ಪರಿಕ್ಕರ್ ಪ್ರಮಾಣ ವಚನಕ್ಕೆ ಅಮಿತ್ ರಾಜನಾಥ್ ನಿತಿನ್
ಪಣಜಿ, ಮಾರ್ಚ್ 13 : ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು ತಮ್ಮ ಹುದ್ದೆಗೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ.
ಅವರು ಮಂಗಳವಾರ ಸಂಜೆ 5.30ಕ್ಕೆ ಗೋವಾದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಸಮಾರಂಭದಲ್ಲಿ ಬಿಜೆಪಿಯ ಹಿರಿಯ ನಾಯಕರುಗಳಾದ ಅಮಿತ್ ಶಾ, ರಾಜನಾಥ್ ಸಿಂಗ್, ನಿತಿನ್ ಗಡ್ಕರಿ ಮುಂತಾದವರು ಭಾಗವಹಿಸಲಿದ್ದಾರೆ ಎಂದು ಮನೋಹರ್ ಪರಿಕ್ಕರ್ ಅವರು ತಿಳಿಸಿದ್ದಾರೆ.[ಗೋವಾ ಮುಖ್ಯಮಂತ್ರಿಯಾಗಿ ಪರಿಕ್ಕರ್ ಮಂಗಳವಾರ ಪ್ರಮಾಣ]

ಕೇಂದ್ರದಲ್ಲಿ ಅತ್ಯಂತ ಮಹತ್ವದ ಹುದ್ದೆ ಅಲಂಕರಿಸಿದ್ದ ಮನೋಹರ್ ಪರಿಕ್ಕರ್ ಅವರು ರಾಜೀನಾಮೆ ಸಲ್ಲಿಸಿದ ನಂತರ, ಪಣಜಿಗೆ ಬಂದು ತಮ್ಮ ಪಕ್ಷದ ನಾಯಕರು ಮತ್ತು ಕಾರ್ಯಕರ್ತರೊಡನೆ ಓಕುಳಿಯಾಟ ಆಡಿದ್ದಾರೆ. ಹಣೆಗೆ ತಿಲಕವಿಟ್ಟು ಬಣ್ಣದಾಟವಾಡಿದ ಅವರು, ಉತ್ತರಪ್ರದೇಶದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರು. [ಅಂತಿಮ ಫಲಿತಾಂಶ: ಗೋವಾ ಅತಂತ್ರ, ಮುಂದೇನಾಗಬಹುದು?]
2000ರಲ್ಲಿ ಮೊದಲನೇ ಬಾರಿ (ಒಂದೂವರೆ ವರ್ಷ) ಮತ್ತು 2012ರಲ್ಲಿ ಎರಡನೇ ಬಾರಿ (ಎರಡು ವರ್ಷ) ಗೋವಾದ ಮುಖ್ಯಮಂತ್ರಿಯಾಗಿದ್ದ ಮನೋಹರ್ ಪರಿಕ್ಕರ್ ಅವರು ಈಗ ಮೂರನೇ ಬಾರಿ ರಾಜ್ಯದ ಆಡಳಿತದ ಚುಕ್ಕಾಣಿಯನ್ನು ಹಿಡಿಯಲಿದ್ದಾರೆ.
ಪರಿಕ್ಕರ್ ಅವರು ಕೇಂದ್ರ ರಕ್ಷಣಾ ಸಚಿವರಾಗಿ ರಾಜೀನಾಮೆ ಸಲ್ಲಿಸುತ್ತಿದ್ದಂತೆ ಮುಂದಿನ ರಕ್ಷಣಾ ಸಚಿವರಾರು ಎಂಬ ಪ್ರಶ್ನೆ ಉದ್ಭವವಾಗಿದೆ. ನರೇಂದ್ರ ಮೋದಿ ಸರಕಾರದಲ್ಲಿ ಪರಿಕ್ಕರ್ ಅವರಿಗೂ ಮೊದಲು ವಿತ್ತ ಸಚಿವರಾಗಿರುವ ಅರುಣ್ ಜೇಟ್ಲಿಯವರು ಆ ಹುದ್ದೆಯನ್ನು ಅಲಂಕರಿಸಿದ್ದರು. ಇದೀಗ ಬಂದ ಮಾಹಿತಿ ಪ್ರಕಾರ, ಜೇಟ್ಲಿ ಅವರಿಗೆ ರಕ್ಷಣಾ ಖಾತೆಯ ಹುಚ್ಚುವರಿ ಜವಾಬ್ದಾರಿ ವಹಿಸಲಾಗಿದೆ. [ಗೋವಾದಲ್ಲಿ ಬಿಜೆಪಿ ಬಂದ್ರೆ ಮುಖ್ಯಮಂತ್ರಿ ಯಾರು? ಪರಿಕ್ಕರ್ ನಡೆ ನಿಗೂಢ]
ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಅವರು, ಗೋವಾದಲ್ಲಿ ಹಣಬಲವೇ ಗೆದ್ದಿದೆ ಮತ್ತು ಜನರ ಶಕ್ತಿಯನ್ನು ಹೊಸಕಿ ಹಾಕಿದೆ ಎಂದು ಗೋವಾದಲ್ಲಿ ನಡೆಯುತ್ತಿರುವ ವಿದ್ಯಮಾನವನ್ನು ವಿಶ್ಲೇಷಿಸಿದ್ದಾರೆ.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications