Mann Ki Baat 100 Episode: ರಾಜಕೀಯ ಭಾಷೆ ಬಳಸದೇ ಪ್ರಧಾನಿ ಜನರ ಧ್ವನಿಯಾಗಿದ್ದಾರೆ: HP ರಾಜ್ಯಪಾಲ
ನವದೆಹಲಿ, ಏಪ್ರಿಲ್ 28: ಪ್ರಧಾನಿ ನರೇಂದ್ರ ಮೋದಿಯವರ ಮನ್ ಕಿ ಬಾತ್ 100 ಸಂಚಿಕೆ ಪೂರೈಸಿದ್ದು, ಈ ಕಾರ್ಯಕ್ರಮವು ಭಾರತಕ್ಕೆ ಹೆಮ್ಮೆ ತಂದಿದೆ ಎಂದು ಹಿಮಾಚಲ ಪ್ರದೇಶದ ರಾಜ್ಯಪಾಲ ಶಿವ ಪ್ರತಾಪ್ ಶುಕ್ಲಾ ಅವರು ಸಂತೋಷ ವ್ಯಕ್ತಪಡಿಸಿದರು.
ಭಾನುವಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ತಿಂಗಳ ರೇಡಿಯೋ ಕಾರ್ಯಕ್ರಮ 'ಮನ್ ಕೀ ಬಾತ್ 100ನೇ ಸಂಚಿಕೆ'ಯನ್ನು ಶಿಮ್ಲಾದ ರಾಜಭವನದಲ್ಲಿ ಪ್ರದರ್ಶಿಸಲಾಯಿತು. ಈ ವೇಳೆ ಮನ್ ಕೀ ಬಾತ್ ವೀಕ್ಷಿಸಿದ ಬಳಿಕ ಮಾತನಾಡಿದ ಅವರು, ಪ್ರಧಾನಿಯವರು ಹಿಮಾಚಲ ಪ್ರದೇಶದ ಅಥವಾ ದೇಶದ ಇತರ ಭಾಗಗಳಿಗೆ ಸಂಬಂಧಿಸಿದ ವಿಷಯ ಹೇಳಿದರೂ ಅದನ್ನು ಸರ್ವರು ಕುತೂಹಲದಿಂದ ಕೇಳುತ್ತಾರೆ. ಈ ಕಾರ್ಯಕ್ರಮ ಆರಂಭದಿಂದಲೂ ಪ್ರಧಾನಿ ನರೇಂದ್ರ ಮೋದಿಯವರು ಜನರ ಧ್ವನಿಯಾಗಿದ್ದಾರೆ ಎಂದು ಅವರು ಶ್ಲಾಘಿಸಿದರು.

100 ಸಂಚಿಕೆ ಪೂರೈಸಿದ ಈ ಮನ್ ಕಿ ಬಾತ್ನಲ್ಲಿ ಪ್ರಧಾನಿ ಮೋದಿ ಯಾವುದೇ ರಾಜಕೀಯ ಭಾಷೆಯನ್ನು ಬಳಸಿಲ್ಲ ಎಂಬುದು ಗಮನಿಸಬೇಕಾದ ಸಂಗತಿ. ರಾಜಕೀಯ ಹೊರತಾಗಿ ಸಮಾಜದಲ್ಲಿ ಇದುವರೆಗೂ ಹೊರ ಬರದಂತಹ ವಿಶೇಷ ಸಾಧನೆ, ವಿಷಯ, ವ್ಯಕ್ತಿಯನ್ನು ಗುರುತಿಸುವಲ್ಲಿ ಅವರು ಕಾರ್ಯಕ್ರಮದ ಸಮಯ ಮೀಸಲಿಟ್ಟರು ಎಂದು ಹೇಳಿದರು.
ಇದು ಭಾರತದ ಹೆಮ್ಮೆಯ ಕ್ಷಣ
ಪ್ರಧಾನಮಂತ್ರಿಗಳು ಕಾರ್ಯಕ್ರಮ ಮೂಲಕ ಯಾವ ಪ್ರದೇಶಕ್ಕೆ ಪ್ರವಾಸ ಮಾಡಿದರೂ ಸಹ ಆ ಪ್ರದೇಶದ ಸಂಸ್ಕೃತಿಯನ್ನು ಅವರು ತಲುಪಿದ್ದಾರೆ. ಹಿಮಾಚಲ ಪ್ರದೇಶದಿಂದ ಡ್ರಗ್ಸ್ ನಿರ್ಮೂಲನೆ ಕುರಿತು, ಸಾವಯವ ಕೃಷಿ ಮತ್ತು ರಾಗಿ ಬಗ್ಗೆಯೂ ಅವರು ಮಾತನಾಡಿದ್ದಾರೆ. ವಿಶ್ವಸಂಸ್ಥೆಯಲ್ಲಿ ಮನ್ ಕಿ ಬಾತ್ 100ನೇ ಸಂಚಿಕೆಯ ಪ್ರಸಾರವಾಗಿದೆ ಎಂದರೆ ನಮ್ಮ ದೇಶವು ಎಲ್ಲಿಯವರೆಗೆ ತಲುಪಿದೆ ಎಂದು ಊಹಿಸಬಹುದು. ಇದು ಭಾರತಕ್ಕೆ ಹೆಮ್ಮೆಯ ಕ್ಷಣವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.
ಮನ್ ಕಿ ಬಾತ್ ಸರಣಿಯ 95 ನೇ ಸಂಚಿಕೆಯಲ್ಲಿ ಪ್ರಧಾನಿ ಪ್ರಸ್ತಾಪಿಸಿದ್ದ ಹಿಮಾಚಲ ಪ್ರದೇಶದ ಸೋಲನ್ ನಿವಾಸಿ ವಿಪುಲ್ ಗೋಯಲ್ ಅವರು ಮನ್ ಕಿ ಬಾತ್ ಸರಣಿಯ 100 ನೇ ಸಂಚಿಕೆಯಲ್ಲಿ 100 ಅತಿಥಿಗಳಲ್ಲಿ ಒಬ್ಬರಾಗಿದ್ದರು.

100ನೇ ಸಂಚಿಕೆಯ ಅತಿಥಿ ಪ್ರತಿಕ್ರಿಯೆ
ಈ ಕುರಿತು ಮಾತನಾಡಿದ ವಿಪುಲ್ ಗೋಯಲ್, ಪ್ರಧಾನಿ ಮೋದಿಯವರು ನನ್ನ ಗುರುತಿಸಿ, ನನ್ನ ಪ್ರಸ್ತಾಪಿಸಿದ್ದರಿಂದ ಹಾಗೂ ಈ ಸಂಚಿಕೆಯಲ್ಲಿ ಅತಿಥಿಗಳಾಗಿ ಆಯ್ಕೆ ಮಾಡಿದ್ದಕ್ಕೆ ಖಷಿ ಇದೆ. ಇದಕ್ಕೂ ಮೊದಲು ಜನರ ನನ್ನನ್ನು ಗುರುತಿಸುತ್ತಿರಲಿಲ್ಲ. ಇದೀಗ ಎಲ್ಲೆಡೆ ನನ್ನ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಅಚ್ಚರಿ ವ್ಯಕ್ತಪಡಿಸಿದರು.
ಮನ್ ಕಿ ಬಾತ್ ನ 100ನೇ ಸಂಚಿಕೆಯನ್ನು ದೇಶಾದ್ಯಂತ ಮತ್ತು ವಿಶ್ವಸಂಸ್ಥೆಯ ಪ್ರಧಾನ ಕಛೇರಿ ಸೇರಿದಂತೆ ವಿಶ್ವದ ವಿವಿಧ ಭಾಗಗಳಲ್ಲಿ ನೇರ ಪ್ರಸಾರವಾಯಿತು. 2014 ರ ಅಕ್ಟೋಬರ್ 3 ರಂದು ಪ್ರಾರಂಭವಾದ ಈ ಕಾರ್ಯಕ್ರಮವು ಮಹಿಳೆಯರು, ಯುವಕರು ಮತ್ತು ರೈತರು ಮತ್ತಿತರು ಅನೇಕ ಸಾಮಾಜಿಕ ಗುಂಪುಗಳಿಗೆ ಸಲಹೆಯಾಗಿ, ಆಧಾರವಾಗಿ ಶಕ್ತಿಯಾಗಿ ನಿಂತಿದೆ ಎಂದು ಹೇಳಲಾಗುತ್ತಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications