'ಮನ್ ಕಿ ಬಾತ್ ಜನರನ್ನು ಆರಾಧಿಸುವ ಒಂದು ಮಾರ್ಗ': 100 ನೇ ಸಂಚಿಕೆಯಲ್ಲಿ ಪ್ರಧಾನಿ ಮೋದಿ
ನವದೆಹಲಿ ಏಪ್ರಿಲ್ 30: ಪ್ರಸಾರ ಭಾರತಿಯ 'ಮನ್ ಕೀ ಬಾತ್' ಕಾರ್ಯಕ್ರಮಕ್ಕೆ ಇಂದು ಶತಕದ ಸಂಭ್ರಮ. ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ ರೇಡಿಯೋ ಕಾರ್ಯಕ್ರಮ "ಮನ್ ಕೀ ಬಾತ್" ನ 100 ನೇ ಸಂಚಿಕೆಯನ್ನು ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮ ಹಿಂದಿನ ಸಂಚಿಕೆಗಳಲ್ಲಿ ಕಾಣಿಸಿಕೊಂಡ ಅತಿಥಿಗಳನ್ನು ಒಳಗೊಂಡಿತ್ತು. ಅವರು ಮಾಡಿದ ಪ್ರಗತಿಯ ಕುರಿತು ಪ್ರಧಾನ ಮಂತ್ರಿ ಅವರೊಂದಿಗೆ ಸಂವಾದ ನಡೆಸಿದರು.
'ಮನ್ ಕೀ ಬಾತ್' ಕೋಟ್ಯಂತರ ಭಾರತೀಯರ ' ಮನ್ ಕೀ ಬಾತ್' ನ ಪ್ರತಿಬಿಂಬವಾಗಿದೆ. ಇದು ಅವರ ಭಾವನೆಗಳ ಅಭಿವ್ಯಕ್ತಿಯಾಗಿದೆ. ಜೊತೆಗೆ ಜನರನ್ನು ಆರಾಧಿಸುವ ಒಂದು ಮಾರ್ಗ ಎಂದು ಪ್ರಧಾನಮಂತ್ರಿ ತಮ್ಮ ಆರಂಭಿಕ ಭಾಷಣದಲ್ಲಿ ಹೇಳಿದರು.

'ಇದನ್ನು ಯಶಸ್ಸುಗೊಳಿಸಿದ್ದಕ್ಕಾಗಿ ದೇಶದ ಜನರಿಗೆ ಧನ್ಯವಾದಗಳು. ಮನ್ ಕೀ ಬಾತ್ ಹಲವಾರು ಜನ ಚಳುವಳಿಗಳನ್ನು ಹುಟ್ಟುಹಾಕುವಲ್ಲಿ ವೇಗವರ್ಧಕವಾಗಿದೆ. ಇದು 'ಹರ್ ಘರ್ ತಿರಂಗ' ಅಥವಾ 'ಕ್ಯಾಚ್ ದಿ ರೈನ್' ಆಗಿ ಬೆಳಿದಿದೆ. ಮನ್ ಕೀ ಬಾತ್ ಸಾಮೂಹಿಕ ಚಳುವಳಿಗಳಿಗೆ ವೇಗವನ್ನು ಪಡೆಯಲು ಅನುವು ಮಾಡಿಕೊಟ್ಟಿದೆ' ಎಂದು ಅವರು ಹೇಳಿದರು.
ಆತ್ಮನಿರ್ಭರ್ ಭಾರತ್ ಅನ್ನು ಉತ್ತೇಜಿಸುವುದರಿಂದ ಮೇಕ್ ಇನ್ ಇಂಡಿಯಾ ಮತ್ತು ಬಾಹ್ಯಾಕಾಶ ಸ್ಟಾರ್ಟ್ಅಪ್ಗಳವರೆಗೆ ಮನ್ ಕಿ ಬಾತ್ ವಿವಿಧ ಕ್ಷೇತ್ರಗಳಲ್ಲಿ ಪ್ರತಿಭಾವಂತ ವ್ಯಕ್ತಿಗಳ ಕಥೆಗಳನ್ನು ಪ್ರದರ್ಶಿಸಿದೆ. ಜೊತೆಗೆ ಇದು ಜನರೊಂದಿಗೆ ಸಂಪರ್ಕ ಸಾಧಿಸಿ ಅವರಿಗೆ ಪರಿಹಾರವನ್ನು ನೀಡಿದೆ.

