ಹೋಗಿರುತ್ತೇವೆ." - ಡಾ. ಮನಮೋಹನ ಸಿಂಗ್.
ನವದೆಹಲಿ, ನವೆಂಬರ್ 24 : ಅಪನಗದೀಕರಣದ ಬಗ್ಗೆ ಮಾತನಾಡಲು ಕಡೆಗೂ ಅವಕಾಶ ಪಡೆದ ಮಾಜಿ ಪ್ರಧಾನಿ, ಖ್ಯಾತ ಅರ್ಥಜ್ಞಾಸ್ತ್ರಜ್ಞ ಡಾ. ಮನಮೋಹನ ಸಿಂಗ್ ಅವರು, ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ನೋಟು ನಿಷೇಧ ಯಜ್ಞದ ಬಗ್ಗೆ ಅಸಮಾಧಾನವನ್ನು ಹೊರಹಾಕಿದ್ದಾರೆ.
"ಅಪನಗದೀಕರಣದಿಂದ ದೀರ್ಘಕಾಲೀನ ಲಾಭವಿದೆ ಎಂದು ಅಂದುಕೊಳ್ಳುವವರು ಈ ಹೇಳಿಕೆಯನ್ನು ಗಮನಿಸಬೇಕು. ಅದೇನೆಂದರೆ, ಆ ಸುದೀರ್ಘ ಪಯಣದಲ್ಲಿ ನಾವು ಸತ್ತೇ ಹೋಗಿರುತ್ತೇವೆ" ಎಂದು ಮನಮೋಹನ ಸಿಂಗ್ ಅವರು ಮಾರ್ಮಿಕವಾಗಿ ನುಡಿದು, ನರೇಂದ್ರ ಮೋದಿಯವರನ್ನು ಕುಟುಕಿದ್ದಾರೆ.
ತಮ್ಮ ಮಾತಿನ ವರಸೆಯನ್ನು ಮುಂದುವರಿಸಿದ ಅವರು, ನಾನು ಪ್ರಧಾನಿಯನ್ನು ಕೇಳಬಯುತ್ತೇನೆ. ಬ್ಯಾಂಕಿಗೆ ನಮ್ಮ ಹಣವನ್ನು ಹಾಕಿ ಹಿಂತೆಗೆಯಲು ಸಾಧ್ಯವಾಗದಂತಹ ಒಂದೇ ಒಂದು ರಾಷ್ಟ್ರದ ಹೆಸರನ್ನು ಹೇಳಿ ನೋಡೋಣ ಎಂದು ಮಾಜಿ ಪ್ರಧಾನಿ ಮೋದಿಯವರನ್ನು ಪ್ರಶ್ನಿಸಿದರು. [ಕಪ್ಪು ಹಣದ ಕರಾಳ ಜಾಲ, ಸರಕಾರಕ್ಕಿರುವ ಸವಾಲು]

ಇನ್ನೂ 50 ದಿನ ಕಾಯಿರಿ, ಎಲ್ಲ ಸರಿಹೋಗುತ್ತದೆ ಎಂದು ಜನತೆಯನ್ನು ಪ್ರಧಾನಿಯವರು ಕೇಳಿಕೊಂಡಿದ್ದಾರೆ. ಆದರೆ, ಅದೇ 50 ದಿನಗಳು ಭಾರತದ ಬಡಜನತೆಯ ಪಾಲಿಗೆ ಕಷ್ಟಕರವಾಗಿರುತ್ತವೆ ಎಂದು ಅವರು ರಾಜ್ಯಸಭೆಯಲ್ಲಿ ಗುರುವಾರ ನುಡಿದರು.
ನೋಟು ನಿಷೇಧವನ್ನು ಜಾರಿಗೊಳಿಸುವಾಗ ಭಾರೀ ತಿದ್ದುಪಡಿ ಮಾಡಲಾಗದ ತಪ್ಪುಗಳು ನಡೆದುಹೋಗಿವೆ. ಕಷ್ಟ ಅನುಭವಿಸುತ್ತಿರುವ ಜನರಿಗೆ ಪರಿಹಾರ ನೀಡಲು ನರೇಂದ್ರ ಮೋದಿ ಅವರು ಪ್ರಾಯೋಗಿಕ ವಿಧಾನಗಳನ್ನು ಕಂಡುಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು. [ಧೈರ್ಯವಿದ್ರೆ ಲೋಕಸಭೆ ವಿಸರ್ಜಿಸಿ, ನರೇಂದ್ರ ಮೋದಿಗೆ ಮಾಯಾವತಿ ಚಾಲೆಂಜ್]
ಹಳ್ಳಿಗಳಲ್ಲಿ ಜನರು ಅನುಭವಿಸುತ್ತಿರುವ ತೊಂದರೆಯ ಬಗ್ಗೆ ಗಮನ ಸೆಳೆದ ಅವರು, ಗ್ರಾಮಗಳಲ್ಲಿ ಹಲವಾರು ಸಹಕಾರಿ ಬ್ಯಾಂಕುಗಳು ಜನರ ಸೇವೆ ಸಲ್ಲಿಸುತ್ತಿವೆ. ಆದರೆ, ಅವೇ ಈಗ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಅವರು ವಿಷಾದ ವ್ಯಕ್ತಪಡಿಸಿದರು.
ಈಗಾಗಲೆ 60-65 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಈಗ ನಡೆಯುತ್ತಿರುವುದರಿಂದ ರುಪಾಯಿ ಮತ್ತು ಬ್ಯಾಂಕುಗಳ ಮೇಲೆ ಜನರ ವಿಶ್ವಾಸ ಕುಂದಬಹುದು, ಈ ನಡೆಗಳು ಜನರನ್ನು ಮತ್ತಷ್ಟು ಬಲಹೀನ ಮಾಡಬಹುದು ಎಂದು ಅವರು ನುಡಿದರು.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ












Click it and Unblock the Notifications