'ಬ್ಯಾಂಕಿಗೆ ಹಣ ಹಾಕಬಹುದು, ಆದ್ರೆ ವಾಪಸ್ ತಗಳಂಗಿಲ್ಲ' - ತಕ್ಕಳಪ್ಪ!
"ಅಪನಗದೀಕರಣದಿಂದ ದೀರ್ಘಕಾಲೀನ ಲಾಭವಿದೆ ಎಂದು ಅಂದುಕೊಳ್ಳುವವರು ಈ ಹೇಳಿಕೆಯನ್ನು ಗಮನಿಸಬೇಕು. ಅದೇನೆಂದರೆ, ಆ ಸುದೀರ್ಘ ಪಯಣದಲ್ಲಿ ನಾವು ಸತ್ತೇ ಹೋಗಿರುತ್ತೇವೆ." - ಡಾ. ಮನಮೋಹನ ಸಿಂಗ್.
ನವದೆಹಲಿ, ನವೆಂಬರ್ 24 : ಅಪನಗದೀಕರಣದ ಬಗ್ಗೆ ಮಾತನಾಡಲು ಕಡೆಗೂ ಅವಕಾಶ ಪಡೆದ ಮಾಜಿ ಪ್ರಧಾನಿ, ಖ್ಯಾತ ಅರ್ಥಜ್ಞಾಸ್ತ್ರಜ್ಞ ಡಾ. ಮನಮೋಹನ ಸಿಂಗ್ ಅವರು, ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ನೋಟು ನಿಷೇಧ ಯಜ್ಞದ ಬಗ್ಗೆ ಅಸಮಾಧಾನವನ್ನು ಹೊರಹಾಕಿದ್ದಾರೆ.
"ಅಪನಗದೀಕರಣದಿಂದ ದೀರ್ಘಕಾಲೀನ ಲಾಭವಿದೆ ಎಂದು ಅಂದುಕೊಳ್ಳುವವರು ಈ ಹೇಳಿಕೆಯನ್ನು ಗಮನಿಸಬೇಕು. ಅದೇನೆಂದರೆ, ಆ ಸುದೀರ್ಘ ಪಯಣದಲ್ಲಿ ನಾವು ಸತ್ತೇ ಹೋಗಿರುತ್ತೇವೆ" ಎಂದು ಮನಮೋಹನ ಸಿಂಗ್ ಅವರು ಮಾರ್ಮಿಕವಾಗಿ ನುಡಿದು, ನರೇಂದ್ರ ಮೋದಿಯವರನ್ನು ಕುಟುಕಿದ್ದಾರೆ.
ತಮ್ಮ ಮಾತಿನ ವರಸೆಯನ್ನು ಮುಂದುವರಿಸಿದ ಅವರು, ನಾನು ಪ್ರಧಾನಿಯನ್ನು ಕೇಳಬಯುತ್ತೇನೆ. ಬ್ಯಾಂಕಿಗೆ ನಮ್ಮ ಹಣವನ್ನು ಹಾಕಿ ಹಿಂತೆಗೆಯಲು ಸಾಧ್ಯವಾಗದಂತಹ ಒಂದೇ ಒಂದು ರಾಷ್ಟ್ರದ ಹೆಸರನ್ನು ಹೇಳಿ ನೋಡೋಣ ಎಂದು ಮಾಜಿ ಪ್ರಧಾನಿ ಮೋದಿಯವರನ್ನು ಪ್ರಶ್ನಿಸಿದರು. [ಕಪ್ಪು ಹಣದ ಕರಾಳ ಜಾಲ, ಸರಕಾರಕ್ಕಿರುವ ಸವಾಲು]

ಇನ್ನೂ 50 ದಿನ ಕಾಯಿರಿ, ಎಲ್ಲ ಸರಿಹೋಗುತ್ತದೆ ಎಂದು ಜನತೆಯನ್ನು ಪ್ರಧಾನಿಯವರು ಕೇಳಿಕೊಂಡಿದ್ದಾರೆ. ಆದರೆ, ಅದೇ 50 ದಿನಗಳು ಭಾರತದ ಬಡಜನತೆಯ ಪಾಲಿಗೆ ಕಷ್ಟಕರವಾಗಿರುತ್ತವೆ ಎಂದು ಅವರು ರಾಜ್ಯಸಭೆಯಲ್ಲಿ ಗುರುವಾರ ನುಡಿದರು.
ನೋಟು ನಿಷೇಧವನ್ನು ಜಾರಿಗೊಳಿಸುವಾಗ ಭಾರೀ ತಿದ್ದುಪಡಿ ಮಾಡಲಾಗದ ತಪ್ಪುಗಳು ನಡೆದುಹೋಗಿವೆ. ಕಷ್ಟ ಅನುಭವಿಸುತ್ತಿರುವ ಜನರಿಗೆ ಪರಿಹಾರ ನೀಡಲು ನರೇಂದ್ರ ಮೋದಿ ಅವರು ಪ್ರಾಯೋಗಿಕ ವಿಧಾನಗಳನ್ನು ಕಂಡುಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು. [ಧೈರ್ಯವಿದ್ರೆ ಲೋಕಸಭೆ ವಿಸರ್ಜಿಸಿ, ನರೇಂದ್ರ ಮೋದಿಗೆ ಮಾಯಾವತಿ ಚಾಲೆಂಜ್]
ಹಳ್ಳಿಗಳಲ್ಲಿ ಜನರು ಅನುಭವಿಸುತ್ತಿರುವ ತೊಂದರೆಯ ಬಗ್ಗೆ ಗಮನ ಸೆಳೆದ ಅವರು, ಗ್ರಾಮಗಳಲ್ಲಿ ಹಲವಾರು ಸಹಕಾರಿ ಬ್ಯಾಂಕುಗಳು ಜನರ ಸೇವೆ ಸಲ್ಲಿಸುತ್ತಿವೆ. ಆದರೆ, ಅವೇ ಈಗ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಅವರು ವಿಷಾದ ವ್ಯಕ್ತಪಡಿಸಿದರು.
ಈಗಾಗಲೆ 60-65 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಈಗ ನಡೆಯುತ್ತಿರುವುದರಿಂದ ರುಪಾಯಿ ಮತ್ತು ಬ್ಯಾಂಕುಗಳ ಮೇಲೆ ಜನರ ವಿಶ್ವಾಸ ಕುಂದಬಹುದು, ಈ ನಡೆಗಳು ಜನರನ್ನು ಮತ್ತಷ್ಟು ಬಲಹೀನ ಮಾಡಬಹುದು ಎಂದು ಅವರು ನುಡಿದರು.
-
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ












Click it and Unblock the Notifications