"ನನಗೆ 'ಮನ್ ಕೀ ಬಾತ್' ದೇಶವಾಸಿಗಳ ಗುಣಗಳನ್ನು ಆರಾಧಿಸುವ ಒಂದು ಮಾರ್ಗ ಆಗಿದೆ" ಎಂದು ಪ್ರಧಾನಿ ಮೋದಿ ಹೇಳಿದರು.
ಮನ್ ಕೀ ಬಾತ್ ಅನ್ನು ಮೊದಲ ಬಾರಿಗೆ ಅಕ್ಟೋಬರ್ 3, 2014 ರಂದು ಪ್ರಸಾರ ಮಾಡಲಾಯಿತು. ಮನ್ ಕೀ ಬಾತ್ ನ 100ನೇ ಸಂಚಿಕೆಯ ಐತಿಹಾಸಿಕ ಕ್ಷಣವನ್ನು ಆಚರಿಸಲು ಬಿಜೆಪಿ ಆಡಳಿತವಿರುವ ರಾಜ್ಯಗಳು ವಿಸ್ತಾರವಾದ ವ್ಯವಸ್ಥೆಗಳನ್ನು ಮಾಡಿಕೊಂಡಿದ್ದವು. ಪಕ್ಷಗಳು ತಮ್ಮ ಕಚೇರಿಗಳು ಮತ್ತು ಬೂತ್ಗಳಲ್ಲಿ ಪ್ರಧಾನಿಯವರ ರೇಡಿಯೋ ಭಾಷಣವನ್ನು ಪ್ರಸಾರ ಮಾಡಿವೆ.
ಮಾತ್ರವಲ್ಲದೆ ಮನ್ ಕೀ ಬಾತ್ನ 100 ನೇ ಸಂಚಿಕೆಯನ್ನು ಗುರುತಿಸಲು ಪ್ರವಾಸೋದ್ಯಮ ಸಚಿವಾಲಯ "100 days of action" ಯನ್ನು ಘೋಷಿಸಿದೆ. ಇದು ಪ್ಲಾಸ್ಟಿಕ್ ವಸ್ತುಗಳಿಗೆ ಬದಲಿ ವಸ್ತುಗಳನ್ನು ಅಭಿವೃದ್ಧಿಪಡಿಸಲು ಉದ್ಯಮಿಗಳಿಗೆ ವಿನ್ಯಾಸ ಸವಾಲನ್ನು ಹಾಕುವ ಚಟುವಟಿಕೆಗಳು ಒಳಗೊಂಡಿದೆ.
ರೇಡಿಯೋ ಕಾರ್ಯಕ್ರಮ ಸ್ವಾವಲಂಬಿ ಭಾರತವನ್ನು ಸೃಷ್ಟಿಸುವಲ್ಲಿ ಸ್ಟಾರ್ಟ್-ಅಪ್ಗಳು ಮತ್ತು ಸಣ್ಣ ಉದ್ಯಮಗಳ ಪಾತ್ರವನ್ನು ಒತ್ತಿಹೇಳುತ್ತದೆ. ಇದು ಎಲ್ಲಾ ವಯಸ್ಸಿನ ಜನರಿಗೆ ಹೆಚ್ಚು ಮುಖ್ಯವಾದ ವಿಷಯಗಳನ್ನು ಮುಟ್ಟಿಸುವ ಮೂಲಕ ಪ್ರೋತ್ಸಾಹಿಸುತ್ತದೆ. ಲಂಡನ್ನಲ್ಲಿರುವ ಭಾರತೀಯ ಹೈಕಮಿಷನ್ ಮನ್ ಕಿ ಬಾತ್ನ 100 ನೇ ಸಂಚಿಕೆಯ ವಿಶೇಷ ಪ್ರದರ್ಶನವನ್ನು ಸಹ ಆಯೋಜಿಸುತ್ತದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ












Click it and Unblock the Notifications