Manmohan Singh: ಶನಿವಾರ ಡಾ. ಮನಮೋಹನ್ ಸಿಂಗ್ ಅಂತ್ಯಕ್ರಿಯೆ
ಗುರುವಾರ ರಾತ್ರಿ ನಿಧನರಾದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ನಾಳೆ (ಶನಿವಾರ) ನಡೆಸಲು ತೀರ್ಮಾನಿಸಲಾಗಿದೆ. ಶನಿವಾರ ಬೆಳಿಗ್ಗೆ 11.45 ಗಂಟೆಗೆ ಸರ್ಕಾರಿ ಗೌರವಗಳೊಂದಿಗೆ ನಿಗಮಬೋಧ್ ಘಾಟ್ನಲ್ಲಿ ನೆರವೇರಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಗೃಹಸಚಿವಾಲಯ ನಿರ್ಧರಿಸಿದೆ.
ಶುಕ್ರವಾರ ಅವರ ಪಾರ್ಥೀವ ಶರೀರವನ್ನು ದರ್ಶನಕ್ಕೆ ಇಡಲಾಗಿತ್ತು. ಹಲವು ಗಣ್ಯರು ಆಗಮಿಸಿ ಅಂತಿಮ ದರ್ಶನ ಪಡೆದರು. "ಡಾ. ಮನಮೋಹನ್ ಸಿಂಗ್ ಅವರ ಪಾರ್ಥಿವ ಶರೀರಕ್ಕೆ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ್ ನಡೆಸಲು ನಿರ್ಧರಿಸಳಾಗಿದೆ. ಶನಿವಾರ ಬೆಳಿಗ್ಗೆ 11.45ಕ್ಕೆ ನವದೆಹಲಿಯ ನಿಗಮಬೋಧ್ ಘಾಟ್ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ" ಎಂದು ಗೃಹ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ಸೇನಾ ಗೌರವಗಳ ಜೊತೆ ಅಂತ್ಯ ಸಂಸ್ಕಾರ ಮಾಡಲು ವ್ಯವಸ್ಥೆ ಮಾಡುವಂತೆ ರಕ್ಷಣಾ ಸಚಿವಾಲಯವನ್ನು ಕೋರಿದೆ. ಎಲ್ಲಾ ರೀತಿಯ ಸರ್ಕಾರಿ ಗೌರವಗಳ ಜೊತೆ ಅಂತ್ಯಕ್ರಿಯೆ ನಡೆಸಲು ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ.
ಸ್ಮಾರಕ ನಿರ್ಮಿಸಲು ಕಾಂಗ್ರೆಸ್ ಮನವಿ
ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ನಡೆಯುವ ಸ್ಥಳದಲ್ಲೇ ಅವರ ಸ್ಮಾರಕ ನಿರ್ಮಾಣ ಮಾಡುವ ಸಾಧ್ಯತೆಯನ್ನು ಪರಿಶೀಲನೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ್ ಖರ್ಗೆ ಮನವಿ ಮಾಡಿದ್ದಾರೆ.
2004 ರಿಂದ 2014ರವರೆಗೆ ಯುಪಿಎ ಸರ್ಕಾರದಲ್ಲಿ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ದೇಶದ ಅಭಿವೃದ್ಧಿಗೆ ಹಲವು ಕೊಡುಗೆ ನೀಡಿದ್ದಾರೆ. 92 ವರ್ಷ ವಯಸ್ಸಾಗಿದ್ದ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು.
ಮಲ್ಲಿಕಾರ್ಜುನ್ ಖರ್ಗೆ ಪತ್ರ ಬರೆದಿದ್ದು, "ಡಾ. ಮನಮೋಹನ್ ಸಿಂಗ್ ಅವರ ಅಂತಿಮ ವಿಧಿ ವಿಧಾನಗಳನ್ನು ಶನಿವಾರ ನಡೆಸಲು ತೀರ್ಮಾನಿಸಿದ್ದು, ಅಂತ್ಯಕ್ರಿಯೆ ನಡೆಯುವ ಸ್ಥಳದಲ್ಲೇ ಸ್ಮಾರಕ ನಿರ್ಮಾಣಕ್ಕೆ ಮನವಿ ಮಾಡಿದ್ದೇನೆ" ಎಂದು ಮನವಿ ಮಾಡಿದ್ದು ಈ ಪತ್ರವನ್ನು ಕಾಂಗ್ರೆಸ್ ಎಕ್ಸ್ನಲ್ಲಿ ಹಂಚಿಕೊಂಡಿದೆ.
ಇದೇ ಜಾಗದಲ್ಲಿ ರಾಜಕಾರಣಿಗಳು ಮತ್ತು ಮಾಜಿ ಪ್ರಧಾನ ಮಂತ್ರಿಗಳ ಅಂತ್ಯಕ್ರಿಯೆಯ ಸ್ಥಳದಲ್ಲಿ ಸ್ಮಾರಕಗಳನ್ನು ಹೊಂದಿದೆ. ಸಂಪ್ರದಾಯವನ್ನು ಮುಂದುವರಿಸಬೇಕು ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
"ದೇಶವು ತೀವ್ರ ಆರ್ಥಿಕ ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿದ್ದಾಗ ಭಾರತವನ್ನು ಬಿಕ್ಕಟ್ಟಿನಿಂದ ಹೊರಬರುವಂತೆ ಮಾಡಿದರು. ದೇಶದ ಆರ್ಥಿಕ ಪರಿಸ್ಥಿತಿ ಸುಧಾರಿಸುವಲ್ಲಿ ಮತ್ತು ಸ್ಥಿರವಾದ ಅಭಿವೃದ್ಧಿ ಸಾಧಿಸುವಲ್ಲಿ ಅವರು ಮುಖ್ಯಪಾತ್ರ ವಹಿಸಿದರು. ದೇಶದ ಪ್ರಧಾನಿಯಾಗಿ ಅವರು ಮಾಡಿದ ಕೆಲಸಗಳು ಅವರನ್ನು ವಿಶ್ವದ ಪ್ರಮುಖ ರಾಜಕಾರಣಿಗಳ ಸಾಲಿನಲ್ಲಿ ನಿಲ್ಲಿಸಿದೆ ಎಂದು ಹೇಳಿದರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications