ವಿದ್ಯಾರ್ಥಿಗಳಿಗೆ ಮೋದಿ, ಸಚಿನ್, ಆನಂದ್ ಕಿವಿಮಾತು
ನವದೆಹಲಿ, ಫೆ. 28: ಭಾರತದ ಹೆಮ್ಮೆಯ ಕ್ರೀಡಾಪಟುಗಳಾದ ಕ್ರಿಕೆಟರ್ ಸಚಿನ್ ತೆಂಡೂಲ್ಕರ್ ಹಾಗೂ ಚೆಸ್ ಚತುರ ವಿಶ್ವನಾಥ್ ಆನಂದ್ ಅವರು ಪ್ರಧಾನಿ ಮೋದಿ ಅವರ 'ಮನ್ ಕಿ ಬಾತ್' ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಭಾನುವಾರ ಪ್ರಸಾರವಾದ 17ನೇ ಆವೃತ್ತಿಯ ಮನದ ಮಾತಿನಲ್ಲಿ ಪರೀಕ್ಷೆ ಎದುರಿಸುವ ವಿದ್ಯಾರ್ಥಿಗಳಿಗೆ ಕಿವಿಮಾತುಗಳಿವೆ.
ಸೆಂಟ್ರಲ್ ಬೋರ್ಡ್ ಸೆಕೆಂಡರಿ ಎಕ್ಸಾಅಮಿನೇಷನ್ (ಸಿಬಿಎಸ್ ಇ) 12ನೇ ಬೋರ್ಡ್ ಪರೀಕ್ಷೆ ಮಾರ್ಚ್ 1 ರಿಂದ ಏಪ್ರಿಲ್ 24 ರತನಕ ಹಾಗೂ ಮಾರ್ಚ್ 1 ರಿಂದ 10ನೇ ತರಗತಿ ಪರೀಕ್ಷೆಗಳು ಆರಂಭವಾಗಿ ಮಾರ್ಚ್ 28ರಂದು ಕೊನೆಗೊಳ್ಳಲಿದೆ.
ಇಲ್ಲಿ ತನಕ ಮೋದಿ ಅವರು ಮಾದಕ ವ್ಯಸನಿಗಳು, ರೈತರ ಸಮಸ್ಯೆ, ಭ್ರಷ್ಟಾಚಾರ, ಗಂಡು-ಹೆಣ್ಣು ಅನುಪಾತ, ಖಾದಿ, ರಸ್ತೆ ಅಪಘಾತ ಮುಂತಾದ ವಿಷಯಗಳ ಬಗ್ಗೆ ಮಾತನಾಡಿದ್ದಾರೆ.

ಸಚಿನ್ ತೆಂಡೂಲ್ಕರ್ : ಸಾಧಿಸಬಹುದಾದ ಗುರಿಯನ್ನು ಇಟ್ಟುಕೊಂಡು ಅದರತ್ತ ಹೆಜ್ಜೆ ಇರಿಸಿ. ನಾನು ಕ್ರಿಕೆಟ್ ಆಡುವಾಗ ಜನರಲ್ಲಿ ನನ್ನ ಆಟದ ಬಗ್ಗೆ ಹೆಚ್ಚಿನ ನಿರೀಕ್ಷೆ ಇರುತಿತ್ತು. ಆತ್ಮವಿಶ್ವಾಸದಿಂದ ಎಲ್ಲವನ್ನು ಎದುರಿಸುವುದನ್ನು ಕಲಿತುಕೊಳ್ಳಿ ಎಂದು ಸಚಿನ್ ಹೇಳಿದರು.
ನೀವು ನಿಮ್ಮ ಗುರಿಯತ್ತ ಸಾಗುತ್ತಿರುವ ಬಗ್ಗೆ ನಿಮ್ಮನ್ನು ನೀವು ಪರೀಕ್ಷಿಸಿಕೊಳ್ಳಲು ಕಾಲಕಾಲಕ್ಕೆ ಇಂಥ ಪರೀಕ್ಷೆಗಳು ಅಗತ್ಯ. ಸಚಿನ್ ಅವರ ಸಲಹೆ ನಿಮಗೆ ಬಲ ನೀಡಲಿ ಎಂದು ಪ್ರಧಾನಿ ಮೋದಿ ಹೇಳಿದರು.

ವಿಶ್ವನಾಥನ್ ಆನಂದ್: ತಾಳ್ಮೆಯಿಂದಿರಿ, ಒಳ್ಳೆ ಊಟ, ಒಳ್ಳೆ ನಿದ್ದೆ ಮಾಡಿ. ತಲೆಗೆ ಜಾಸ್ತಿ ಕೆಲಸ ಕೊಡಬೇಡಿ. ಕೊನೆ ಕ್ಷಣದಲ್ಲಿ ಒತ್ತಡ ಹೇರಿದರೆ ಕಲಿತ ಪಾಠವೆಲ್ಲ ಮರೆತು ಹೋಗುವ ಸಾಧ್ಯತೆ ಇರುತ್ತದೆ. ಪ್ರತಿದಿನ ಓದುವ ಅಭ್ಯಾಸ ಇರಿಸಿಕೊಂಡರೆ ಯಾವುದು ಸಮಸ್ಯೆ ಎನಿಸುವುದಿಲ್ಲ. ನಾನು ಚೆಸ್ ಪಂದ್ಯಗಳಿಗೆ ಇದೇ ರೀತಿ ಅಭ್ಯಾಸ ಮಾಡಿಕೊಳ್ಳುತ್ತೇನೆ.
-
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು












Click it and Unblock the Notifications